ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನದ ಕಾರ್ಯ ಮುಂದುವರಿದಿದೆ. ಆರನೇ ವಾರದ ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್ ಕೆಲಸವು ಗುರುವಾರ ನಡೆಯಿತು. ಈ ಅಭಿಯಾನಕ್ಕೆ ಹೂವಿನ ಅಂಗಡಿಯ ವಿಕಲಚೇತನ ಸಿದ್ದಣ್ಣ ಅವರು ತಮ್ಮ ಅಂಗಡಿಯ ಮುಂದೆ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಿದರು. ಇದೇ ಸಂದರ್ಭ ಜೀಪು ಚಾಲಕ ಮಾಲಕರು ಕೂಡಾ ಅಭಿಯಾನದ ಜೊತೆ ಸೇರಿಕೊಂಡರು. ಗುರುವಾರದ ಸ್ವಚ್ಚತಾ ಅಭಿಯಾನದಲ್ಲಿ ಸ್ವಚ್ಚತೆಯೊಂದಿಗೆ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಭಿಯಾನವನ್ನು ಮುಂದುವರಿಸಲಾಯಿತು.
ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್ ಅಭಿಯಾನಕ್ಕೆ ಸ್ವಯಂಪ್ರೇರಣೆಯಿಂದ ಎಲ್ಲರೂ ಸ್ವಚ್ಚತಾ ಟಾಸ್ಕ್ ಫೋರ್ಸ್ ಕಾರ್ಯಕ್ಕೆ ಕೈಜೋಡಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಧನಪತಿ, ಪಂಚಾಯತ್ ಸದಸ್ಯರಾದ ವಿಜಯ ಚಾರ್ಮಾತ, ಲತಾ ಆಜಡ್ಕ,ಅಮರ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು,ಗ್ರಂಥಪಾಲಕರು,ವರ್ತಕರ ಸಂಘದ ಅಧ್ಯಕ್ಷ ರು, ವರ್ತಕರು, ಜೀಪು ಚಾಲಕರು, ಆಟೋಚಾಲಕರು, ಟಾಸ್ಕ್ ಫೋರ್ಸ್ ನ ಸದಸ್ಯರೆಲ್ಲರೂ ಪಾಲ್ಗೊಂಡು ಸ್ವಚ್ಚತೆ ಮಾಡುವುದರೊಂದಿಗೆ ಅರಿವು ಮೂಡಿಸಿದರು. ಇದೇ ಸಂದರ್ಭ ಎಲ್ಲೆಂದರಲ್ಲಿ ಕಸ ಎಸೆಯದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕಗಳನ್ನು ಅಂಗಡಿಗಳಲ್ಲಿ ಅಳವಡಿಸಲಾಯಿತು.
ಈ ಸಂದರ್ಭದಲ್ಲಿ ವರ್ತಕ ಕೇಶವ ಕಣ್ಕಲ್ ಇವರು ಟಾಸ್ಕ್ ಫೋರ್ಸ್ ನ ಎಲ್ಲ ಸದಸ್ಯರಿಗೆ ಪಾನೀಯದ ವ್ಯವಸ್ಥೆಯನ್ನು ಮಾಡಿದರು.
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…
ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…
ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…
ಬಾಹ್ಯಕಾಶದಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…