Advertisement
ಸುದ್ದಿಗಳು

ರಾಜ್ಯದಲ್ಲೇ ಮೊದಲ ಬಾರಿಗೆ ಮಂಗಳಮುಖಿಯರ ಸಮೀಕ್ಷೆ : ತೃತಿಯ ಲಿಂಗಿಗಳಿಗೆ ಸಿಗಲಿದೆ ಸರ್ಕಾರಿ ಸೌಲಭ್ಯ

Share

ನಮ್ಮಂತೆ ಮನುಷ್ಯರಾದ್ರು  ತಾವು ಮಾಡದ ತಪ್ಪಿಗಾಗಿ ಈ ಸಮಾಜದಲ್ಲಿ ಶಿಕ್ಷೆ ಅನುಭವಿಸಿ ಬದುಕುತ್ತಿರುವಾ ದೇವ ಮಾನವರಿವರು. ಸಮಾಜದಿಂದ ಧಿಕ್ಕರಿಸಲ್ಪಟ್ಟ ಇವರಿಗೆ ಎಲ್ಲರಂತಾ ಬದುಕು ದೂರದ ಮಾತು. ಆದರೆ ಇವರು ಸೂರು, ಕೆಲಸ, ತಮಗೆ ಬೇಕಾದ ಜೀವನ ಯಾವುದು ಇಲ್ಲಗಳ ನಡೆವೆ ಬದುಕು ಕಟ್ಟಿಕೊಂಡವರು ತೃತಿಯ ಲಿಂಗಿಗಳು.  ಅದೆಷ್ಟೋ ಸರ್ಕಾರಗಳು ಇವರಿಗೆ ಬದುಕಿನ ಭರವಸೆ ಮಾತ್ರ ಕೊಟ್ಟಿವೆ. ಕೆಲವೊಂದು ದಕ್ಕಿದೆ. ಆದ್ರೂ ಅವರ ಬದುಕು ಸುಧಾರಿಸಲಿಲ್ಲ.

ಇದೀಗ  ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ತೃತೀಯ ಲಿಂಗಿಗಳ ಸಮೀಕ್ಷೆ ನಡೆಯಲಿದೆ. ರಾಜ್ಯದ ಮೈಸೂರು ಮತ್ತು ವಿಜಯಪುರ ಜಿಲ್ಲೆಗಳು ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಸಜ್ಜಾಗಿವೆ. ತೃತೀಯ ಲಿಂಗಿಗಳ ಜನಸಂಖ್ಯೆಯ ಕುರಿತು ಸ್ಪಷ್ಪ ಮಾಹಿತಿ ಪಡೆದುಕೊಳ್ಳಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಜೊತೆಗೆ, ತೃತೀಯ ಲಿಂಗಿಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.

ತೃತೀಯ ಲಿಂಗಿಗಳಿಂದಲೇ ತೃತೀಯ ಲಿಂಗಿಗಳ ಸಮೀಕ್ಷೆ
ಮಾರ್ಚ್ 10 ರಿಂದ 45 ದಿನಗಳ ಕಾಲ ಸಮೀಕ್ಷೆ ನಡೆಯಲಿದೆ. ಸ್ವತಃ ತೃತೀಯ ಲಿಂಗಿಗಳೇ ಸಮೀಕ್ಷೆ ನಡೆಸಲಿದ್ದಾರೆ. ಸರ್ಕಾರ ನಡೆಸುತ್ತಿರುವ ಈ ತೃತೀಯ ಲಿಂಗಿಗಳ ಸಮೀಕ್ಷೆಯಲ್ಲಿ ಮೈಸೂರು ಜಿಲ್ಲೆಯಿಂದ 9 ತೃತೀಯ ಲಿಂಗಿಗಳು ಸಮೀಕ್ಷೆ ನಡೆಸುವ ತರಬೇತಿ ಪಡೆದುಕೊಂಡಿದ್ದಾರೆ. ಮೈಸೂರು ಮತ್ತು ವಿಜಯಪುರ ಜಿಲ್ಲೆಗಳ ತಾಲೂಕು ಮಟ್ಟದಲ್ಲಿ ತೃತೀಯ ಲಿಂಗಿಗಳಿಂದಲೇ ತೃತೀಯ ಲಿಂಗಿಗಳ ಸಮೀಕ್ಷೆ ನಡೆಸಲಾಗುವುದು ಎಂದು ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜು. ಬಿ ಮಾಹಿತಿ ನೀಡಿದ್ದಾರೆ.

ಗುರುತಿನ ಚೀಟಿ ವಿತರಣೆಯಿಂದ ಸರ್ಕಾರಿ ಸೌಲಭ್ಯ
ಈ ಸಮೀಕ್ಷೆ ನಡೆದ ನಂತರ ಭಾಗವಹಿಸಿದ ಎಲ್ಲ ತೃತೀಯ ಲಿಂಗಿ ವ್ಯಕ್ತಿಗಳಿಗೆ ಗುರುತಿನ ಚೀಟಿಗಳನ್ನು ವಿತರಣೆ ಮಾಡಲಾಗುತ್ತದೆ. ಜೊತೆಗೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ತೃತೀಯ ಲಿಂಗಿಗಳಿಗೆ ಈ ಸಮೀಕ್ಷೆ ನೆರವಾಗಲಿದೆ ಎಂದು ಹೇಳಲಾಗಿದೆ.

ಮುಂಬೈ ಸೇರಿದಂತೆ ಇತರ ಮಹಾ ನಗರಗಳಿಗೆ ವಲಸೆ ಹೋದ ಮೈಸೂರು ಮತ್ತು ವಿಜಯಪುರ ಜಿಲ್ಲೆಗಳ ಮಂಗಳಮುಖಿಯರು ಸಮೀಕ್ಷೆ ನಡೆಯುವ ಸಮಯದಲ್ಲಿ ಜಿಲ್ಲೆಗೆ ಆಗಮಿಸುವಂತೆ ಮನವಿ ಮಾಡಲಾಗಿದೆ. ಈ ಸಮೀಕ್ಷೆಯಿಂದ ಮುಂದಿನ ದಿನಗಳಿಂದ ಮಂಗಳಮುಖಿಯರು ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗಲಿದೆ.  ಹೀಗಾಗಿ ಯಾವುದೇ ಕಾರಣಕ್ಕೂ ಸಮೀಕ್ಷೆಯಲ್ಲಿ ತಪ್ಪಿಸದೇ  ಪಾಲ್ಗೊಳ್ಳುವಂತೆ ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜು. ಬಿ ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

2 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

2 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

3 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

4 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

16 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

16 hours ago