ಮೂರು ದಿನಗಳ ‘ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ 30 ರವರೆಗೆ ಜೆ ಎಸ್ ಬಿ ಪ್ರತಿಷ್ಠಾನ, ಕೊಳ್ಳೇಗಾಲ ಇವರ ವತಿಯಿಂದ ಚಾಮರಾಜನಗರ ಜಿಲ್ಲೆಯಲ್ಲಿ ನಡೆಯಲಿದೆ.
ಸಹಜ ಕೃಷಿ ವಿಜ್ಞಾನಿ ಡಾ| ಮಂಜುನಾಥ ಹೆಚ್ ನೇತೃತ್ವದಲ್ಲಿ ನಡೆಯುವ ಈ ಶಿಬಿರದಲ್ಲಿ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು, ವಿಷಯ ತಜ್ಞರು, ಪರಿಣಿತರು, ಕೃಷಿ ವಿಜ್ಞಾನಿಗಳು ಮತ್ತು ಅನುಭವಿ ಕೃಷಿಕರೊಂದಿಗೆ, ಸುಸ್ಥಿರ ಕೃಷಿಯಲ್ಲಿ ಆಸಕ್ತಿಯುಳ್ಳವರು, ಉತ್ತಮ ಆರೋಗ್ಯ ಮತ್ತು ಜೀವನಕ್ಕಾಗಿ, ಪೌಷ್ಟಿಕ ಆಹಾರ ಮತ್ತು ಒತ್ತಡ ಮುಕ್ತ ಜೀವನ ಬಯಸುವ, ಹೊಸ ತೋಟವನ್ನು ನಿರ್ಮಿಸುವ ಕನಸು ಹೊಂದಿರುವವರು, ಈಗಾಗಲೇ ಕೃಷಿಯಲ್ಲಿ ತೊಡಗಿರುವವರನ್ನು ಮೂರು ದಿನಗಳ ಸಮಗ್ರ, ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರಕ್ಕೆ ಆಹ್ವಾನಿಸಲಾಗಿದೆ.
ಕಾರ್ಯಗಾರದಲ್ಲಿ : ಮಣ್ಣಿನ ಅಧ್ಯಯನ, ಬೆಳೆ ಸಂಯೋಜನೆ, ಗಿಡಗಳಲ್ಲಿ ಪೋಷಕಾಂಶಗಳ ಕೊರತೆಯ ಲಕ್ಷಣಗಳು, ಸೂಕ್ಷ್ಮ ಜೀವಾಣುಗಳ ತಯಾರಿಕೆ, ಉತ್ತಮ ಗೊಬ್ಬರ ತಯಾರಿಕೆ, ತೋಟಗಳ ಅಧ್ಯಯನ ಮತ್ತು ಪ್ರಾತ್ಯಕ್ಷಿಕೆ ಜೊತೆಗೆ ಸಾಕಷ್ಟು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತದೆ.
ಬಿಡುವಿನ ವೇಳೆಯಲ್ಲಿ ಗುಂಪು ಚರ್ಚೆಗಳು, ಪ್ರಾತ್ಯಕ್ಷಿಕೆ, ವಿಚಾರ ವಿನಿಮಯ ಮತ್ತು ಶ್ರಮದಾನ ಇರುತ್ತದೆ. ಮುಂಚಿತವಾಗಿ ಹೆಸರು ನೋಂದಾಯಿಸಿದವರಿಗೆ ಮಾತ್ರ ಕಾರ್ಯಾಗಾರದಲ್ಲಿ ಭಾಗವಹಿಸಲು ಅವಕಾಶವಿದೆ. ನೇರ ಭೇಟಿಗೆ ಅವಕಾಶವಿಲ್ಲ. ತರಬೇತಿ ಶುಲ್ಕ : ₹1000/- ಒಬ್ಬರಿಗೆ ವಸತಿ ಸಹಿತ ಕಾರ್ಯಕ್ರಮವಾಗಿದ್ದು, ಸರಳ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ.
ಸ್ಥಳ : ಕೃಷಿಕ ರಾಜೇಶ್ ಅವರ ತೋಟ, ದುಗ್ಗಹಟ್ಟಿ, ಯಳಂದೂರು ತಾಲೂಕು, ಚಾಮರಾಜನಗರ ಜಿಲ್ಲೆ, ಕರ್ನಾಟಕ. ನೋಂದಣಿಗಾಗಿ: ಶಶಿಕುಮಾರ್, ಕೃಷಿಕರು, ಮೊಬೈಲ್ : 9880949689
ಮಾಹಿತಿ: ಪ್ರಶಾಂತ್ ಜಯರಾಮ್, ಕೃಷಿಕರು-ಕೃಷಿ ಸಲಹೆಗಾರರು
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…
ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…