Advertisement
MIRROR FOCUS

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

Share

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ ಮಾಡಿದೆ. ವಿಶೇಷವಾಗಿ ಆಮ್ಲಜನಕದ ಕೊರತೆಯಿಂದಾಗಿ  ಪರಿಸರ ಸಂರಕ್ಷಣೆಯ ಕಡೆಗೆ  ಹೆಚ್ಚಿನ  ಒತ್ತು ನೀಡುವಂತಾಗಿದೆ ಎಂದರು. ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ.  ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಹಲವು ರಂಗಗಳಲ್ಲಿ ಕೆಲಸ ಮಾಡಲಾಗುತ್ತಿದೆ.  ಭಾರತ ದೀರ್ಘಕಾಲದವರೆಗೆ  ಸುಸ್ಥಿರ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್  ಗೆಹ್ಲೋಟ್  ಹೇಳಿದರು.

ಅವರು ಒಪಿ ಜಿಂದಾಲ್ ವಿಶ್ವವಿದ್ಯಾಲಯ ಮತ್ತು ಆರ್. ವಿ ವಿಶ್ವವಿದ್ಯಾಲಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಮುನ್ನಡೆಸುವುದು ;  ಜ್ಞಾನ ಹಂಚಿಕೆ ಮತ್ತು ಸಹಕಾರದ ಮೂಲಕ ಬಹುಪಾಲುದಾರರ ಸಹಭಾಗಿತ್ವದ ಪರಿಣಾಮ  ಹೆಚ್ಚಿಸುವುದು’  ಕುರಿತ ವಿಚಾರ ಸಂಕಿರಣವನ್ನು  ಉದ್ಘಾಟಿಸಿದರು. ಕೇಂದ್ರ ಸರ್ಕಾರ ಮೇಕ್ ಇನ್ ಇಂಡಿಯಾ, ಸ್ವಚ್ಛ ಭಾರತ್ ಅಭಿಯಾನ, ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಕಾರ್ಯಕ್ರಮ, ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆ, ಡಿಜಿಟಲ್ ಇಂಡಿಯಾ, ದೀನ್ ದಯಾಳ್ ಉಪಾಧ್ಯಾಯ ಗ್ರಾಮಜ್ಯೋತಿ  ಯೋಜನೆ, ಕೌಶಲ್ಯ ಭಾರತ, ಪ್ರಧಾನ ಮಂತ್ರಿ ಕೃಷಿ ಸಿಂಚಾಯ್  ಯೋಜನೆಗಳು ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಪೂರಕವಾಗಿದೆ ಎಂದು ತಿಳಿಸಿದರು. ಭಾರತದ ಸಿಲಿಕಾನ್ ವ್ಯಾನ್ ಎಂದು  ಕರೆಯಲ್ಪಡುವ ಬೆಂಗಳೂರು ನಗರ ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿದೆ. ತ್ವರಿತ ನಗರೀಕರಣ, ಹವಾಮಾನ ಬದಲಾವಣೆ, ಸಂಪನ್ಮೂಲಗಳ ಮೇಲೆ  ಹೆಚ್ಚುತ್ತಿರುವ ಒತ್ತಡಗಳ ಸವಾಲುಗಳನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಶುದ್ಧ ಗಾಳಿ, ಶುದ್ಧ ಇಂಧನ ಬಳಸಿ ನಗರವನ್ನು ಹಸಿರು ಮಾಡುವ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಅಗತ್ಯವಿದೆ ಎಂದರು.

ಈ ವೇಳೆ,  ಕೈಪಿಡಿ  ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ  ಓಪಿ ಜಿಂದಾಲ್ ಗ್ಲೋಬಲ್ ವಿಶ್ವವಿದ್ಯಾಲಯದ  ಕುಲಪತಿ ಪ್ರೊ. ಸಿ. ರಾಜಕುಮಾರ್, ಆರ್.ವಿ. ವಿಶ್ವವಿದ್ಯಾಲಯದ ಕುಲಪತಿ ಎ.ವಿ.ಎಸ್. ಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

2 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

2 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

10 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

10 hours ago

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

13 hours ago