Opinion

ನನಗೆ ಹೇಗೆ ಕೂಡುತ್ತೋ, ಹಾಗೆ ಮಾತ್ರ ನಾನು ಕೃಷಿ ಮಾಡೋದು…

Share

ಕೃಷಿಯಲ್ಲಿ ವಿಶೇಷ ಇದೆ ಅಂತಾ ಆಚೆಮನೆ ಶ್ರೀಶ ಹೇಳ್ಕೊಂಡು ಬಂದ್ರೆ….ಸೀದಾ ಕಾರು ಹತ್ತು…. ಅದನ್ನು‌ ನೋಡಿ ಬರೊಣ ಅಂತಾ ಹೇಳೋದು ರೂಢಿ. ಹಾಗಂತ ಅವರೇನಾದ್ರೂ ಹೊಸತನ್ನ ಮಾಡಿದ್ರೆ ಅವರ ಸಾಹಸವನ್ನು ಮನಃ ಪೂರ್ತಿ ಹೊಗಳಿ, ಕೊಟ್ಟ ಕಾಫಿ ತಿಂಡಿ ಎಲ್ಲ ತಿಂದು ಬರೋದಕ್ಕಿಂತ ಆಚೆ‌ ನನ್ನ ಚಟುವಟಿಕೆ ಏನೂ ಇಲ್ಲ. ನಾನು ಕೃಷಿ ತಜ್ಞನೂ ಅಲ್ಲ.. ಅಂತಹಾ ಆಸಕ್ತಿಯೂ ನನಗಿಲ್ಲ. ಕೊನೆಗೂ ನನಗೆ ಹೇಗೆ ಕೂಡುತ್ತೋ ಹಾಗೆ ಮಾತ್ರ ಕೃಷಿ ನಾನು ಮಾಡೋದು. ಹೊಸ ಜನರ ಸಂಪರ್ಕ ನನ್ನ ಅತೀ ಕುಶಿ ಕೊಡುವ ಒಂದು ವ್ಯಾಪ್ತಿ.……… ಮುಂದೆ ಓದಿ…….

ಆದ್ರೂ ಕೃಷಿ ಬಗ್ಗೆಯೇ ಯೋಚನೆ ಮಾಡಿದಾಗ ಕೆಲವು ಪ್ರಶ್ನೆಗಳು ಬಂದವು. ಅದನ್ನು ಅವರಿವರಲ್ಲಿ ಕೇಳಿದಾಗ ಆಶ್ಚರ್ಯ ಆಯ್ತು…

ಒಳ್ಳೆ ಅಡಿಕೆ ಇರುವ ಅಡಿಕೆ ಮರಕ್ಕೆ ಜೂನ್ ಶುರುವಿನಲ್ಲಿ ಒಳ್ಳೆ ಬಿಸಿಲಿನಲ್ಲಿ ಬೋರ್ಡೋ ಬಿಟ್ರೆ, ನಂತ್ರ ಎಷ್ಟೇ ಮಳೆ ಬಂದ್ರೂ 25 ದಿನಕ್ಕೆ ರೋಗ ಬರಲ್ಲ ಅಂತಾ ಗ್ಯಾರಂಟಿ ಕೊಡಬಹುದು. ಒಳ್ಳೆ ಮೆಣಸಿಗೆ ಇದೇ ತರ ಯಾವುದೇ ಮದ್ದು ಕೊಟ್ಟರೆ ಅದೇ ಗ್ಯಾರಂಟಿ ಸಾಧ್ಯವಾ ಅಂತಾ ಕೇಳಿದರೆ ಸ್ಪಷ್ಟ ಉತ್ತರ ಇಲ್ಲ.

