#SwachchBharath | ಗುತ್ತಿಗಾರಿನಲ್ಲಿ ಮುಂದುವರಿದ ಸ್ವಚ್ಛತಾ ಅಭಿಯಾನ | ಅಭಿಯಾನಕ್ಕೆ ಕೈಜೋಡಿಸಿದ ವಿಕಲಚೇತನ | ಪೇಟೆಯಲ್ಲಿ ಜಾಗೃತಿ ಫಲಕ |

August 3, 2023
10:09 PM
ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್‌ ವತಿಯಿಂದ ಆರನೇ ವಾರದ ಸ್ವಚ್ಛತಾ ಅಭಿಯಾನ ಹಾಗೂ ಜಾಗೃತಿ ಕಾರ್ಯವು ಗುರುವಾರ ನಡೆಯಿತು. ಈ ಅಭಿಯಾನಕ್ಕೆ  ಹಲವಾರು ಮಂದಿ ಕೈಜೋಡಿಸುತ್ತಿದ್ದಾರೆ. ಇದೀಗ ಜಾಗೃತಿ ಫಲಕಗಳ ಅಳವಡಿಕೆ ಕಾರ್ಯ ನಡೆಯುತ್ತಿದೆ.

ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನದ ಕಾರ್ಯ ಮುಂದುವರಿದಿದೆ.  ಆರನೇ ವಾರದ ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್‌ ಕೆಲಸವು ಗುರುವಾರ ನಡೆಯಿತು. ಈ ಅಭಿಯಾನಕ್ಕೆ  ಹೂವಿನ ಅಂಗಡಿಯ ವಿಕಲಚೇತನ ಸಿದ್ದಣ್ಣ ಅವರು ತಮ್ಮ ಅಂಗಡಿಯ ಮುಂದೆ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಿದರು. ಇದೇ ಸಂದರ್ಭ ಜೀಪು ಚಾಲಕ ಮಾಲಕರು ಕೂಡಾ ಅಭಿಯಾನದ ಜೊತೆ ಸೇರಿಕೊಂಡರು. ಗುರುವಾರದ  ಸ್ವಚ್ಚತಾ ಅಭಿಯಾನದಲ್ಲಿ ಸ್ವಚ್ಚತೆಯೊಂದಿಗೆ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಭಿಯಾನವನ್ನು ಮುಂದುವರಿಸಲಾಯಿತು.

Advertisement
Advertisement
ಸ್ವಚ್ಛತಾ ಅಭಿಯಾನಕ್ಕೆ ಸಿದ್ಧಣ್ಣ ಕೈಜೋಡಿಸಿದರು

ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್‌ ಅಭಿಯಾನಕ್ಕೆ  ಸ್ವಯಂಪ್ರೇರಣೆಯಿಂದ ಎಲ್ಲರೂ ಸ್ವಚ್ಚತಾ ಟಾಸ್ಕ್ ಫೋರ್ಸ್ ಕಾರ್ಯಕ್ಕೆ ಕೈಜೋಡಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಧನಪತಿ, ಪಂಚಾಯತ್ ಸದಸ್ಯರಾದ  ವಿಜಯ ಚಾರ್ಮಾತ, ಲತಾ ಆಜಡ್ಕ,ಅಮರ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು,ಗ್ರಂಥಪಾಲಕರು,ವರ್ತಕರ ಸಂಘದ ಅಧ್ಯಕ್ಷ ರು, ವರ್ತಕರು, ಜೀಪು ಚಾಲಕರು, ಆಟೋಚಾಲಕರು, ಟಾಸ್ಕ್ ಫೋರ್ಸ್ ನ ಸದಸ್ಯರೆಲ್ಲರೂ  ಪಾಲ್ಗೊಂಡು ಸ್ವಚ್ಚತೆ ಮಾಡುವುದರೊಂದಿಗೆ ಅರಿವು ಮೂಡಿಸಿದರು. ಇದೇ ಸಂದರ್ಭ ಎಲ್ಲೆಂದರಲ್ಲಿ ಕಸ ಎಸೆಯದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕಗಳನ್ನು ಅಂಗಡಿಗಳಲ್ಲಿ ಅಳವಡಿಸಲಾಯಿತು.

ಈ ಸಂದರ್ಭದಲ್ಲಿ ವರ್ತಕ  ಕೇಶವ ಕಣ್ಕಲ್ ಇವರು ಟಾಸ್ಕ್ ಫೋರ್ಸ್ ನ ಎಲ್ಲ ಸದಸ್ಯರಿಗೆ ಪಾನೀಯದ ವ್ಯವಸ್ಥೆಯನ್ನು ಮಾಡಿದರು.

ಸೂಚನಾ ಫಲಕ ಅಳವಡಿಕೆ
ಸೂಚನಾ ಫಲಕ ಅಳವಡಿಕೆ
ಸ್ವಚ್ಛತಾ ಅಭಿಯಾನ

ಸೂಚನಾ ಫಲಕ ಅಳವಡಿಕೆ

 

#SwachchBharath | ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನದ ಇಂಪ್ಯಾಕ್ಟ್….‌ | ಇನ್ನೀಗ ಬೇಕಿರುವುದು ಜನರ ಒಲವು… ಆಡಳಿತದ ನೆರವು.. |

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ
January 30, 2026
6:18 PM
by: ವಿಶೇಷ ಪ್ರತಿನಿಧಿ
ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ
January 30, 2026
6:04 PM
by: ದ ರೂರಲ್ ಮಿರರ್.ಕಾಂ
AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror