Advertisement
ಸುದ್ದಿಗಳು

ವಂದೇ ಭಾರತ್ ರೈಲು ಓಡಿಸಿದ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ : ಸುರೇಖಾ ಯಾದವ್ ದೇಶದ ಹೆಮ್ಮೆ

Share

ಮಹಿಳೆಯರು ಯಾವುದೇ ಕ್ಷೇತ್ರವಾದರೂ ಸೈ. ತಮ್ಮ ಸಾಮರ್ಥ್ಯವನ್ನು ತೋರಿಸಲು ಸಿದ್ಧ. ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಕುರಿತು ಕೇಂದ್ರ ರೈಲ್ವೆ ಸಚಿವಾಲಯ ಮಾಹಿತಿ ನೀಡಿದ್ದು, ಮುಂಬೈನ ಸೊಲ್ಲಾಪುರ ನಿಲ್ದಾಣ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಸೆಮಿ ಹೈಸ್ಪೀಡ್ ರೈಲನ್ನು ಸುರೇಖಾ ಯಾದವ್ ಅವರು ಪೈಲಟ್ ಮಾಡಿದರು. ರೈಲು ಮಾರ್ಚ್ 13 ರಂದು ಸರಿಯಾದ ಸಮಯಕ್ಕೆ ಸೊಲ್ಲಾಪುರ ನಿಲ್ದಾಣದಿಂದ ಹೊರಟಿತು ಮತ್ತು ನಿಗದಿತ ಸಮಯಕ್ಕೆ ಆಗಮನಕ್ಕೆ ಐದು ನಿಮಿಷಗಳ ಮೊದಲು CSMT ತಲುಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

450-ಕಿಮೀ ದೂರದ ಪ್ರಯಾಣವನ್ನು ಪೂರ್ಣಗೊಳಿಸಿದ ನಂತರ, ಸುರೇಖಾ ಯಾದವ್ ಅವರನ್ನು CSMT ನಲ್ಲಿ ಪ್ಲಾಟ್‌ಫಾರ್ಮ್ ಸಂಖ್ಯೆ 8 ರಲ್ಲಿ ಸನ್ಮಾನಿಸಲಾಯಿತು. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ  ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ‘ವಂದೇ ಭಾರತ್ – ನಾರಿ ಶಕ್ತಿಯಿಂದ ನಡೆಸಲ್ಪಡುತ್ತಿದೆ. ಶ್ರೀಮತಿ ಸುರೇಖಾ ಯಾದವ್, ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್” ಎಂದು ಟ್ವೀಟ್ ಮಾಡಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್ ಆಗುವ ಮೂಲಕ ಸುರೇಖಾ ಯಾದವ್ ತಮ್ಮ ಕೇಂದ್ರ ರೈಲ್ವೆಯ ಹಿರಿಮೆಗೆ ಮತ್ತೊಂದು ಗರಿಯನ್ನು ಮೂಡಿಸಿಕೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಹೇಳಿದೆ.

Advertisement

ವೇಗದ ರೈಲು, ಸುಧಾರಿತ ತಂತ್ರಜ್ಞಾನ: ಸುರೇಖಾ ಯಾದವ್
ಅತ್ಯಾಧುನಿಕ ವಂದೇ ಭಾರತ್ ರೈಲು ಚಾಲನೆಯ ಮೊದಲ ಅನುಭವದ ಬಗ್ಗೆ ಸುರೇಖಾ ಯಾದವ್ ಅವರನ್ನು ಕೇಳಿದಾಗ, “ವಂದೇ ಭಾರತ್ ವೇಗದ ರೈಲು, ಸುಧಾರಿತ ತಂತ್ರಜ್ಞಾನವನ್ನು ಹೊಂದಿದೆ. ಆದ್ದರಿಂದ ಸಾಂಪ್ರದಾಯಿಕ ರೈಲುಗಳಿಗೆ ಹೋಲಿಸಿದರೆ ಹೆಚ್ಚು ಜಾಗರೂಕತೆಯ ಅಗತ್ಯವಿದೆ. ವಂದೇ ಭಾರತ್ ರೈಲನ್ನು ಚಲಾಯಿಸಲು ನೀಡಿದ ಅವಕಾಶಕ್ಕಾಗಿ ಅವರು ಕೃತಜ್ಞತೆ” ಎಂದು ಹೇಳಿದ್ದಾರೆ.

ಯಾರು ಈ ಸುರೇಖಾ ಯಾದವ್?: 
ಪಶ್ಚಿಮ ಮಹಾರಾಷ್ಟ್ರದ ಸತಾರಾ ಮೂಲದವರಾಗಿರುವ ಸುರೇಖಾ ಯಾದವ್ ಅವರು 1988 ರಲ್ಲಿ ಭಾರತದ ಮೊದಲ ಮಹಿಳಾ ರೈಲು ಚಾಲಕರಾದರು. ಇಲಾಖೆಯಲ್ಲಿ ಅವರು ಸಲ್ಲಿಸಿರುವ ಸೇವೆ ಮತ್ತು ಸಾಧನೆಗಾಗಿ ಈವರೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅವರು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಸುರೇಖಾ ಅವರು ಸೆಂಟ್ರಲ್ ರೈಲ್ವೆಗೆ ಸೇರುವ ಮೊದಲು ಎಲೆಕ್ನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವನ್ನು ಪಡೆದಿದ್ದರು. ವಂದೇ ಭಾರತ್ ರೈಲಿನಲ್ಲಿ ಚಾಲಕರಾಗಿ ನಿಯೋಜನೆಗೊಳ್ಳುವ ಮೊದಲು, ಅವರು ಫೆಬ್ರವರಿ 2023 ರಲ್ಲಿ ರೈಲ್ವೇ ಇನ್ಸಿಟ್ಯೂಟ್ ವಡೋದರಾದಲ್ಲಿ ತರಬೇತಿ ಪೂರ್ಣಗೊಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

5 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

5 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

5 hours ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

2 days ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

2 days ago