ಕೃಷಿ ಕ್ರಾಂತಿ, ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಮಾಡುವ ಕಡೆಗೆ ಕೃಷಿ ವಿಜ್ಞಾನಿಗಳು ಹೆಚ್ಚಿನ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಧಾರವಾಡದಲ್ಲಿ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳವನ್ನು ಉದ್ಘಾಟಿಸಿ, ಕೈಪಿಡಿ ಬಿಡುಗಡೆಗೊಳಿಸಿದರು. ಇದೇ ವೇಳೆ ಶ್ರೇಷ್ಠ ಕೃಷಿಕ ಮತ್ತು ಕೃಷಿ ಮಹಿಳೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿ, ರಫ್ತು ಮಾಡುವ ಕಡೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಕೃಷಿ ವಿಜ್ಞಾನಿಗಳು ಸಂಶೋಧನೆ ನಡೆಸುವ ಅಗತ್ಯವಿದೆ ಎಂದರು. ರಾಜ್ಯ ಹಾಲಿನ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಸದ್ಯದಲ್ಲೇ ಮಹಾರಾಷ್ಟ್ರವನ್ನು ಹಿಂದಿಕ್ಕಿ, ಮೊದಲ ಸ್ಥಾನಕ್ಕೆ ಬರುವುದರಲ್ಲಿ ಆಶ್ಚರ್ಯವಿಲ್ಲ. ಹೈನುಗಾರಿಕೆಯಲ್ಲೂ ಅಪಾರ ಪ್ರಗತಿ ಸಾಧಿಸಿದ್ದೇವೆ. ಅಕ್ಕಿ, ರಾಗಿ, ಗೋಧಿಯಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗಿದ್ದು, ಇದರಿಂದ ಜನರು ಸಿರಿಧಾನ್ಯಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಹೇಳಿದರು. ಕೃಷಿ ವಿಶ್ವವಿದ್ಯಾಲಯಗಳು ಪ್ರಯೋಗಾಲಯದಿಂದ ಭೂಮಿಗೆ ಹಾಗೂ ಭೂಮಿಯಿಂದ ಪ್ರಯೋಗಾಲಯದ ಕಡೆಗೆ ಹೆಚ್ಚಿನ ಗಮನ ಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಒತ್ತು ನೀಡಬೇಕು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…