Advertisement
ಸುದ್ದಿಗಳು

ವಂದೇ ಭಾರತ್ ರೈಲು ಓಡಿಸಿದ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ : ಸುರೇಖಾ ಯಾದವ್ ದೇಶದ ಹೆಮ್ಮೆ

Share

ಮಹಿಳೆಯರು ಯಾವುದೇ ಕ್ಷೇತ್ರವಾದರೂ ಸೈ. ತಮ್ಮ ಸಾಮರ್ಥ್ಯವನ್ನು ತೋರಿಸಲು ಸಿದ್ಧ. ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Advertisement
Advertisement

ಈ ಕುರಿತು ಕೇಂದ್ರ ರೈಲ್ವೆ ಸಚಿವಾಲಯ ಮಾಹಿತಿ ನೀಡಿದ್ದು, ಮುಂಬೈನ ಸೊಲ್ಲಾಪುರ ನಿಲ್ದಾಣ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಸೆಮಿ ಹೈಸ್ಪೀಡ್ ರೈಲನ್ನು ಸುರೇಖಾ ಯಾದವ್ ಅವರು ಪೈಲಟ್ ಮಾಡಿದರು. ರೈಲು ಮಾರ್ಚ್ 13 ರಂದು ಸರಿಯಾದ ಸಮಯಕ್ಕೆ ಸೊಲ್ಲಾಪುರ ನಿಲ್ದಾಣದಿಂದ ಹೊರಟಿತು ಮತ್ತು ನಿಗದಿತ ಸಮಯಕ್ಕೆ ಆಗಮನಕ್ಕೆ ಐದು ನಿಮಿಷಗಳ ಮೊದಲು CSMT ತಲುಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

450-ಕಿಮೀ ದೂರದ ಪ್ರಯಾಣವನ್ನು ಪೂರ್ಣಗೊಳಿಸಿದ ನಂತರ, ಸುರೇಖಾ ಯಾದವ್ ಅವರನ್ನು CSMT ನಲ್ಲಿ ಪ್ಲಾಟ್‌ಫಾರ್ಮ್ ಸಂಖ್ಯೆ 8 ರಲ್ಲಿ ಸನ್ಮಾನಿಸಲಾಯಿತು. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ  ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ‘ವಂದೇ ಭಾರತ್ – ನಾರಿ ಶಕ್ತಿಯಿಂದ ನಡೆಸಲ್ಪಡುತ್ತಿದೆ. ಶ್ರೀಮತಿ ಸುರೇಖಾ ಯಾದವ್, ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್” ಎಂದು ಟ್ವೀಟ್ ಮಾಡಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್ ಆಗುವ ಮೂಲಕ ಸುರೇಖಾ ಯಾದವ್ ತಮ್ಮ ಕೇಂದ್ರ ರೈಲ್ವೆಯ ಹಿರಿಮೆಗೆ ಮತ್ತೊಂದು ಗರಿಯನ್ನು ಮೂಡಿಸಿಕೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಹೇಳಿದೆ.

Advertisement

ವೇಗದ ರೈಲು, ಸುಧಾರಿತ ತಂತ್ರಜ್ಞಾನ: ಸುರೇಖಾ ಯಾದವ್
ಅತ್ಯಾಧುನಿಕ ವಂದೇ ಭಾರತ್ ರೈಲು ಚಾಲನೆಯ ಮೊದಲ ಅನುಭವದ ಬಗ್ಗೆ ಸುರೇಖಾ ಯಾದವ್ ಅವರನ್ನು ಕೇಳಿದಾಗ, “ವಂದೇ ಭಾರತ್ ವೇಗದ ರೈಲು, ಸುಧಾರಿತ ತಂತ್ರಜ್ಞಾನವನ್ನು ಹೊಂದಿದೆ. ಆದ್ದರಿಂದ ಸಾಂಪ್ರದಾಯಿಕ ರೈಲುಗಳಿಗೆ ಹೋಲಿಸಿದರೆ ಹೆಚ್ಚು ಜಾಗರೂಕತೆಯ ಅಗತ್ಯವಿದೆ. ವಂದೇ ಭಾರತ್ ರೈಲನ್ನು ಚಲಾಯಿಸಲು ನೀಡಿದ ಅವಕಾಶಕ್ಕಾಗಿ ಅವರು ಕೃತಜ್ಞತೆ” ಎಂದು ಹೇಳಿದ್ದಾರೆ.

ಯಾರು ಈ ಸುರೇಖಾ ಯಾದವ್?: 
ಪಶ್ಚಿಮ ಮಹಾರಾಷ್ಟ್ರದ ಸತಾರಾ ಮೂಲದವರಾಗಿರುವ ಸುರೇಖಾ ಯಾದವ್ ಅವರು 1988 ರಲ್ಲಿ ಭಾರತದ ಮೊದಲ ಮಹಿಳಾ ರೈಲು ಚಾಲಕರಾದರು. ಇಲಾಖೆಯಲ್ಲಿ ಅವರು ಸಲ್ಲಿಸಿರುವ ಸೇವೆ ಮತ್ತು ಸಾಧನೆಗಾಗಿ ಈವರೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅವರು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಸುರೇಖಾ ಅವರು ಸೆಂಟ್ರಲ್ ರೈಲ್ವೆಗೆ ಸೇರುವ ಮೊದಲು ಎಲೆಕ್ನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವನ್ನು ಪಡೆದಿದ್ದರು. ವಂದೇ ಭಾರತ್ ರೈಲಿನಲ್ಲಿ ಚಾಲಕರಾಗಿ ನಿಯೋಜನೆಗೊಳ್ಳುವ ಮೊದಲು, ಅವರು ಫೆಬ್ರವರಿ 2023 ರಲ್ಲಿ ರೈಲ್ವೇ ಇನ್ಸಿಟ್ಯೂಟ್ ವಡೋದರಾದಲ್ಲಿ ತರಬೇತಿ ಪೂರ್ಣಗೊಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

5 mins ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

34 mins ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

54 mins ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

1 hour ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

4 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

6 hours ago