ಆಚೆಮನೆ ಶ್ರೀಶನಲ್ಲಿ ನಿಮ್ಮಲ್ಲಿ ಮೆಣಸಿಗೆ ರೋಗ ಬಂದಿದಾ ಕೇಳಿದೆ. ಹೌದು ವಿಪರೀತ ಅಂದಾ. ವಿಪರೀತ ಅಂದರೆ ಎಷ್ಟು ಅಂತಾ ಕೇಳಿದೆ.. ಏನಿಲ್ಲಾಂದ್ರೂ 10% ಹೋಗಿರಬಹುದು ಅಂದಾ. ಸರಿಯಾಗಿ ಮದ್ದು ಬಿಡೋರತ್ರವೂ ಇದೇ ಪ್ರಶ್ನೆ ಕೇಳಿದೆ. ಅವರು ಇದೇ ಉತ್ತರ.. ಅಂದರೆ.. ಮದ್ದು ಬಿಟ್ರೆ ಪೂರ್ತಿ ಹತೋಟಿ ಆಗ್ತದೆ. ಬಹಳ ಕಡಿಮೆ ಸಾಯ್ತದೆ ಅಂದ್ರು  ಎಷ್ಟು ಅಂತಾ ಕೇಳಿದೆ. ಸ್ವಲ್ಪ ಯೋಚನೆ ಮಾಡಿ ಬಹಳ ಹೆಚ್ಚೆಂದ್ರೆ ಒಂದು 10% ಸಾಯಬಹುದಷ್ಟೆ ಅಂದರು… ಈಗಾ ನೀವು ಹೇಳಿ.. ಮುದ್ದು ಬಿಟ್ರೆ ಉಪಯೋಗ ಇದೆಯಾ ಇಲ್ವಾ ಅಂತಾ..  ನಿಮ್ಮ ನೈಜ ಉತ್ತರ ಬಹಳ ಕೃಷಿಕರಿಗೆ ಉಪಯೋಗ ಆಗಬಹುದಲ್ವಾ..?

ಬಹಳ ಕೃಷಿಕರಲ್ಲಿ ಸೂಕ್ತವಾದ ಅಧ್ಯಯನ ಸಹಿತದ ಉತ್ತರ ಇರಲ್ಲ.. ಜನವರಿ 25 ರ ಅಂದಾಜಿಗೆ ಬಹಳ ಕೃಷಿಕರಿಗೆ ಇದೇ ರೀತಿಯ ಎರಡನೇ ಪ್ರಶ್ನೆ ಕೇಳಿದೆ. ಈವರೆಗೆ ನಿಮ್ಮಲ್ಲಿ ಸಿಂಗಾರ ಹೇಗೆ ಬಿಟ್ಟಿದೆ ಅಂತಾ.. ಈ ವರ್ಷ ಬಹಳ ಭರ್ಜರಿ ಬಿಟ್ಟಿದೆ ಅಂತಾ ಹೆಚ್ಚಿನವರ ಉತ್ತರ. ಈ ತಾರೀಕು ವರೇಗೆ ಎಷ್ಟನೇ ಸಿಂಗಾರ ಬಿಟ್ಟು ಅರಳಿದೆ ಅಂತಾ ಕೇಳಿದರೆ ಉತ್ತರ ತಬ್ಬಿಬ್ಬು.. ನಾನೇ.. ನಮ್ಮಲ್ಲಿ ಇಂದಿನ ವರೆಗೆ ಒಂದು ಅರಳಿದೆ. ಎರಡನೆಯದ್ದು ಸೋಗೆ ಬಿದ್ದು ಹೊರಗೆ ಬಂದಿದೆ.. ಅಂತಾ ಹೇಳಿದೆ. ಆವಾಗ ಕೆಲವರು.. ಹೌದಾ.. ಹಾಗಾದ್ರೆ ನಾನು ಒಮ್ಮೆ ನೋಡಿ ನಾಳೆ ಹೇಳ್ತೇನೆ ಅಂತಾ ಹೇಳಿದ್ದಾರೆ. ಅವರಲ್ಲಿ ಹಲವು ಜನ.. ಹೌದು.. ನೀನು ಹೇಳಿದ್ದು ಸರಿ. ನಮ್ಮಲ್ಲಿಯೂ ಅಷ್ಟೇ.. ನಿಧಾನ ಇದೆ. ನೋಡಿದ್ರೆ ಬರುವ ವರ್ಷವೂ ಅಡಿಕೆ ಆಗಲ್ವಾ ಅಂತಾ ಕಾಣ್ಸುತ್ತೆ. ಅಂದಿದ್ದಾರೆ. ಈಗ ನಾನು ಹಾಗಾದ್ರೆ ಪ್ರತೀ ವರ್ಷ ಜನವರಿ 30 ತಾರೀಕಿಗೆ ಎಷ್ಟು ಸಿಂಗಾರ ಬಿಡೋದು ಅಂತಾ ಕೇಳಿದ್ರೆ ಮತ್ತೆ ತಬ್ಬಿಬ್ಬು.

ಎಲ್ರೂ ಅಂತಾ ಹೇಳಲ್ಲ, ಆದರೆ ಸಾಕಷ್ಟು ಜನ ಅಡಿಕೆ‌ ರೈತರು ಕೇವಲ ಹವ್ಯಾಸೀ ಕೃಷಿಕರು ಹೊರತು ವೃತ್ತಿಪರ ಅಲ್ಲವೇ ಅಲ್ಲ. ಅವರು ಬಹಳ ಶ್ರದ್ದೆಯಿಂದ ತೋಟದಲ್ಲಿ ಸುತ್ತೋರು ಅಲ್ಲ. ಕಾರಣ ಹೇಗೆ ಮಾಡಿದ್ರೂ ಅಡಿಕೆ ತೋಟ ಅವರನ್ನು ಬಹಳ ಗಟ್ಟಿಯಾಗಿ ಇದುವರೇಗೆ ಅವರನ್ನು ಆಧರಿಸಿದೆ.
ತೋಟದಲ್ಲಿ ಹೋಗ್ತಾ ಕೈಯಲ್ಲಿ ಕ್ರಿಕೇಟ್ ಸ್ಕೋರು ನೋಡ್ತಾ ಹೋಗ್ತೇವೆ. ಕೋಹ್ಲಿ ಔಟಾದಾಗ ಮೂಡ್ ಆಫ್. ಆವಾಗ ಸಿಂಗಾರ ಬಿಟ್ಟಿದೆಯಾ ಅನ್ನೋ ಗಮನ ತಪ್ಪಿ ಹೋಗ್ತದೆ. ಅಟೋ ಕಾರ್ ಇಂಡಿಯ ವೆಬ್ ಸೈಟಲ್ಲಿ ಅಂದು ಬಿಡುಗಡೆ ಆದ ಕಾರಿನ ಇಂಜಿನ್ ಯಾವ ಸೈಜು, ಅದರ ಗೇರ್ ಬಾಕ್ಸ್ AMT/CVT. ಈ ಮಾಹಿತಿ ಬಹಳ ನಿಖರವಾಗಿ ತರಕಾರಿ ಹಚ್ಚುವ ಸಭೆಯಲ್ಲಿ ಹೇಳ್ತೇವೆ.

ಆದರೆ, ನಿಮ್ಮ ಮನೆ ಎದುರಿನ ತೆಂಗಿನ‌ ಮರದಲ್ಲಿ ಕಾಯಿ ಎಷ್ಟಿರಬಹುದು ಅನ್ನೋ ಅಂದಾಜೂ ನಮಗಿರಲ್ಲ. ನಿಮ್ಮ ತೋಟದಲ್ಲಿ ಕಳೆದ ವರ್ಷ ಹಾಕಿದ ಡ್ರಿಪ್ಪರ್ ನಲ್ಲಿ ಈ ವರ್ಷ ಎಷ್ಟು ಲೀಟರ್ ನೀರು ಬರುತ್ತೆ ಅಂತಾ ಗಮನ ಇರಲ್ಲ. ಬಹಳ ಜನರಿಗೆ ಅಡಿಕೆ ಫಸಲು ಕಡಿಮೆ ಆಗೋದು.. ಅವರ ಡ್ರಿಪ್ಪರ್ ಗಳಲ್ಲಿ ಎಂಟು ಲೀಟರ್ ನೀರಿನ ಬದಲು ಕೇವಲ ಎರಡೇ ಲೀಟರ್ ಬರುವುದಕ್ಕಾಗಿ ಇರಬಹುದು. ಬಹಳ ಅಡಿಕೆ ಆಗುವ ಕೃಷಿಕ ನ ಹತ್ರ ಒಂದು ಮರದಲ್ಲಿ ಅಂದಾಜು ಎಷ್ಟು ಕೆಜಿ ಅಡಿಕೆ ಅಂತಾ ಕೇಳಿ ನೋಡಿ. ಗೊತ್ತಿರಲ್ಲ.. ಹೆಣ್ಣಾಳುಗಳು ಪ್ಲಾಸ್ಟಿಕ್ ಬಟ್ಟಿಯಲ್ಲಿ ಚಾ ಕುಡಿಯುವ ಹೊತ್ತಲ್ಲಿ ಹೆಕ್ಕಡಿಕೆ ತರ್ತಾರೆ. “ಕೋಡೆ ಪಾಡುನೈಟ್ಟೇ ಪಾಡ್ಳಾ…” ಅಂತೀವಿ. ಒಂದು ಬಟ್ಟಿಯಲ್ಲಿ ಎಷ್ಟು ಅಡಿಕೆ ಇದೆ ಅಂತೇನಾದ್ರೂ ಸರಿಯಾದ ಮಾಹಿತಿ ಇದೆಯಾ..? ಇಲ್ಲ. ಯಾಕೆ ಹೀಗೆ…?

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ವಿಶ್ವೇಶ್ವರ ಭಟ್ ಬಂಗಾರಡ್ಕ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರು ಕೃಷಿಕರು. ಅರ್ಥಶಾಸ್ತ್ರದಲ್ಲಿ ಎಂಎ ಪದವೀಧರ. ವಿವೇಕಾನಂದ ಪಾಲಿಟೆಕ್ನಿಕ್‌ ಇದರ ಆಡಳಿತ ಸಮಿತಿ ಅಧ್ಯಕ್ಷ , ವಿವೇಕಾನಂದ ವಿದ್ಯಾಸಂಸ್ಥೆಯ ಯಶಸ್‌ ಇದರ ಸ್ಥಾಪಕಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಬಿಜೆಪಿ ರಾಜ್ಯ ತರಬೇತಿ ಕೋಶದ ಮಾಜಿ ಸಂಚಾಲಕರಾಗಿ ಹಾಗೂ ದ ಕ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಬುಡೋಕನ್ ಮಲೇಷಿಯಾದ ಕರಾಟೆ ತರಬೇತುದಾರರಾಗಿ, ರಾಷ್ಟ್ರೀಯ ಚೆಸ್ ಆಟಗಾರರಾಗಿದ್ದರು. ಕುಂಜೂರು ಪಂಜ ಪ್ರಾಥಮಿಕ ಶಾಲೆಯ ಸಂಚಾಲಕರಾಗಿ, ರೋಟರಿ ಕ್ಲಬ್ ಇದರ ಮಾಜಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಮನೀಶಾ ಬುದ್ಧಿಮಾಂದ್ಯ ಶಾಲೆಯ ಸ್ಥಾಪಕರೂ ಆಗಿದ್ದಾರೆ.

Published by
ವಿಶ್ವೇಶ್ವರ ಭಟ್ ಬಂಗಾರಡ್ಕ

Recent Posts

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

14 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

14 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

14 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

15 hours ago

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಲಭಿಸುತ್ತದೆ – ಶಿಕ್ಷಣ ತಜ್ಞ ಗುರುರಾಜ ಕರ್ಜಗಿ

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…

15 hours ago

ಎಪ್ರಿಲ್‌ನಲ್ಲಿ ಶುಕ್ರನು 9 ರಾಶಿಗಳಲ್ಲಿ ವಿವಿಧ ಪರಿಣಾಮಗಳನ್ನು ಉಂಟುಮಾಡಬಹುದು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.

15 hours ago