ಸ್ವಚ್ಚ ಗ್ರಾಮ ಟಾಸ್ಕ್ ಫೋರ್ಸ್ ಗುತ್ತಿಗಾರಿನಲ್ಲಿ ರಚನೆಯಾಗಿದೆ. ಗ್ರಾಮದಲ್ಲಿ, ರಸ್ತೆಗಳಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸುವುದು ಹಾಗೂ ಆ ಬಳಿಕ ದಂಡ ವಿಧಿಸುವ ಬಗ್ಗೆ ಚಿಂತನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಸ್ವಚ್ಚ ಗ್ರಾಮ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ಸಭೆಯು ಈಚೆಗೆ ನಡೆಯಿತು. ಸಭೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್, ಅಮರ ಸಂಜೀವಿನಿ ಒಕ್ಕೂಟ ಹಾಗೂ ವರ್ತಕರ ಸಂಘದದ ವತಿಯಿಂದ ಎಲ್ಲಾ ಸಂಘ ಸಂಸ್ಥೆಗಳ ಜೊತೆಗೂಡಿ ಗುತ್ತಿಗಾರು ಪೇಟೆಯ ಸ್ವಚ್ಛತೆ ಹಾಗೂ ಸ್ವಚ್ಛತಾ ಅಭಿಯಾನದ ಮುಂದುವರಿದ ಭಾಗವಾಗಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಪ್ರತೀ ಗುರುವಾರ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸುವುದು, ಅಲ್ಲಲ್ಲಿ ಭಿತ್ತಿ ಪತ್ರದ ಮೂಲಕ ಹಾಗೂ ಇತರ ಮಾಧ್ಯಮಗಳ ಮೂಲಕ ಜನರಿಗೆ ಮಾಹಿತಿ ನೀಡಿ ಎಲ್ಲೆಂದರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸುವ ಕಾರ್ಯ ಮಾಡುವುದು.ಅದಾದ ಬಳಿಕ ಕಸ ಎಸೆದರೆ ದಂಡ ಪ್ರಯೋಗದಂತಹ ಕೆಲಸವನ್ನೂ ಪಂಚಾಯತ್ ಸಹಕಾರದೊಂದಿಗೆ ನಡೆಸುವುದಾಗಿ ನಿರ್ಧರಿಸಲಾಗಿದೆ.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…