The Rural Mirror ಫಾಲೋಅಪ್

#SwachchBharath | ಗುತ್ತಿಗಾರಿನಲ್ಲಿ ಮುಂದುವರಿದ ಸ್ವಚ್ಛತಾ ಅಭಿಯಾನ | ಅಭಿಯಾನಕ್ಕೆ ಕೈಜೋಡಿಸಿದ ವಿಕಲಚೇತನ | ಪೇಟೆಯಲ್ಲಿ ಜಾಗೃತಿ ಫಲಕ |

Share

ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನದ ಕಾರ್ಯ ಮುಂದುವರಿದಿದೆ.  ಆರನೇ ವಾರದ ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್‌ ಕೆಲಸವು ಗುರುವಾರ ನಡೆಯಿತು. ಈ ಅಭಿಯಾನಕ್ಕೆ  ಹೂವಿನ ಅಂಗಡಿಯ ವಿಕಲಚೇತನ ಸಿದ್ದಣ್ಣ ಅವರು ತಮ್ಮ ಅಂಗಡಿಯ ಮುಂದೆ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಿದರು. ಇದೇ ಸಂದರ್ಭ ಜೀಪು ಚಾಲಕ ಮಾಲಕರು ಕೂಡಾ ಅಭಿಯಾನದ ಜೊತೆ ಸೇರಿಕೊಂಡರು. ಗುರುವಾರದ  ಸ್ವಚ್ಚತಾ ಅಭಿಯಾನದಲ್ಲಿ ಸ್ವಚ್ಚತೆಯೊಂದಿಗೆ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಭಿಯಾನವನ್ನು ಮುಂದುವರಿಸಲಾಯಿತು.

ಸ್ವಚ್ಛತಾ ಅಭಿಯಾನಕ್ಕೆ ಸಿದ್ಧಣ್ಣ ಕೈಜೋಡಿಸಿದರು

ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್‌ ಅಭಿಯಾನಕ್ಕೆ  ಸ್ವಯಂಪ್ರೇರಣೆಯಿಂದ ಎಲ್ಲರೂ ಸ್ವಚ್ಚತಾ ಟಾಸ್ಕ್ ಫೋರ್ಸ್ ಕಾರ್ಯಕ್ಕೆ ಕೈಜೋಡಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಧನಪತಿ, ಪಂಚಾಯತ್ ಸದಸ್ಯರಾದ  ವಿಜಯ ಚಾರ್ಮಾತ, ಲತಾ ಆಜಡ್ಕ,ಅಮರ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು,ಗ್ರಂಥಪಾಲಕರು,ವರ್ತಕರ ಸಂಘದ ಅಧ್ಯಕ್ಷ ರು, ವರ್ತಕರು, ಜೀಪು ಚಾಲಕರು, ಆಟೋಚಾಲಕರು, ಟಾಸ್ಕ್ ಫೋರ್ಸ್ ನ ಸದಸ್ಯರೆಲ್ಲರೂ  ಪಾಲ್ಗೊಂಡು ಸ್ವಚ್ಚತೆ ಮಾಡುವುದರೊಂದಿಗೆ ಅರಿವು ಮೂಡಿಸಿದರು. ಇದೇ ಸಂದರ್ಭ ಎಲ್ಲೆಂದರಲ್ಲಿ ಕಸ ಎಸೆಯದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕಗಳನ್ನು ಅಂಗಡಿಗಳಲ್ಲಿ ಅಳವಡಿಸಲಾಯಿತು.

ಈ ಸಂದರ್ಭದಲ್ಲಿ ವರ್ತಕ  ಕೇಶವ ಕಣ್ಕಲ್ ಇವರು ಟಾಸ್ಕ್ ಫೋರ್ಸ್ ನ ಎಲ್ಲ ಸದಸ್ಯರಿಗೆ ಪಾನೀಯದ ವ್ಯವಸ್ಥೆಯನ್ನು ಮಾಡಿದರು.

ಸೂಚನಾ ಫಲಕ ಅಳವಡಿಕೆ
ಸೂಚನಾ ಫಲಕ ಅಳವಡಿಕೆ
ಸ್ವಚ್ಛತಾ ಅಭಿಯಾನ

ಸೂಚನಾ ಫಲಕ ಅಳವಡಿಕೆ

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

5 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

5 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

5 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

13 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

13 hours ago