ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನದ ಕಾರ್ಯ ಮುಂದುವರಿದಿದೆ. ಆರನೇ ವಾರದ ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್ ಕೆಲಸವು ಗುರುವಾರ ನಡೆಯಿತು. ಈ ಅಭಿಯಾನಕ್ಕೆ ಹೂವಿನ ಅಂಗಡಿಯ ವಿಕಲಚೇತನ ಸಿದ್ದಣ್ಣ ಅವರು ತಮ್ಮ ಅಂಗಡಿಯ ಮುಂದೆ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಿದರು. ಇದೇ ಸಂದರ್ಭ ಜೀಪು ಚಾಲಕ ಮಾಲಕರು ಕೂಡಾ ಅಭಿಯಾನದ ಜೊತೆ ಸೇರಿಕೊಂಡರು. ಗುರುವಾರದ ಸ್ವಚ್ಚತಾ ಅಭಿಯಾನದಲ್ಲಿ ಸ್ವಚ್ಚತೆಯೊಂದಿಗೆ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಭಿಯಾನವನ್ನು ಮುಂದುವರಿಸಲಾಯಿತು.
ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್ ಅಭಿಯಾನಕ್ಕೆ ಸ್ವಯಂಪ್ರೇರಣೆಯಿಂದ ಎಲ್ಲರೂ ಸ್ವಚ್ಚತಾ ಟಾಸ್ಕ್ ಫೋರ್ಸ್ ಕಾರ್ಯಕ್ಕೆ ಕೈಜೋಡಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಧನಪತಿ, ಪಂಚಾಯತ್ ಸದಸ್ಯರಾದ ವಿಜಯ ಚಾರ್ಮಾತ, ಲತಾ ಆಜಡ್ಕ,ಅಮರ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು,ಗ್ರಂಥಪಾಲಕರು,ವರ್ತಕರ ಸಂಘದ ಅಧ್ಯಕ್ಷ ರು, ವರ್ತಕರು, ಜೀಪು ಚಾಲಕರು, ಆಟೋಚಾಲಕರು, ಟಾಸ್ಕ್ ಫೋರ್ಸ್ ನ ಸದಸ್ಯರೆಲ್ಲರೂ ಪಾಲ್ಗೊಂಡು ಸ್ವಚ್ಚತೆ ಮಾಡುವುದರೊಂದಿಗೆ ಅರಿವು ಮೂಡಿಸಿದರು. ಇದೇ ಸಂದರ್ಭ ಎಲ್ಲೆಂದರಲ್ಲಿ ಕಸ ಎಸೆಯದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕಗಳನ್ನು ಅಂಗಡಿಗಳಲ್ಲಿ ಅಳವಡಿಸಲಾಯಿತು.
ಈ ಸಂದರ್ಭದಲ್ಲಿ ವರ್ತಕ ಕೇಶವ ಕಣ್ಕಲ್ ಇವರು ಟಾಸ್ಕ್ ಫೋರ್ಸ್ ನ ಎಲ್ಲ ಸದಸ್ಯರಿಗೆ ಪಾನೀಯದ ವ್ಯವಸ್ಥೆಯನ್ನು ಮಾಡಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…