#SwachchBharath | ಗುತ್ತಿಗಾರಿನಲ್ಲಿ ಮುಂದುವರಿದ ಸ್ವಚ್ಛತಾ ಅಭಿಯಾನ | ಅಭಿಯಾನಕ್ಕೆ ಕೈಜೋಡಿಸಿದ ವಿಕಲಚೇತನ | ಪೇಟೆಯಲ್ಲಿ ಜಾಗೃತಿ ಫಲಕ |

August 3, 2023
10:09 PM
ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್‌ ವತಿಯಿಂದ ಆರನೇ ವಾರದ ಸ್ವಚ್ಛತಾ ಅಭಿಯಾನ ಹಾಗೂ ಜಾಗೃತಿ ಕಾರ್ಯವು ಗುರುವಾರ ನಡೆಯಿತು. ಈ ಅಭಿಯಾನಕ್ಕೆ  ಹಲವಾರು ಮಂದಿ ಕೈಜೋಡಿಸುತ್ತಿದ್ದಾರೆ. ಇದೀಗ ಜಾಗೃತಿ ಫಲಕಗಳ ಅಳವಡಿಕೆ ಕಾರ್ಯ ನಡೆಯುತ್ತಿದೆ.

ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನದ ಕಾರ್ಯ ಮುಂದುವರಿದಿದೆ.  ಆರನೇ ವಾರದ ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್‌ ಕೆಲಸವು ಗುರುವಾರ ನಡೆಯಿತು. ಈ ಅಭಿಯಾನಕ್ಕೆ  ಹೂವಿನ ಅಂಗಡಿಯ ವಿಕಲಚೇತನ ಸಿದ್ದಣ್ಣ ಅವರು ತಮ್ಮ ಅಂಗಡಿಯ ಮುಂದೆ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಿದರು. ಇದೇ ಸಂದರ್ಭ ಜೀಪು ಚಾಲಕ ಮಾಲಕರು ಕೂಡಾ ಅಭಿಯಾನದ ಜೊತೆ ಸೇರಿಕೊಂಡರು. ಗುರುವಾರದ  ಸ್ವಚ್ಚತಾ ಅಭಿಯಾನದಲ್ಲಿ ಸ್ವಚ್ಚತೆಯೊಂದಿಗೆ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಭಿಯಾನವನ್ನು ಮುಂದುವರಿಸಲಾಯಿತು.

ಸ್ವಚ್ಛತಾ ಅಭಿಯಾನಕ್ಕೆ ಸಿದ್ಧಣ್ಣ ಕೈಜೋಡಿಸಿದರು

ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್‌ ಅಭಿಯಾನಕ್ಕೆ  ಸ್ವಯಂಪ್ರೇರಣೆಯಿಂದ ಎಲ್ಲರೂ ಸ್ವಚ್ಚತಾ ಟಾಸ್ಕ್ ಫೋರ್ಸ್ ಕಾರ್ಯಕ್ಕೆ ಕೈಜೋಡಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಧನಪತಿ, ಪಂಚಾಯತ್ ಸದಸ್ಯರಾದ  ವಿಜಯ ಚಾರ್ಮಾತ, ಲತಾ ಆಜಡ್ಕ,ಅಮರ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು,ಗ್ರಂಥಪಾಲಕರು,ವರ್ತಕರ ಸಂಘದ ಅಧ್ಯಕ್ಷ ರು, ವರ್ತಕರು, ಜೀಪು ಚಾಲಕರು, ಆಟೋಚಾಲಕರು, ಟಾಸ್ಕ್ ಫೋರ್ಸ್ ನ ಸದಸ್ಯರೆಲ್ಲರೂ  ಪಾಲ್ಗೊಂಡು ಸ್ವಚ್ಚತೆ ಮಾಡುವುದರೊಂದಿಗೆ ಅರಿವು ಮೂಡಿಸಿದರು. ಇದೇ ಸಂದರ್ಭ ಎಲ್ಲೆಂದರಲ್ಲಿ ಕಸ ಎಸೆಯದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕಗಳನ್ನು ಅಂಗಡಿಗಳಲ್ಲಿ ಅಳವಡಿಸಲಾಯಿತು.

ಈ ಸಂದರ್ಭದಲ್ಲಿ ವರ್ತಕ  ಕೇಶವ ಕಣ್ಕಲ್ ಇವರು ಟಾಸ್ಕ್ ಫೋರ್ಸ್ ನ ಎಲ್ಲ ಸದಸ್ಯರಿಗೆ ಪಾನೀಯದ ವ್ಯವಸ್ಥೆಯನ್ನು ಮಾಡಿದರು.

ಸೂಚನಾ ಫಲಕ ಅಳವಡಿಕೆ
ಸೂಚನಾ ಫಲಕ ಅಳವಡಿಕೆ
ಸ್ವಚ್ಛತಾ ಅಭಿಯಾನ

ಸೂಚನಾ ಫಲಕ ಅಳವಡಿಕೆ

 

#SwachchBharath | ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನದ ಇಂಪ್ಯಾಕ್ಟ್….‌ | ಇನ್ನೀಗ ಬೇಕಿರುವುದು ಜನರ ಒಲವು… ಆಡಳಿತದ ನೆರವು.. |

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror