Advertisement
ಸುದ್ದಿಗಳು

ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳಮುಖಿಯರ ಸಮೀಕ್ಷೆ : ತೃತಿಯ ಲಿಂಗಿಗಳಿಗೆ ಸಿಗಲಿದೆ ಸರ್ಕಾರಿ ಸೌಲಭ್ಯ

Share

ನಮ್ಮಂತೆ ಮನುಷ್ಯರಾದ್ರು  ತಾವು ಮಾಡದ ತಪ್ಪಿಗಾಗಿ ಈ ಸಮಾಜದಲ್ಲಿ ಶಿಕ್ಷೆ ಅನುಭವಿಸಿ ಬದುಕುತ್ತಿರುವಾ ದೇವ ಮಾನವರಿವರು. ಸಮಾಜದಿಂದ ಧಿಕ್ಕರಿಸಲ್ಪಟ್ಟ ಇವರಿಗೆ ಎಲ್ಲರಂತಾ ಬದುಕು ದೂರದ ಮಾತು. ಆದರೆ ಇವರು ಸೂರು, ಕೆಲಸ, ತಮಗೆ ಬೇಕಾದ ಜೀವನ ಯಾವುದು ಇಲ್ಲಗಳ ನಡೆವೆ ಬದುಕು ಕಟ್ಟಿಕೊಂಡವರು ತೃತಿಯ ಲಿಂಗಿಗಳು.  ಅದೆಷ್ಟೋ ಸರ್ಕಾರಗಳು ಇವರಿಗೆ ಬದುಕಿನ ಭರವಸೆ ಮಾತ್ರ ಕೊಟ್ಟಿವೆ. ಕೆಲವೊಂದು ದಕ್ಕಿದೆ. ಆದ್ರೂ ಅವರ ಬದುಕು ಸುಧಾರಿಸಲಿಲ್ಲ.

Advertisement
Advertisement

ಇದೀಗ  ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ತೃತೀಯ ಲಿಂಗಿಗಳ ಸಮೀಕ್ಷೆ ನಡೆಯಲಿದೆ. ರಾಜ್ಯದ ಮೈಸೂರು ಮತ್ತು ವಿಜಯಪುರ ಜಿಲ್ಲೆಗಳು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಸಜ್ಜಾಗಿವೆ. ತೃತೀಯ ಲಿಂಗಿಗಳ ಜನಸಂಖ್ಯೆಯ ಕುರಿತು ಸ್ಪಷ್ಪ ಮಾಹಿತಿ ಪಡೆದುಕೊಳ್ಳಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಜೊತೆಗೆ, ತೃತೀಯ ಲಿಂಗಿಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.

Advertisement

ತೃತೀಯ ಲಿಂಗಿಗಳಿಂದಲೇ ತೃತೀಯ ಲಿಂಗಿಗಳ ಸಮೀಕ್ಷೆ
ಮಾರ್ಚ್ 10 ರಿಂದ 45 ದಿನಗಳ ಕಾಲ ಸಮೀಕ್ಷೆ ನಡೆಯಲಿದೆ. ಸ್ವತಃ ತೃತೀಯ ಲಿಂಗಿಗಳೇ ಸಮೀಕ್ಷೆ ನಡೆಸಲಿದ್ದಾರೆ. ಸರ್ಕಾರ ನಡೆಸುತ್ತಿರುವ ಈ ತೃತೀಯ ಲಿಂಗಿಗಳ ಸಮೀಕ್ಷೆಯಲ್ಲಿ ಮೈಸೂರು ಜಿಲ್ಲೆಯಿಂದ 9 ತೃತೀಯ ಲಿಂಗಿಗಳು ಸಮೀಕ್ಷೆ ನಡೆಸುವ ತರಬೇತಿ ಪಡೆದುಕೊಂಡಿದ್ದಾರೆ. ಮೈಸೂರು ಮತ್ತು ವಿಜಯಪುರ ಜಿಲ್ಲೆಗಳ ತಾಲೂಕು ಮಟ್ಟದಲ್ಲಿ ತೃತೀಯ ಲಿಂಗಿಗಳಿಂದಲೇ ತೃತೀಯ ಲಿಂಗಿಗಳ ಸಮೀಕ್ಷೆ ನಡೆಸಲಾಗುವುದು ಎಂದು ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜು. ಬಿ ಮಾಹಿತಿ ನೀಡಿದ್ದಾರೆ.

ಗುರುತಿನ ಚೀಟಿ ವಿತರಣೆಯಿಂದ ಸರ್ಕಾರಿ ಸೌಲಭ್ಯ
ಈ ಸಮೀಕ್ಷೆ ನಡೆದ ನಂತರ ಭಾಗವಹಿಸಿದ ಎಲ್ಲ ತೃತೀಯ ಲಿಂಗಿ ವ್ಯಕ್ತಿಗಳಿಗೆ ಗುರುತಿನ ಚೀಟಿಗಳನ್ನು ವಿತರಣೆ ಮಾಡಲಾಗುತ್ತದೆ. ಜೊತೆಗೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ತೃತೀಯ ಲಿಂಗಿಗಳಿಗೆ ಈ ಸಮೀಕ್ಷೆ ನೆರವಾಗಲಿದೆ ಎಂದು ಹೇಳಲಾಗಿದೆ.

Advertisement

ಮುಂಬೈ ಸೇರಿದಂತೆ ಇತರ ಮಹಾ ನಗರಗಳಿಗೆ ವಲಸೆ ಹೋದ ಮೈಸೂರು ಮತ್ತು ವಿಜಯಪುರ ಜಿಲ್ಲೆಗಳ ಮಂಗಳಮುಖಿಯರು ಸಮೀಕ್ಷೆ ನಡೆಯುವ ಸಮಯದಲ್ಲಿ ಜಿಲ್ಲೆಗೆ ಆಗಮಿಸುವಂತೆ ಮನವಿ ಮಾಡಲಾಗಿದೆ. ಈ ಸಮೀಕ್ಷೆಯಿಂದ ಮುಂದಿನ ದಿನಗಳಿಂದ ಮಂಗಳಮುಖಿಯರು ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗಲಿದೆ.  ಹೀಗಾಗಿ ಯಾವುದೇ ಕಾರಣಕ್ಕೂ ಸಮೀಕ್ಷೆಯಲ್ಲಿ ತಪ್ಪಿಸದೇ  ಪಾಲ್ಗೊಳ್ಳುವಂತೆ ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜು. ಬಿ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

2 hours ago

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

19 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? | ಪರಿಸರಿದಿಂದ ನಮಗಾಗುವ ಪ್ರಯೋಜನವೇನು..? |

ಪರಿಸರದಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದರ ಬಗ್ಗೆ ಪರಿಸರ ಪರಿವಾರದ ಮಾಹಿತಿ ಇಲ್ಲಿದೆ...

19 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

20 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

20 hours ago