Advertisement
MIRROR FOCUS

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

Share

ಮೂರು ದಿನಗಳ ‘ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ 30 ರವರೆಗೆ  ಜೆ ಎಸ್ ಬಿ ಪ್ರತಿಷ್ಠಾನ, ಕೊಳ್ಳೇಗಾಲ ಇವರ ವತಿಯಿಂದ ಚಾಮರಾಜನಗರ ಜಿಲ್ಲೆಯಲ್ಲಿ ನಡೆಯಲಿದೆ.

ಸಹಜ ಕೃಷಿ ವಿಜ್ಞಾನಿ ಡಾ| ಮಂಜುನಾಥ ಹೆಚ್ ನೇತೃತ್ವದಲ್ಲಿ ನಡೆಯುವ ಈ ಶಿಬಿರದಲ್ಲಿ  ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು, ವಿಷಯ ತಜ್ಞರು, ಪರಿಣಿತರು, ಕೃಷಿ ವಿಜ್ಞಾನಿಗಳು ಮತ್ತು ಅನುಭವಿ ಕೃಷಿಕರೊಂದಿಗೆ, ಸುಸ್ಥಿರ ಕೃಷಿಯಲ್ಲಿ ಆಸಕ್ತಿಯುಳ್ಳವರು, ಉತ್ತಮ ಆರೋಗ್ಯ ಮತ್ತು ಜೀವನಕ್ಕಾಗಿ, ಪೌಷ್ಟಿಕ ಆಹಾರ ಮತ್ತು ಒತ್ತಡ ಮುಕ್ತ ಜೀವನ ಬಯಸುವ, ಹೊಸ ತೋಟವನ್ನು ನಿರ್ಮಿಸುವ ಕನಸು ಹೊಂದಿರುವವರು, ಈಗಾಗಲೇ ಕೃಷಿಯಲ್ಲಿ ತೊಡಗಿರುವವರನ್ನು ಮೂರು ದಿನಗಳ ಸಮಗ್ರ, ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರಕ್ಕೆ ಆಹ್ವಾನಿಸಲಾಗಿದೆ.

ಕಾರ್ಯಗಾರದಲ್ಲಿ : ಮಣ್ಣಿನ ಅಧ್ಯಯನ, ಬೆಳೆ ಸಂಯೋಜನೆ, ಗಿಡಗಳಲ್ಲಿ ಪೋಷಕಾಂಶಗಳ ಕೊರತೆಯ ಲಕ್ಷಣಗಳು, ಸೂಕ್ಷ್ಮ ಜೀವಾಣುಗಳ ತಯಾರಿಕೆ, ಉತ್ತಮ ಗೊಬ್ಬರ ತಯಾರಿಕೆ, ತೋಟಗಳ ಅಧ್ಯಯನ ಮತ್ತು ಪ್ರಾತ್ಯಕ್ಷಿಕೆ ಜೊತೆಗೆ ಸಾಕಷ್ಟು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತದೆ.

  • ಕೃಷಿ ಭೂಮಿ ವಿನ್ಯಾಸ.
  • ಮಣ್ಣಿನ ಪ್ರಾಮುಖ್ಯತೆ ಮತ್ತು ಕೃಷಿಗೆ ಬೇಕಾದ ಮಣ್ಣು ಸಿದ್ದಪಡಿಸಿಕೊಳ್ಳುವುದು.
  • ಗೊಬ್ಬರ ಮತ್ತು ಜೀವಾಣುಗಳ ತಯಾರಿಕೆ.
  • ಬೀಜ ಮತ್ತು ಗಿಡಗಳ ಆಯ್ಕೆ.
  • ಬೆಳೆ ಆಯೋಜನೆ.
  • ರೋಗ ಮತ್ತು ಕೀಟಗಳ ನೈಸರ್ಗಿಕ ನಿಯಂತ್ರಣ.
  • ನೀರಾವರಿ ನಿರ್ವಹಣೆ.
  • ಬೆಳೆ ಉಳಿಕೆಗಳ ಸದ್ಭಳಕೆ.
  • ಕೃಷಿಯ ಇತಿಮಿತಿ ಮತ್ತು ಅದರ ಪ್ರಾಮುಖ್ಯತೆ.
  • ಮಾರುಕಟ್ಟೆ ಮತ್ತು ಮೌಲ್ಯವರ್ಧನೆಯ ಅವಕಾಶಗಳು ಮತ್ತು ಸವಾಲುಗಳು,
  • ಆಹಾರ ಮೈಲುಗಳನ್ನು ಕಡಿಮೆ ಮಾಡುವುದು.
  • ಹವಾಮಾನ ವೈಪರೀತ್ಯದಿಂದ ಕೃಷಿ ವಲಯದ ಮೇಲೆ ಬೀಳುತ್ತಿರುವ ಹೊರೆ.
  • ಹವಾಮಾನ ಬದಲಾವಣೆ ನಿಟ್ಟಿನಲ್ಲಿ ನಮ್ಮ ಕೃಷಿಯಲ್ಲಿ ಆಗಬೇಕಾದ ಬದಲಾವಣೆ.
  • ಕೃಷಿ ಮಾರುಕಟ್ಟೆ ಬಿಕ್ಕಟ್ಟು ಮತ್ತು ಸವಾಲುಗಳು.. …ಹಾಗು ಇನ್ನಷ್ಟು ವಿಚಾರಗಳು…

ಬಿಡುವಿನ ವೇಳೆಯಲ್ಲಿ ಗುಂಪು ಚರ್ಚೆಗಳು, ಪ್ರಾತ್ಯಕ್ಷಿಕೆ, ವಿಚಾರ ವಿನಿಮಯ ಮತ್ತು ಶ್ರಮದಾನ ಇರುತ್ತದೆ.  ಮುಂಚಿತವಾಗಿ ಹೆಸರು ನೋಂದಾಯಿಸಿದವರಿಗೆ ಮಾತ್ರ ಕಾರ್ಯಾಗಾರದಲ್ಲಿ ಭಾಗವಹಿಸಲು ಅವಕಾಶವಿದೆ. ನೇರ ಭೇಟಿಗೆ ಅವಕಾಶವಿಲ್ಲ. ತರಬೇತಿ ಶುಲ್ಕ : ₹1000/- ಒಬ್ಬರಿಗೆ  ವಸತಿ ಸಹಿತ ಕಾರ್ಯಕ್ರಮವಾಗಿದ್ದು, ಸರಳ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ.

ಸ್ಥಳ : ಕೃಷಿಕ ರಾಜೇಶ್ ಅವರ ತೋಟ, ದುಗ್ಗಹಟ್ಟಿ, ಯಳಂದೂರು ತಾಲೂಕು, ಚಾಮರಾಜನಗರ ಜಿಲ್ಲೆ, ಕರ್ನಾಟಕ. ನೋಂದಣಿಗಾಗಿ:  ಶಶಿಕುಮಾರ್, ಕೃಷಿಕರು, ಮೊಬೈಲ್ : 9880949689

ಮಾಹಿತಿ: ಪ್ರಶಾಂತ್ ಜಯರಾಮ್,  ಕೃಷಿಕರು-ಕೃಷಿ ಸಲಹೆಗಾರರು 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

7 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

9 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

15 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

15 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

22 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

23 hours ago