Advertisement
ಸುದ್ದಿಗಳು

ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳಮುಖಿಯರ ಸಮೀಕ್ಷೆ : ತೃತಿಯ ಲಿಂಗಿಗಳಿಗೆ ಸಿಗಲಿದೆ ಸರ್ಕಾರಿ ಸೌಲಭ್ಯ

Share

ನಮ್ಮಂತೆ ಮನುಷ್ಯರಾದ್ರು  ತಾವು ಮಾಡದ ತಪ್ಪಿಗಾಗಿ ಈ ಸಮಾಜದಲ್ಲಿ ಶಿಕ್ಷೆ ಅನುಭವಿಸಿ ಬದುಕುತ್ತಿರುವಾ ದೇವ ಮಾನವರಿವರು. ಸಮಾಜದಿಂದ ಧಿಕ್ಕರಿಸಲ್ಪಟ್ಟ ಇವರಿಗೆ ಎಲ್ಲರಂತಾ ಬದುಕು ದೂರದ ಮಾತು. ಆದರೆ ಇವರು ಸೂರು, ಕೆಲಸ, ತಮಗೆ ಬೇಕಾದ ಜೀವನ ಯಾವುದು ಇಲ್ಲಗಳ ನಡೆವೆ ಬದುಕು ಕಟ್ಟಿಕೊಂಡವರು ತೃತಿಯ ಲಿಂಗಿಗಳು.  ಅದೆಷ್ಟೋ ಸರ್ಕಾರಗಳು ಇವರಿಗೆ ಬದುಕಿನ ಭರವಸೆ ಮಾತ್ರ ಕೊಟ್ಟಿವೆ. ಕೆಲವೊಂದು ದಕ್ಕಿದೆ. ಆದ್ರೂ ಅವರ ಬದುಕು ಸುಧಾರಿಸಲಿಲ್ಲ.

Advertisement

ಇದೀಗ  ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ತೃತೀಯ ಲಿಂಗಿಗಳ ಸಮೀಕ್ಷೆ ನಡೆಯಲಿದೆ. ರಾಜ್ಯದ ಮೈಸೂರು ಮತ್ತು ವಿಜಯಪುರ ಜಿಲ್ಲೆಗಳು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಸಜ್ಜಾಗಿವೆ. ತೃತೀಯ ಲಿಂಗಿಗಳ ಜನಸಂಖ್ಯೆಯ ಕುರಿತು ಸ್ಪಷ್ಪ ಮಾಹಿತಿ ಪಡೆದುಕೊಳ್ಳಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಜೊತೆಗೆ, ತೃತೀಯ ಲಿಂಗಿಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.

ತೃತೀಯ ಲಿಂಗಿಗಳಿಂದಲೇ ತೃತೀಯ ಲಿಂಗಿಗಳ ಸಮೀಕ್ಷೆ
ಮಾರ್ಚ್ 10 ರಿಂದ 45 ದಿನಗಳ ಕಾಲ ಸಮೀಕ್ಷೆ ನಡೆಯಲಿದೆ. ಸ್ವತಃ ತೃತೀಯ ಲಿಂಗಿಗಳೇ ಸಮೀಕ್ಷೆ ನಡೆಸಲಿದ್ದಾರೆ. ಸರ್ಕಾರ ನಡೆಸುತ್ತಿರುವ ಈ ತೃತೀಯ ಲಿಂಗಿಗಳ ಸಮೀಕ್ಷೆಯಲ್ಲಿ ಮೈಸೂರು ಜಿಲ್ಲೆಯಿಂದ 9 ತೃತೀಯ ಲಿಂಗಿಗಳು ಸಮೀಕ್ಷೆ ನಡೆಸುವ ತರಬೇತಿ ಪಡೆದುಕೊಂಡಿದ್ದಾರೆ. ಮೈಸೂರು ಮತ್ತು ವಿಜಯಪುರ ಜಿಲ್ಲೆಗಳ ತಾಲೂಕು ಮಟ್ಟದಲ್ಲಿ ತೃತೀಯ ಲಿಂಗಿಗಳಿಂದಲೇ ತೃತೀಯ ಲಿಂಗಿಗಳ ಸಮೀಕ್ಷೆ ನಡೆಸಲಾಗುವುದು ಎಂದು ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜು. ಬಿ ಮಾಹಿತಿ ನೀಡಿದ್ದಾರೆ.

ಗುರುತಿನ ಚೀಟಿ ವಿತರಣೆಯಿಂದ ಸರ್ಕಾರಿ ಸೌಲಭ್ಯ
ಈ ಸಮೀಕ್ಷೆ ನಡೆದ ನಂತರ ಭಾಗವಹಿಸಿದ ಎಲ್ಲ ತೃತೀಯ ಲಿಂಗಿ ವ್ಯಕ್ತಿಗಳಿಗೆ ಗುರುತಿನ ಚೀಟಿಗಳನ್ನು ವಿತರಣೆ ಮಾಡಲಾಗುತ್ತದೆ. ಜೊತೆಗೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ತೃತೀಯ ಲಿಂಗಿಗಳಿಗೆ ಈ ಸಮೀಕ್ಷೆ ನೆರವಾಗಲಿದೆ ಎಂದು ಹೇಳಲಾಗಿದೆ.

ಮುಂಬೈ ಸೇರಿದಂತೆ ಇತರ ಮಹಾ ನಗರಗಳಿಗೆ ವಲಸೆ ಹೋದ ಮೈಸೂರು ಮತ್ತು ವಿಜಯಪುರ ಜಿಲ್ಲೆಗಳ ಮಂಗಳಮುಖಿಯರು ಸಮೀಕ್ಷೆ ನಡೆಯುವ ಸಮಯದಲ್ಲಿ ಜಿಲ್ಲೆಗೆ ಆಗಮಿಸುವಂತೆ ಮನವಿ ಮಾಡಲಾಗಿದೆ. ಈ ಸಮೀಕ್ಷೆಯಿಂದ ಮುಂದಿನ ದಿನಗಳಿಂದ ಮಂಗಳಮುಖಿಯರು ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗಲಿದೆ.  ಹೀಗಾಗಿ ಯಾವುದೇ ಕಾರಣಕ್ಕೂ ಸಮೀಕ್ಷೆಯಲ್ಲಿ ತಪ್ಪಿಸದೇ  ಪಾಲ್ಗೊಳ್ಳುವಂತೆ ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜು. ಬಿ ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

8 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

16 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

16 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

16 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

16 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago