ಸ್ವಚ್ಚ ಗ್ರಾಮ ಟಾಸ್ಕ್ ಫೋರ್ಸ್ ಗುತ್ತಿಗಾರಿನಲ್ಲಿ ರಚನೆಯಾಗಿದೆ. ಗ್ರಾಮದಲ್ಲಿ, ರಸ್ತೆಗಳಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸುವುದು ಹಾಗೂ ಆ ಬಳಿಕ ದಂಡ ವಿಧಿಸುವ ಬಗ್ಗೆ ಚಿಂತನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಸ್ವಚ್ಚ ಗ್ರಾಮ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ಸಭೆಯು ಈಚೆಗೆ ನಡೆಯಿತು. ಸಭೆಯಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್, ಅಮರ ಸಂಜೀವಿನಿ ಒಕ್ಕೂಟ ಹಾಗೂ ವರ್ತಕರ ಸಂಘದದ ವತಿಯಿಂದ ಎಲ್ಲಾ ಸಂಘ ಸಂಸ್ಥೆಗಳ ಜೊತೆಗೂಡಿ ಗುತ್ತಿಗಾರು ಪೇಟೆಯ ಸ್ವಚ್ಛತೆ ಹಾಗೂ ಸ್ವಚ್ಛತಾ ಅಭಿಯಾನದ ಮುಂದುವರಿದ ಭಾಗವಾಗಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಪ್ರತೀ ಗುರುವಾರ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸುವುದು, ಅಲ್ಲಲ್ಲಿ ಭಿತ್ತಿ ಪತ್ರದ ಮೂಲಕ ಹಾಗೂ ಇತರ ಮಾಧ್ಯಮಗಳ ಮೂಲಕ ಜನರಿಗೆ ಮಾಹಿತಿ ನೀಡಿ ಎಲ್ಲೆಂದರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸುವ ಕಾರ್ಯ ಮಾಡುವುದು.ಅದಾದ ಬಳಿಕ ಕಸ ಎಸೆದರೆ ದಂಡ ಪ್ರಯೋಗದಂತಹ ಕೆಲಸವನ್ನೂ ಪಂಚಾಯತ್ ಸಹಕಾರದೊಂದಿಗೆ ನಡೆಸುವುದಾಗಿ ನಿರ್ಧರಿಸಲಾಗಿದೆ.
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…
ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…