Advertisement
MIRROR FOCUS

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

Share

ಮೂರು ದಿನಗಳ ‘ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ 30 ರವರೆಗೆ  ಜೆ ಎಸ್ ಬಿ ಪ್ರತಿಷ್ಠಾನ, ಕೊಳ್ಳೇಗಾಲ ಇವರ ವತಿಯಿಂದ ಚಾಮರಾಜನಗರ ಜಿಲ್ಲೆಯಲ್ಲಿ ನಡೆಯಲಿದೆ.

ಸಹಜ ಕೃಷಿ ವಿಜ್ಞಾನಿ ಡಾ| ಮಂಜುನಾಥ ಹೆಚ್ ನೇತೃತ್ವದಲ್ಲಿ ನಡೆಯುವ ಈ ಶಿಬಿರದಲ್ಲಿ  ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು, ವಿಷಯ ತಜ್ಞರು, ಪರಿಣಿತರು, ಕೃಷಿ ವಿಜ್ಞಾನಿಗಳು ಮತ್ತು ಅನುಭವಿ ಕೃಷಿಕರೊಂದಿಗೆ, ಸುಸ್ಥಿರ ಕೃಷಿಯಲ್ಲಿ ಆಸಕ್ತಿಯುಳ್ಳವರು, ಉತ್ತಮ ಆರೋಗ್ಯ ಮತ್ತು ಜೀವನಕ್ಕಾಗಿ, ಪೌಷ್ಟಿಕ ಆಹಾರ ಮತ್ತು ಒತ್ತಡ ಮುಕ್ತ ಜೀವನ ಬಯಸುವ, ಹೊಸ ತೋಟವನ್ನು ನಿರ್ಮಿಸುವ ಕನಸು ಹೊಂದಿರುವವರು, ಈಗಾಗಲೇ ಕೃಷಿಯಲ್ಲಿ ತೊಡಗಿರುವವರನ್ನು ಮೂರು ದಿನಗಳ ಸಮಗ್ರ, ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರಕ್ಕೆ ಆಹ್ವಾನಿಸಲಾಗಿದೆ.

ಕಾರ್ಯಗಾರದಲ್ಲಿ : ಮಣ್ಣಿನ ಅಧ್ಯಯನ, ಬೆಳೆ ಸಂಯೋಜನೆ, ಗಿಡಗಳಲ್ಲಿ ಪೋಷಕಾಂಶಗಳ ಕೊರತೆಯ ಲಕ್ಷಣಗಳು, ಸೂಕ್ಷ್ಮ ಜೀವಾಣುಗಳ ತಯಾರಿಕೆ, ಉತ್ತಮ ಗೊಬ್ಬರ ತಯಾರಿಕೆ, ತೋಟಗಳ ಅಧ್ಯಯನ ಮತ್ತು ಪ್ರಾತ್ಯಕ್ಷಿಕೆ ಜೊತೆಗೆ ಸಾಕಷ್ಟು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತದೆ.

  • ಕೃಷಿ ಭೂಮಿ ವಿನ್ಯಾಸ.
  • ಮಣ್ಣಿನ ಪ್ರಾಮುಖ್ಯತೆ ಮತ್ತು ಕೃಷಿಗೆ ಬೇಕಾದ ಮಣ್ಣು ಸಿದ್ದಪಡಿಸಿಕೊಳ್ಳುವುದು.
  • ಗೊಬ್ಬರ ಮತ್ತು ಜೀವಾಣುಗಳ ತಯಾರಿಕೆ.
  • ಬೀಜ ಮತ್ತು ಗಿಡಗಳ ಆಯ್ಕೆ.
  • ಬೆಳೆ ಆಯೋಜನೆ.
  • ರೋಗ ಮತ್ತು ಕೀಟಗಳ ನೈಸರ್ಗಿಕ ನಿಯಂತ್ರಣ.
  • ನೀರಾವರಿ ನಿರ್ವಹಣೆ.
  • ಬೆಳೆ ಉಳಿಕೆಗಳ ಸದ್ಭಳಕೆ.
  • ಕೃಷಿಯ ಇತಿಮಿತಿ ಮತ್ತು ಅದರ ಪ್ರಾಮುಖ್ಯತೆ.
  • ಮಾರುಕಟ್ಟೆ ಮತ್ತು ಮೌಲ್ಯವರ್ಧನೆಯ ಅವಕಾಶಗಳು ಮತ್ತು ಸವಾಲುಗಳು,
  • ಆಹಾರ ಮೈಲುಗಳನ್ನು ಕಡಿಮೆ ಮಾಡುವುದು.
  • ಹವಾಮಾನ ವೈಪರೀತ್ಯದಿಂದ ಕೃಷಿ ವಲಯದ ಮೇಲೆ ಬೀಳುತ್ತಿರುವ ಹೊರೆ.
  • ಹವಾಮಾನ ಬದಲಾವಣೆ ನಿಟ್ಟಿನಲ್ಲಿ ನಮ್ಮ ಕೃಷಿಯಲ್ಲಿ ಆಗಬೇಕಾದ ಬದಲಾವಣೆ.
  • ಕೃಷಿ ಮಾರುಕಟ್ಟೆ ಬಿಕ್ಕಟ್ಟು ಮತ್ತು ಸವಾಲುಗಳು.. …ಹಾಗು ಇನ್ನಷ್ಟು ವಿಚಾರಗಳು…

ಬಿಡುವಿನ ವೇಳೆಯಲ್ಲಿ ಗುಂಪು ಚರ್ಚೆಗಳು, ಪ್ರಾತ್ಯಕ್ಷಿಕೆ, ವಿಚಾರ ವಿನಿಮಯ ಮತ್ತು ಶ್ರಮದಾನ ಇರುತ್ತದೆ.  ಮುಂಚಿತವಾಗಿ ಹೆಸರು ನೋಂದಾಯಿಸಿದವರಿಗೆ ಮಾತ್ರ ಕಾರ್ಯಾಗಾರದಲ್ಲಿ ಭಾಗವಹಿಸಲು ಅವಕಾಶವಿದೆ. ನೇರ ಭೇಟಿಗೆ ಅವಕಾಶವಿಲ್ಲ. ತರಬೇತಿ ಶುಲ್ಕ : ₹1000/- ಒಬ್ಬರಿಗೆ  ವಸತಿ ಸಹಿತ ಕಾರ್ಯಕ್ರಮವಾಗಿದ್ದು, ಸರಳ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ.

ಸ್ಥಳ : ಕೃಷಿಕ ರಾಜೇಶ್ ಅವರ ತೋಟ, ದುಗ್ಗಹಟ್ಟಿ, ಯಳಂದೂರು ತಾಲೂಕು, ಚಾಮರಾಜನಗರ ಜಿಲ್ಲೆ, ಕರ್ನಾಟಕ. ನೋಂದಣಿಗಾಗಿ:  ಶಶಿಕುಮಾರ್, ಕೃಷಿಕರು, ಮೊಬೈಲ್ : 9880949689

ಮಾಹಿತಿ: ಪ್ರಶಾಂತ್ ಜಯರಾಮ್,  ಕೃಷಿಕರು-ಕೃಷಿ ಸಲಹೆಗಾರರು 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

6 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

6 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

13 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

14 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

21 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

24 hours ago