ಸುದ್ದಿಗಳು

ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳಮುಖಿಯರ ಸಮೀಕ್ಷೆ : ತೃತಿಯ ಲಿಂಗಿಗಳಿಗೆ ಸಿಗಲಿದೆ ಸರ್ಕಾರಿ ಸೌಲಭ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮಂತೆ ಮನುಷ್ಯರಾದ್ರು  ತಾವು ಮಾಡದ ತಪ್ಪಿಗಾಗಿ ಈ ಸಮಾಜದಲ್ಲಿ ಶಿಕ್ಷೆ ಅನುಭವಿಸಿ ಬದುಕುತ್ತಿರುವಾ ದೇವ ಮಾನವರಿವರು. ಸಮಾಜದಿಂದ ಧಿಕ್ಕರಿಸಲ್ಪಟ್ಟ ಇವರಿಗೆ ಎಲ್ಲರಂತಾ ಬದುಕು ದೂರದ ಮಾತು. ಆದರೆ ಇವರು ಸೂರು, ಕೆಲಸ, ತಮಗೆ ಬೇಕಾದ ಜೀವನ ಯಾವುದು ಇಲ್ಲಗಳ ನಡೆವೆ ಬದುಕು ಕಟ್ಟಿಕೊಂಡವರು ತೃತಿಯ ಲಿಂಗಿಗಳು.  ಅದೆಷ್ಟೋ ಸರ್ಕಾರಗಳು ಇವರಿಗೆ ಬದುಕಿನ ಭರವಸೆ ಮಾತ್ರ ಕೊಟ್ಟಿವೆ. ಕೆಲವೊಂದು ದಕ್ಕಿದೆ. ಆದ್ರೂ ಅವರ ಬದುಕು ಸುಧಾರಿಸಲಿಲ್ಲ.

Advertisement

ಇದೀಗ  ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ತೃತೀಯ ಲಿಂಗಿಗಳ ಸಮೀಕ್ಷೆ ನಡೆಯಲಿದೆ. ರಾಜ್ಯದ ಮೈಸೂರು ಮತ್ತು ವಿಜಯಪುರ ಜಿಲ್ಲೆಗಳು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಸಜ್ಜಾಗಿವೆ. ತೃತೀಯ ಲಿಂಗಿಗಳ ಜನಸಂಖ್ಯೆಯ ಕುರಿತು ಸ್ಪಷ್ಪ ಮಾಹಿತಿ ಪಡೆದುಕೊಳ್ಳಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಜೊತೆಗೆ, ತೃತೀಯ ಲಿಂಗಿಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.

ತೃತೀಯ ಲಿಂಗಿಗಳಿಂದಲೇ ತೃತೀಯ ಲಿಂಗಿಗಳ ಸಮೀಕ್ಷೆ
ಮಾರ್ಚ್ 10 ರಿಂದ 45 ದಿನಗಳ ಕಾಲ ಸಮೀಕ್ಷೆ ನಡೆಯಲಿದೆ. ಸ್ವತಃ ತೃತೀಯ ಲಿಂಗಿಗಳೇ ಸಮೀಕ್ಷೆ ನಡೆಸಲಿದ್ದಾರೆ. ಸರ್ಕಾರ ನಡೆಸುತ್ತಿರುವ ಈ ತೃತೀಯ ಲಿಂಗಿಗಳ ಸಮೀಕ್ಷೆಯಲ್ಲಿ ಮೈಸೂರು ಜಿಲ್ಲೆಯಿಂದ 9 ತೃತೀಯ ಲಿಂಗಿಗಳು ಸಮೀಕ್ಷೆ ನಡೆಸುವ ತರಬೇತಿ ಪಡೆದುಕೊಂಡಿದ್ದಾರೆ. ಮೈಸೂರು ಮತ್ತು ವಿಜಯಪುರ ಜಿಲ್ಲೆಗಳ ತಾಲೂಕು ಮಟ್ಟದಲ್ಲಿ ತೃತೀಯ ಲಿಂಗಿಗಳಿಂದಲೇ ತೃತೀಯ ಲಿಂಗಿಗಳ ಸಮೀಕ್ಷೆ ನಡೆಸಲಾಗುವುದು ಎಂದು ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜು. ಬಿ ಮಾಹಿತಿ ನೀಡಿದ್ದಾರೆ.

ಗುರುತಿನ ಚೀಟಿ ವಿತರಣೆಯಿಂದ ಸರ್ಕಾರಿ ಸೌಲಭ್ಯ
ಈ ಸಮೀಕ್ಷೆ ನಡೆದ ನಂತರ ಭಾಗವಹಿಸಿದ ಎಲ್ಲ ತೃತೀಯ ಲಿಂಗಿ ವ್ಯಕ್ತಿಗಳಿಗೆ ಗುರುತಿನ ಚೀಟಿಗಳನ್ನು ವಿತರಣೆ ಮಾಡಲಾಗುತ್ತದೆ. ಜೊತೆಗೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ತೃತೀಯ ಲಿಂಗಿಗಳಿಗೆ ಈ ಸಮೀಕ್ಷೆ ನೆರವಾಗಲಿದೆ ಎಂದು ಹೇಳಲಾಗಿದೆ.

ಮುಂಬೈ ಸೇರಿದಂತೆ ಇತರ ಮಹಾ ನಗರಗಳಿಗೆ ವಲಸೆ ಹೋದ ಮೈಸೂರು ಮತ್ತು ವಿಜಯಪುರ ಜಿಲ್ಲೆಗಳ ಮಂಗಳಮುಖಿಯರು ಸಮೀಕ್ಷೆ ನಡೆಯುವ ಸಮಯದಲ್ಲಿ ಜಿಲ್ಲೆಗೆ ಆಗಮಿಸುವಂತೆ ಮನವಿ ಮಾಡಲಾಗಿದೆ. ಈ ಸಮೀಕ್ಷೆಯಿಂದ ಮುಂದಿನ ದಿನಗಳಿಂದ ಮಂಗಳಮುಖಿಯರು ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗಲಿದೆ.  ಹೀಗಾಗಿ ಯಾವುದೇ ಕಾರಣಕ್ಕೂ ಸಮೀಕ್ಷೆಯಲ್ಲಿ ತಪ್ಪಿಸದೇ  ಪಾಲ್ಗೊಳ್ಳುವಂತೆ ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜು. ಬಿ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…

5 hours ago

ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…

6 hours ago

ಕೇಂದ್ರದ ಬೆಂಬಲಕ್ಕಾಗಿ  ವಿಶೇಷ ಜಾಥಾ | ಪಕ್ಷಾತೀತವಾಗಿ  ಬೆಂಬಲ

ದೇಶದ  ಸೈನಿಕರಿಗೆ ಗೌರವ ಸಲ್ಲಿಸಿ  ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ  ನಾಳೆ…

6 hours ago

ಆಪರೇಷನ್ ಸಿಂದೂರ ಕಾರ್ಯಾಚರಣೆ | ಸರ್ವ ಪಕ್ಷಗಳ ಸಭೆಯಲ್ಲಿ ಬೆಂಬಲ |

ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ…

6 hours ago

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು

ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…

19 hours ago

ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago