ಮೂರು ದಿನಗಳ ‘ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ 30 ರವರೆಗೆ ಜೆ ಎಸ್ ಬಿ ಪ್ರತಿಷ್ಠಾನ, ಕೊಳ್ಳೇಗಾಲ ಇವರ ವತಿಯಿಂದ ಚಾಮರಾಜನಗರ ಜಿಲ್ಲೆಯಲ್ಲಿ ನಡೆಯಲಿದೆ.
ಸಹಜ ಕೃಷಿ ವಿಜ್ಞಾನಿ ಡಾ| ಮಂಜುನಾಥ ಹೆಚ್ ನೇತೃತ್ವದಲ್ಲಿ ನಡೆಯುವ ಈ ಶಿಬಿರದಲ್ಲಿ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು, ವಿಷಯ ತಜ್ಞರು, ಪರಿಣಿತರು, ಕೃಷಿ ವಿಜ್ಞಾನಿಗಳು ಮತ್ತು ಅನುಭವಿ ಕೃಷಿಕರೊಂದಿಗೆ, ಸುಸ್ಥಿರ ಕೃಷಿಯಲ್ಲಿ ಆಸಕ್ತಿಯುಳ್ಳವರು, ಉತ್ತಮ ಆರೋಗ್ಯ ಮತ್ತು ಜೀವನಕ್ಕಾಗಿ, ಪೌಷ್ಟಿಕ ಆಹಾರ ಮತ್ತು ಒತ್ತಡ ಮುಕ್ತ ಜೀವನ ಬಯಸುವ, ಹೊಸ ತೋಟವನ್ನು ನಿರ್ಮಿಸುವ ಕನಸು ಹೊಂದಿರುವವರು, ಈಗಾಗಲೇ ಕೃಷಿಯಲ್ಲಿ ತೊಡಗಿರುವವರನ್ನು ಮೂರು ದಿನಗಳ ಸಮಗ್ರ, ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರಕ್ಕೆ ಆಹ್ವಾನಿಸಲಾಗಿದೆ.
ಕಾರ್ಯಗಾರದಲ್ಲಿ : ಮಣ್ಣಿನ ಅಧ್ಯಯನ, ಬೆಳೆ ಸಂಯೋಜನೆ, ಗಿಡಗಳಲ್ಲಿ ಪೋಷಕಾಂಶಗಳ ಕೊರತೆಯ ಲಕ್ಷಣಗಳು, ಸೂಕ್ಷ್ಮ ಜೀವಾಣುಗಳ ತಯಾರಿಕೆ, ಉತ್ತಮ ಗೊಬ್ಬರ ತಯಾರಿಕೆ, ತೋಟಗಳ ಅಧ್ಯಯನ ಮತ್ತು ಪ್ರಾತ್ಯಕ್ಷಿಕೆ ಜೊತೆಗೆ ಸಾಕಷ್ಟು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತದೆ.
ಬಿಡುವಿನ ವೇಳೆಯಲ್ಲಿ ಗುಂಪು ಚರ್ಚೆಗಳು, ಪ್ರಾತ್ಯಕ್ಷಿಕೆ, ವಿಚಾರ ವಿನಿಮಯ ಮತ್ತು ಶ್ರಮದಾನ ಇರುತ್ತದೆ. ಮುಂಚಿತವಾಗಿ ಹೆಸರು ನೋಂದಾಯಿಸಿದವರಿಗೆ ಮಾತ್ರ ಕಾರ್ಯಾಗಾರದಲ್ಲಿ ಭಾಗವಹಿಸಲು ಅವಕಾಶವಿದೆ. ನೇರ ಭೇಟಿಗೆ ಅವಕಾಶವಿಲ್ಲ. ತರಬೇತಿ ಶುಲ್ಕ : ₹1000/- ಒಬ್ಬರಿಗೆ ವಸತಿ ಸಹಿತ ಕಾರ್ಯಕ್ರಮವಾಗಿದ್ದು, ಸರಳ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ.
ಸ್ಥಳ : ಕೃಷಿಕ ರಾಜೇಶ್ ಅವರ ತೋಟ, ದುಗ್ಗಹಟ್ಟಿ, ಯಳಂದೂರು ತಾಲೂಕು, ಚಾಮರಾಜನಗರ ಜಿಲ್ಲೆ, ಕರ್ನಾಟಕ. ನೋಂದಣಿಗಾಗಿ: ಶಶಿಕುಮಾರ್, ಕೃಷಿಕರು, ಮೊಬೈಲ್ : 9880949689
ಮಾಹಿತಿ: ಪ್ರಶಾಂತ್ ಜಯರಾಮ್, ಕೃಷಿಕರು-ಕೃಷಿ ಸಲಹೆಗಾರರು
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…
ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…
ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…