Advertisement
ಸುದ್ದಿಗಳು

#HealthTips | ಬೆಲೆಯಲ್ಲಿ ಅಲ್ಲ ಪೋಷಕಾಂಶಗಳ ದುಬಾರಿ ಹಣ್ಣು| ಪ್ರಕೃತಿಯ ವಿಶೇಷ ಕೊಡುಗೆ ಸೀತಾಫಲ |

Share

ಕೃಷಿತೋ ನಾಸ್ತಿ ದುರ್ಭಿಕ್ಷಂ ಅನ್ನುವ ಮಾತಿದೆ. ಇದು ನಿಜ ಕೂಡ. ಲಾಭ ಬರದೇ ಇರಬಹುದು.. ಆದರೆ ನಿಶ್ಚಿಂತೆಯಿಂದ ಬದುಕುವ ದಾರಿ ತೋರಿಸುತ್ತದೆ. ಹಾಗಾಗಿ ಯಾವ ಬೆಳೆ ಬೆಳೆದರು ಮೋಸ ಇಲ್ಲ. ಅಂತಹದ್ದರಲ್ಲಿ ಸೀತಾಫಲ ಹಣ್ಣು ಕೂಡ ಒಂದು ಲಾಭದಾಯಕ ಬೆಳೆ. ಸತ್ವಭರಿತ ಹಣ್ಣು ಕೂಡಾ ಹೌದು.

ರುಚಿಕರವಾಗಿರುವ ರಾಮಫಲ, ಸೀತಾಫಲ, ಹನುಮಫಲ, ಲಕ್ಷ್ಮಣ ಫಲ ಹಣ್ಣುಗಳ ಬಗ್ಗೆ ಕೇಳಿಯೇ ಇರುತ್ತೀರಿ. ಬಹಳ ಜನ ಸೀತಫಲ ಅಂತು ತಿಂದಿರುತ್ತೀರಿ. ಇನ್ನು ರಾಮಫಲ ನಮ್ಮ ಕರಾವಳಿ ಕಡೆ ಸರ್ವೆ ಸಾಮಾನ್ಯ ಹಿತ್ತಲ ಗಿಡವಾಗಿ ಬೆಳೆದಿರುತ್ತದೆ.

ಈ ಎಲ್ಲಾ ಫಲಗಳು ಕ್ಯಾನ್ಸರ್ ಗೆ ಬಹಳ ಉಪಯುಕ್ತ ಹಣ್ಣುಗಳು. ಹಾಗಾಗಿ ಹೆಚ್ಚಿನ ಮನೆಯಲ್ಲಿ ಇತ್ತೀಚೆಗೆ ಬೆಳೆಯುತ್ತಿದ್ದಾರೆ. ಆದರೆ ತೋಟಗಾರಿಕಾ ಬೆಳೆಯಾಗಿ ಹೆಚ್ಚು ಪ್ರಸಿದ್ದಿ ಪಡೆದದ್ದು ಸೀತಾಫಲ. ಈ ಹಣ್ಣು  ಸೇವನೆಯಿಂದ ಉಂಟಾಗುವ ಅನುಕೂಲಗಳು ಅನೇಕ. ಹಾಗಾಗಿ ಈ ಹಣ್ಣಿನ ಕಾಲ ಬಂತೆಂದರೆ ಹಣ್ಣಿನ ಅಂಗಡಿಗಳಲ್ಲಿ ಇದರದ್ದೇ ಕಾರುಬಾರು. ತಿನ್ನಲು ರುಚಿಯೂ ಹಾಗೆ ಇದೆ.. ಈ ಹಣ್ಣು ತಿನ್ನೋದ್ರಿಂದ ಏನೆಲ್ಲಾ ಲಾಭ ಇದೆ ಅನ್ನೋದನ್ನ ಓದಿ ನೋಡಿ

# ಸೀತಾಫಲದಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಹಾಗೂ ಆ್ಯಂಟಿ ಆಕ್ಸಿಡೆಂಟುಗಳಿದ್ದು ದೇಹಕ್ಕೆ ಎರಗುವ ಫ್ರೀ ರ್‍ಯಾಡಿಕಲ್ ಎಂಬ ಕ್ಯಾನ್ಸರ್ ಕಾರಕ ಕಣಗಳಿಂದ ರಕ್ಷಿಸುತ್ತದೆ. ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ.

# ಇದರಲ್ಲಿ ಪೊಟ್ಯಾಶಿಯಂ ಮತ್ತು ಮೆಗ್ನೀಶಿಯಂ ಸಹಾ ಉತ್ತಮ ಪ್ರಮಾಣದಲ್ಲಿದ್ದು ಹೃದಯದ ಕ್ಷಮತೆ ಹೆಚ್ಚಿಸಿ ಹೃದಯಸಂಬಂಧಿ ತೊಂದರೆಗಳಿಂದ ರಕ್ಷಿಸುತ್ತದೆ.

# ದೇಹದ ಆರೋಗ್ಯ ಕಾಪಾಡುವ ಹಣ್ಣುಗಳಲ್ಲಿ ಒಂದಾಗಿರುವ ಸೀತಾಫಲದಲ್ಲಿ ಹಲವಾರು ಪೋಷಕಾಂಶಗಳಿವೆ. ವಿಶೇಷವಾಗಿ ವಿಟಮಿನ್ ಸಿ ಮತ್ತು ಆ್ಯಂಟಿ ಆಕ್ಸಿಡೆಂಟುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.

