ಸುದ್ದಿಗಳು

#ಸ್ವಚ್ಛಗ್ರಾಮ | ಗುತ್ತಿಗಾರಿನಲ್ಲಿ ಸ್ವಚ್ಛ ಗ್ರಾಮ ಟಾಸ್ಕ್‌ ಫೋರ್ಸ್‌ ರಚನೆ | ಕಸ ಎಸೆಯದಂತೆ ಮೊದಲು ಜಾಗೃತಿ ನಂತರ ದಂಡ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸ್ವಚ್ಚ ಗ್ರಾಮ  ಟಾಸ್ಕ್ ಫೋರ್ಸ್ ಗುತ್ತಿಗಾರಿನಲ್ಲಿ ರಚನೆಯಾಗಿದೆ. ಗ್ರಾಮದಲ್ಲಿ, ರಸ್ತೆಗಳಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸುವುದು  ಹಾಗೂ ಆ ಬಳಿಕ ದಂಡ ವಿಧಿಸುವ ಬಗ್ಗೆ ಚಿಂತನೆ ನಡೆದಿದೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಸ್ವಚ್ಚ ಗ್ರಾಮ  ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಲಾಗಿದೆ. ಈ  ಸಮಿತಿ ಸಭೆಯು ಈಚೆಗೆ ನಡೆಯಿತು. ಸಭೆಯಲ್ಲಿ  ಗುತ್ತಿಗಾರು ಗ್ರಾಮ ಪಂಚಾಯತ್, ಅಮರ ಸಂಜೀವಿನಿ ಒಕ್ಕೂಟ ಹಾಗೂ ವರ್ತಕರ ಸಂಘದದ ವತಿಯಿಂದ ಎಲ್ಲಾ ಸಂಘ ಸಂಸ್ಥೆಗಳ ಜೊತೆಗೂಡಿ ಗುತ್ತಿಗಾರು ಪೇಟೆಯ ಸ್ವಚ್ಛತೆ ಹಾಗೂ ಸ್ವಚ್ಛತಾ ಅಭಿಯಾನದ ಮುಂದುವರಿದ ಭಾಗವಾಗಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಪ್ರತೀ ಗುರುವಾರ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸುವುದು, ಅಲ್ಲಲ್ಲಿ ಭಿತ್ತಿ ಪತ್ರದ ಮೂಲಕ ಹಾಗೂ ಇತರ ಮಾಧ್ಯಮಗಳ  ಮೂಲಕ ಜನರಿಗೆ ಮಾಹಿತಿ ನೀಡಿ ಎಲ್ಲೆಂದರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸುವ ಕಾರ್ಯ ಮಾಡುವುದು.ಅದಾದ ಬಳಿಕ ಕಸ ಎಸೆದರೆ ದಂಡ ಪ್ರಯೋಗದಂತಹ ಕೆಲಸವನ್ನೂ ಪಂಚಾಯತ್‌ ಸಹಕಾರದೊಂದಿಗೆ ನಡೆಸುವುದಾಗಿ ನಿರ್ಧರಿಸಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

5 hours ago

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…

5 hours ago

ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ  ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…

5 hours ago

ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ

ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…

5 hours ago

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

16 hours ago