ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

February 24, 2026
6:51 AM
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ ನೆರವೇರಿದ್ದು, ಭಕ್ತರಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಉತ್ತೇಜನ ಸಿಕ್ಕಿದೆ.

ಸುರುಳಿ ಪೆರಾಬೆಯ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಪರಂಪರೆಯನ್ನು ಉತ್ತೇಜಿಸುವ ಉದ್ದೇಶದಿಂದ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿಯ ಉದ್ಘಾಟನಾ ಕಾರ್ಯಕ್ರಮವು ಈಚೆಗೆ ಶ್ರೀ ಕ್ಷೇತ್ರದ ಸಭಾಭವನದಲ್ಲಿ ನೆರವೇರಿತು.

Advertisement

ಕಾರ್ಯಕ್ರಮದಲ್ಲಿ ಶ್ರೀನಿಧಿ ಅರ್ಚಕರಿಂದ ದೇವತಾ ಪ್ರಾರ್ಥನೆ ನೆರವೇರಿಸಲಾಯಿತು. ಸತೀಶ್ ಗೌಡ ಪುಂಜ ಅವರು ಸ್ವಾಗತಿಸಿದರು. ಬಳಿಕ ಟ್ರಸ್ಟ್ ಅಧ್ಯಕ್ಷ ಕೃಷ್ಣಕುಮಾರ್ ಅತ್ರಿಜಾಲ ಅವರು ಪ್ರಸ್ತಾವಿಕ ಭಾಷಣ ಮಾಡಿ ಭಜನಾ ಮಂಡಳಿಯ ಅಗತ್ಯತೆ ಮತ್ತು ಮಹತ್ವವನ್ನು ವಿವರಿಸಿದರು.

ಅತಿಥಿಗಳಾದ ರಾಧಾಕೃಷ್ಣ ಮನವಳಿಕೆ, ಸಂಜೀವ ರೈ ಪರಾರಿ ಹಾಗೂ ಕುಶಾಲಪ್ಪ ಗೌಡ ಸುರುಳಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಭಜನಾ ಮಂಡಳಿಯನ್ನು ಉದ್ಘಾಟಿಸಿದರು.  ಭಜನಾ ಮಂಡಳಿ ಅಧ್ಯಕ್ಷರಾಗಿ  ದಾಮೋದರ ಗೌಡ ಮಾಯಿಲ್ಗ ಅವರು ಸಭಾಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಖಾಯಂ ಟ್ರಸ್ಟಿ ಸುರುಳಿ ರಾಮೋಹನ ರೈ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಾರ್ಯಕ್ರಮವನ್ನು ಪ್ರದೀಪ್ ರೈ ಮನವಳಿಕೆ ಅವರು ನಿರೂಪಣೆ ಮಾಡಿದರು. ನಾರಾಯಣ ಆಚಾರ್ಯ ಮರವಂತಿಲ ಅವರು ಧನ್ಯವಾದ ಸಮರ್ಪಿಸಿದರು. ಭಜನಾ ಮಂಡಳಿಯ ಸ್ಥಾಪನೆಯಿಂದ ಸ್ಥಳೀಯ ಭಕ್ತರಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತವಾಯಿತು.

The Bhajana Mandali at Suruli Sri Balasubrahmanya Swamy Temple in Perabe, Kadaba, was inaugurated on February 23, 2026. The event included prayers, lamp lighting, and participation of temple trustees and dignitaries, aiming to promote devotional activities among local devotees.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ
February 24, 2026
6:46 AM
by: ಮಿರರ್‌ ಡೆಸ್ಕ್
ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ
February 24, 2026
6:39 AM
by: ಮಿರರ್‌ ಡೆಸ್ಕ್
ದೇಹದ ನೀರಿನ ಕೊರತೆ ತಪ್ಪಿಸಲು ಈ ಹಣ್ಣುಗಳು ಸಹಕಾರಿ
February 24, 2026
6:34 AM
by: ಮಿರರ್‌ ಡೆಸ್ಕ್
ಕೃಷಿಯಲ್ಲಿ ಮುಂದಿನ ಕ್ರಾಂತಿ AI ಮೂಲಕ | ರೈತರಿಗೆ ₹70,000 ಕೋಟಿ ಹೆಚ್ಚುವರಿ ಆದಾಯ ಸಾಧ್ಯ – ಕೇಂದ್ರ ಸಚಿವ ಜಿತೇಂದ್ರ ಸಿಂಗ್
February 24, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror