Advertisement
MIRROR FOCUS

ಸ್ವಚ್ಛತೆಗೆ ಆದ್ಯತೆ | ಗುತ್ತಿಗಾರಿನಲ್ಲಿ ಸಿಸಿಟಿವಿ ಅಳವಡಿಕೆಗೆ ಮನವಿ | ತ್ಯಾಜ್ಯ ಎಸೆದವರ ವಿರುದ್ಧ ಕ್ರಮಕ್ಕೆ ಜನರಿಂದಲೇ ಮನವಿ…! |

Share

ಸ್ವಚ್ಛತೆಗಾಗಿ ಹಾಗೂ ಗ್ರಾಮದ ಸುರಕ್ಷತೆಗಾಗಿ ಜನರೇ ಸಿಸಿಟಿವಿ ಅಳವಡಿಕೆ ಮಾಡಲು ಗ್ರಾಮಪಂಚಾಯತ್‌ಗೆ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲ, ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದೂ ಜನರು ಒತ್ತಾಯಿಸಿದ್ದಾರೆ…!. ಇಂತಹದ್ದೊಂದು ಮನವಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದಿದೆ.

Advertisement
Advertisement

ದೇಶದೆಲ್ಲೆಡೆ ಸ್ವಚ್ಛಭಾರತದ ( SwachchBharath) ಅಭಿಯಾನ ಸದ್ದು ಮಾಡುತ್ತಲೇ ಇದೆ. ಗ್ರಾಮ ಮಟ್ಟದಲ್ಲೂ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಹಾಗಿದ್ದರೂ ತ್ಯಾಜ್ಯ ಎಸೆಯುವವರ ಸಂಖ್ಯೆ ಕಡಿಮೆಯಾಗಿಲ್ಲ, ಸ್ವಚ್ಛತಾ ಜಾಗೃತಿ ಇನ್ನೂ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಈ ನಡುವೆಯೇ ಹಲವು ಕಡೆಗಳಲ್ಲಿ ಜನರು ಸ್ವಚ್ಛತಾ ಅಭಿಯಾನದ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಲೇ ಇದ್ದಾರೆ. ಹೀಗೆ ಜಾಗೃತಿ ಮೂಡಿಸುವ ಗ್ರಾಮಗಳಲ್ಲಿ ಗುತ್ತಿಗಾರು ಕೂಡಾ ಒಂದು.ಕಳೆದ 15 ವಾರಗಳಿಂದ ನಿರಂತರವಾಗಿ ಪ್ರತೀ ವಾರ ಸ್ವಚ್ಛತಾ ಅಭಿಯಾನ ಹಾಗೂ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ಅಭಿಯಾನದಲ್ಲಿ ಸಂಜೀವಿನಿ ಮಹಿಳಾ ಒಕ್ಕೂಟ, ವರ್ತಕ ಸಂಘ, ಗ್ರಾಮ ಪಂಚಾಯತ್‌ ಹಾಗೂ ಇತರ ಸಂಘಸಂಸ್ಥೆಗಳು ಕೈಜೋಡಿಸಿದ್ದವು.

Advertisement

ಪ್ರತೀ ವಾರದ ಸ್ವಚ್ಛತಾ ಕಾರ್ಯದ ನಂತರವೂ ತ್ಯಾಜ್ಯ ಎಸೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಹೀಗಾಗಿ ಇದೀಗ ಗುತ್ತಿಗಾರು ವರ್ತಕ ಸಂಘವು ಗ್ರಾಮದ ಸುರಕ್ಷತೆ ಹಾಗೂ ಸ್ವಚ್ಛತಾ ಕಾರ್ಯದ ಉದ್ದೇಶದಿಂದ ಸಿಸಿಟಿವಿ ಅಳವಡಿಕೆ ಮಾಡಲು ಗ್ರಾಮ ಪಂಚಾಯತ್‌ ಗೆ ಮನವಿ ಮಾಡಿದೆ. ಇದರ ಜೊತೆಗೆ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದೂ ಮನವಿಯಲ್ಲಿ ತಿಳಿಸಿದೆ.

Guthigar Vartaka Sangha has requested the Gram Panchayat to install CCTV for the purpose of safety and cleanliness of the village.
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

1 hour ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

2 hours ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

18 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

19 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

19 hours ago