Advertisement
ಸುದ್ದಿಗಳು

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

Share

ಸುರುಳಿ ಪೆರಾಬೆಯ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಪರಂಪರೆಯನ್ನು ಉತ್ತೇಜಿಸುವ ಉದ್ದೇಶದಿಂದ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿಯ ಉದ್ಘಾಟನಾ ಕಾರ್ಯಕ್ರಮವು ಈಚೆಗೆ ಶ್ರೀ ಕ್ಷೇತ್ರದ ಸಭಾಭವನದಲ್ಲಿ ನೆರವೇರಿತು.

ಕಾರ್ಯಕ್ರಮದಲ್ಲಿ ಶ್ರೀನಿಧಿ ಅರ್ಚಕರಿಂದ ದೇವತಾ ಪ್ರಾರ್ಥನೆ ನೆರವೇರಿಸಲಾಯಿತು. ಸತೀಶ್ ಗೌಡ ಪುಂಜ ಅವರು ಸ್ವಾಗತಿಸಿದರು. ಬಳಿಕ ಟ್ರಸ್ಟ್ ಅಧ್ಯಕ್ಷ ಕೃಷ್ಣಕುಮಾರ್ ಅತ್ರಿಜಾಲ ಅವರು ಪ್ರಸ್ತಾವಿಕ ಭಾಷಣ ಮಾಡಿ ಭಜನಾ ಮಂಡಳಿಯ ಅಗತ್ಯತೆ ಮತ್ತು ಮಹತ್ವವನ್ನು ವಿವರಿಸಿದರು.

ಅತಿಥಿಗಳಾದ ರಾಧಾಕೃಷ್ಣ ಮನವಳಿಕೆ, ಸಂಜೀವ ರೈ ಪರಾರಿ ಹಾಗೂ ಕುಶಾಲಪ್ಪ ಗೌಡ ಸುರುಳಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಭಜನಾ ಮಂಡಳಿಯನ್ನು ಉದ್ಘಾಟಿಸಿದರು.  ಭಜನಾ ಮಂಡಳಿ ಅಧ್ಯಕ್ಷರಾಗಿ  ದಾಮೋದರ ಗೌಡ ಮಾಯಿಲ್ಗ ಅವರು ಸಭಾಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಖಾಯಂ ಟ್ರಸ್ಟಿ ಸುರುಳಿ ರಾಮೋಹನ ರೈ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಾರ್ಯಕ್ರಮವನ್ನು ಪ್ರದೀಪ್ ರೈ ಮನವಳಿಕೆ ಅವರು ನಿರೂಪಣೆ ಮಾಡಿದರು. ನಾರಾಯಣ ಆಚಾರ್ಯ ಮರವಂತಿಲ ಅವರು ಧನ್ಯವಾದ ಸಮರ್ಪಿಸಿದರು. ಭಜನಾ ಮಂಡಳಿಯ ಸ್ಥಾಪನೆಯಿಂದ ಸ್ಥಳೀಯ ಭಕ್ತರಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತವಾಯಿತು.

The Bhajana Mandali at Suruli Sri Balasubrahmanya Swamy Temple in Perabe, Kadaba, was inaugurated on February 23, 2026. The event included prayers, lamp lighting, and participation of temple trustees and dignitaries, aiming to promote devotional activities among local devotees.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

3 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

3 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

4 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

6 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

18 hours ago