# ಇದರಲ್ಲಿರುವ ಉತ್ತಮ ಪ್ರಮಾಣದ ಕಾರ್ಬೋಹೈಡ್ರೇಟುಗಳು, ಪೊಟ್ಯಾಶಿಯಂ, ಕರಗುವ ನಾರು ಹಾಗೂ ಇತರ ಅವಶ್ಯಕ ವೈಟಮಿನ್ನುಗಳು ಮತ್ತು ಖನಿಜಗಳು ಇದನ್ನೊಂದು ಪರಿಪೂರ್ಣ ಆಹಾರವಾಗಿಸಿವೆ.

# ಇದರಲ್ಲಿ ಯಾವುದೇ ಬಗೆಯ ಕೊಲೆಸ್ಟ್ರಾಲ್ ಅಥವಾ ಕೊಬ್ಬು ಇರುವುದಿಲ್ಲ. ಅಪಾಯಕಾರಿ ಸೋಡಿಯಂ ಸಹಾ ಅತಿ ಕಡಿಮೆ ಇದೆ.

# ಸೀತಾಫಲದಲ್ಲಿ ವಿಶೇಷವಾಗಿ ‘ವಿಟಮಿನ್ B6’ ಇದೆ. ಇತರ ಆಹಾರದ ಮೂಲಕ ಅತಿ ಅಪರೂಪದಲ್ಲಿ ಸಿಗುವ ಈ ವಿಟಮಿನ್ ಮೆದುಳಿಗೆ ಅಗತ್ಯವಾದ ನ್ಯೂರೋಟ್ರಾನ್ಸ್ ಮಿಟರ್ ಅಥವಾ ನರಸಂಕೇತಗಳನ್ನು ಕೊಂಡೊಯ್ಯುವ ಡೋಪಮೈನ್ ಮತ್ತು ಸೆರೆಟೋನಿನ್ ಉತ್ಪಾದನೆಗೆ ಅಗತ್ಯವಾಗಿದೆ.

# ಇದರಲ್ಲಿರುವ ಅತಿಸೂಕ್ಷ್ಮ ಪೋಷಕಾಂಶಗಳು ವಿಶೇಷವಾಗಿ ತ್ವಚೆಗೆ ಹೆಚ್ಚಿನ ಆರೈಕೆ ನೀಡುತ್ತದೆ.

# ಕಣ್ಣು ಮತ್ತು ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು.

# ರಕ್ತದಲ್ಲಿ ಹೀಮೋಗ್ಲೋಬಿನ್ ಮಟ್ಟಗಳನ್ನು ಹೆಚ್ಚಿಸುತ್ತದೆ.

# ಕ್ಯಾನ್ಸರ್ ಮತ್ತು ಹೃದ್ರೋಗಳನ್ನು ನಿಯಂತ್ರಿಸುತ್ತದೆ.

# ಸೀತಾಫಲದಲ್ಲಿ ಪ್ರಬಲ ಉರಿಯೂತ ನಿವಾರಕ ಗುಣವಿದೆ. ಇದು ದೇಹವನ್ನು ಹಲವಾರು ಸೋಂಕುಗಳಿಂದ ರಕ್ಷಿಸುತ್ತದೆ.

# ಚರ್ಮವನ್ನು ಕಾಂತಿಯುಕ್ತಗೊಳಿಸುವ ಜೊತೆಗೆ ಚರ್ಮದ ಸೌಂದರ್ಯ ಹೆಚ್ಚಿಸುತ್ತದೆ.

# ಸೀತಾಫಲದ ಸೇವನೆಯಿಂದ ಚರ್ಮದಲ್ಲಿ ನೆರಿಗೆ ಮೂಡುವ ಮತ್ತು ಕಲೆಗಳು ಬೀಳುವ ಸಾಧ್ಯತೆ ಇಲ್ಲವಾಗುತ್ತದೆ.
ಇದಕ್ಕೆಲ್ಲಾ ಇದರಲ್ಲಿರುವ ವಿಟಮಿನ್ ಸಿ ಕಾರಣ. ಇದು ಕ್ಯಾನ್ಸರ್ ಕಾರಕ ಫ್ರೀ ರ್‍ಯಾಡಿಕಲ್ ಎಂಬ ಕಣಗಳ ವಿರುದ್ದ ಹೋರಾಡುತ್ತದೆ.

# ಸೀತಾಫಲ ಹಣ್ಣಿನ ತಿರುಳನ್ನು ಫೇಸ್ ಪ್ಯಾಕ್ ಆಗಿಯೂ ಉಪಯೋಗಿಸುತ್ತಾರೆ. ಸೀತಾಫಲ ಹಣ್ಣಿನ ಫೇಸ್ ಪ್ಯಾಕ್ ಮಾರುಕಟ್ಟೆಯಲ್ಲಿ ದೊರೆಯುತ್ತವೆ.

(ವಾಟ್ಸ್ ಆಪ್ ಕೃಪೆ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

4 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

11 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

17 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago