Advertisement
ಸುದ್ದಿಗಳು

ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳಮುಖಿಯರ ಸಮೀಕ್ಷೆ : ತೃತಿಯ ಲಿಂಗಿಗಳಿಗೆ ಸಿಗಲಿದೆ ಸರ್ಕಾರಿ ಸೌಲಭ್ಯ

Share

ನಮ್ಮಂತೆ ಮನುಷ್ಯರಾದ್ರು  ತಾವು ಮಾಡದ ತಪ್ಪಿಗಾಗಿ ಈ ಸಮಾಜದಲ್ಲಿ ಶಿಕ್ಷೆ ಅನುಭವಿಸಿ ಬದುಕುತ್ತಿರುವಾ ದೇವ ಮಾನವರಿವರು. ಸಮಾಜದಿಂದ ಧಿಕ್ಕರಿಸಲ್ಪಟ್ಟ ಇವರಿಗೆ ಎಲ್ಲರಂತಾ ಬದುಕು ದೂರದ ಮಾತು. ಆದರೆ ಇವರು ಸೂರು, ಕೆಲಸ, ತಮಗೆ ಬೇಕಾದ ಜೀವನ ಯಾವುದು ಇಲ್ಲಗಳ ನಡೆವೆ ಬದುಕು ಕಟ್ಟಿಕೊಂಡವರು ತೃತಿಯ ಲಿಂಗಿಗಳು.  ಅದೆಷ್ಟೋ ಸರ್ಕಾರಗಳು ಇವರಿಗೆ ಬದುಕಿನ ಭರವಸೆ ಮಾತ್ರ ಕೊಟ್ಟಿವೆ. ಕೆಲವೊಂದು ದಕ್ಕಿದೆ. ಆದ್ರೂ ಅವರ ಬದುಕು ಸುಧಾರಿಸಲಿಲ್ಲ.

ಇದೀಗ  ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ತೃತೀಯ ಲಿಂಗಿಗಳ ಸಮೀಕ್ಷೆ ನಡೆಯಲಿದೆ. ರಾಜ್ಯದ ಮೈಸೂರು ಮತ್ತು ವಿಜಯಪುರ ಜಿಲ್ಲೆಗಳು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಸಜ್ಜಾಗಿವೆ. ತೃತೀಯ ಲಿಂಗಿಗಳ ಜನಸಂಖ್ಯೆಯ ಕುರಿತು ಸ್ಪಷ್ಪ ಮಾಹಿತಿ ಪಡೆದುಕೊಳ್ಳಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಜೊತೆಗೆ, ತೃತೀಯ ಲಿಂಗಿಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.

ತೃತೀಯ ಲಿಂಗಿಗಳಿಂದಲೇ ತೃತೀಯ ಲಿಂಗಿಗಳ ಸಮೀಕ್ಷೆ
ಮಾರ್ಚ್ 10 ರಿಂದ 45 ದಿನಗಳ ಕಾಲ ಸಮೀಕ್ಷೆ ನಡೆಯಲಿದೆ. ಸ್ವತಃ ತೃತೀಯ ಲಿಂಗಿಗಳೇ ಸಮೀಕ್ಷೆ ನಡೆಸಲಿದ್ದಾರೆ. ಸರ್ಕಾರ ನಡೆಸುತ್ತಿರುವ ಈ ತೃತೀಯ ಲಿಂಗಿಗಳ ಸಮೀಕ್ಷೆಯಲ್ಲಿ ಮೈಸೂರು ಜಿಲ್ಲೆಯಿಂದ 9 ತೃತೀಯ ಲಿಂಗಿಗಳು ಸಮೀಕ್ಷೆ ನಡೆಸುವ ತರಬೇತಿ ಪಡೆದುಕೊಂಡಿದ್ದಾರೆ. ಮೈಸೂರು ಮತ್ತು ವಿಜಯಪುರ ಜಿಲ್ಲೆಗಳ ತಾಲೂಕು ಮಟ್ಟದಲ್ಲಿ ತೃತೀಯ ಲಿಂಗಿಗಳಿಂದಲೇ ತೃತೀಯ ಲಿಂಗಿಗಳ ಸಮೀಕ್ಷೆ ನಡೆಸಲಾಗುವುದು ಎಂದು ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜು. ಬಿ ಮಾಹಿತಿ ನೀಡಿದ್ದಾರೆ.

ಗುರುತಿನ ಚೀಟಿ ವಿತರಣೆಯಿಂದ ಸರ್ಕಾರಿ ಸೌಲಭ್ಯ
ಈ ಸಮೀಕ್ಷೆ ನಡೆದ ನಂತರ ಭಾಗವಹಿಸಿದ ಎಲ್ಲ ತೃತೀಯ ಲಿಂಗಿ ವ್ಯಕ್ತಿಗಳಿಗೆ ಗುರುತಿನ ಚೀಟಿಗಳನ್ನು ವಿತರಣೆ ಮಾಡಲಾಗುತ್ತದೆ. ಜೊತೆಗೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ತೃತೀಯ ಲಿಂಗಿಗಳಿಗೆ ಈ ಸಮೀಕ್ಷೆ ನೆರವಾಗಲಿದೆ ಎಂದು ಹೇಳಲಾಗಿದೆ.

ಮುಂಬೈ ಸೇರಿದಂತೆ ಇತರ ಮಹಾ ನಗರಗಳಿಗೆ ವಲಸೆ ಹೋದ ಮೈಸೂರು ಮತ್ತು ವಿಜಯಪುರ ಜಿಲ್ಲೆಗಳ ಮಂಗಳಮುಖಿಯರು ಸಮೀಕ್ಷೆ ನಡೆಯುವ ಸಮಯದಲ್ಲಿ ಜಿಲ್ಲೆಗೆ ಆಗಮಿಸುವಂತೆ ಮನವಿ ಮಾಡಲಾಗಿದೆ. ಈ ಸಮೀಕ್ಷೆಯಿಂದ ಮುಂದಿನ ದಿನಗಳಿಂದ ಮಂಗಳಮುಖಿಯರು ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗಲಿದೆ.  ಹೀಗಾಗಿ ಯಾವುದೇ ಕಾರಣಕ್ಕೂ ಸಮೀಕ್ಷೆಯಲ್ಲಿ ತಪ್ಪಿಸದೇ  ಪಾಲ್ಗೊಳ್ಳುವಂತೆ ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜು. ಬಿ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

8 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

8 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

19 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

23 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago