ಸ್ವಚ್ಚ ಗ್ರಾಮ ಟಾಸ್ಕ್ ಫೋರ್ಸ್ ಗುತ್ತಿಗಾರಿನಲ್ಲಿ ರಚನೆಯಾಗಿದೆ. ಗ್ರಾಮದಲ್ಲಿ, ರಸ್ತೆಗಳಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸುವುದು ಹಾಗೂ ಆ ಬಳಿಕ ದಂಡ ವಿಧಿಸುವ ಬಗ್ಗೆ ಚಿಂತನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಸ್ವಚ್ಚ ಗ್ರಾಮ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ಸಭೆಯು ಈಚೆಗೆ ನಡೆಯಿತು. ಸಭೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್, ಅಮರ ಸಂಜೀವಿನಿ ಒಕ್ಕೂಟ ಹಾಗೂ ವರ್ತಕರ ಸಂಘದದ ವತಿಯಿಂದ ಎಲ್ಲಾ ಸಂಘ ಸಂಸ್ಥೆಗಳ ಜೊತೆಗೂಡಿ ಗುತ್ತಿಗಾರು ಪೇಟೆಯ ಸ್ವಚ್ಛತೆ ಹಾಗೂ ಸ್ವಚ್ಛತಾ ಅಭಿಯಾನದ ಮುಂದುವರಿದ ಭಾಗವಾಗಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಪ್ರತೀ ಗುರುವಾರ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸುವುದು, ಅಲ್ಲಲ್ಲಿ ಭಿತ್ತಿ ಪತ್ರದ ಮೂಲಕ ಹಾಗೂ ಇತರ ಮಾಧ್ಯಮಗಳ ಮೂಲಕ ಜನರಿಗೆ ಮಾಹಿತಿ ನೀಡಿ ಎಲ್ಲೆಂದರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸುವ ಕಾರ್ಯ ಮಾಡುವುದು.ಅದಾದ ಬಳಿಕ ಕಸ ಎಸೆದರೆ ದಂಡ ಪ್ರಯೋಗದಂತಹ ಕೆಲಸವನ್ನೂ ಪಂಚಾಯತ್ ಸಹಕಾರದೊಂದಿಗೆ ನಡೆಸುವುದಾಗಿ ನಿರ್ಧರಿಸಲಾಗಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…
ರೈಲ್ವೆ ಇಲಾಖೆ ಪ್ರಯಾಗ್ರಾಜ್ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಮ್ಯಾನ್ಮಾರ್ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…
ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ…