Advertisement
The Rural Mirror ಫಾಲೋಅಪ್

#SwachchBharath | ಗುತ್ತಿಗಾರಿನಲ್ಲಿ ಮುಂದುವರಿದ ಸ್ವಚ್ಛತಾ ಅಭಿಯಾನ | ಅಭಿಯಾನಕ್ಕೆ ಕೈಜೋಡಿಸಿದ ವಿಕಲಚೇತನ | ಪೇಟೆಯಲ್ಲಿ ಜಾಗೃತಿ ಫಲಕ |

Share

ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನದ ಕಾರ್ಯ ಮುಂದುವರಿದಿದೆ.  ಆರನೇ ವಾರದ ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್‌ ಕೆಲಸವು ಗುರುವಾರ ನಡೆಯಿತು. ಈ ಅಭಿಯಾನಕ್ಕೆ  ಹೂವಿನ ಅಂಗಡಿಯ ವಿಕಲಚೇತನ ಸಿದ್ದಣ್ಣ ಅವರು ತಮ್ಮ ಅಂಗಡಿಯ ಮುಂದೆ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಿದರು. ಇದೇ ಸಂದರ್ಭ ಜೀಪು ಚಾಲಕ ಮಾಲಕರು ಕೂಡಾ ಅಭಿಯಾನದ ಜೊತೆ ಸೇರಿಕೊಂಡರು. ಗುರುವಾರದ  ಸ್ವಚ್ಚತಾ ಅಭಿಯಾನದಲ್ಲಿ ಸ್ವಚ್ಚತೆಯೊಂದಿಗೆ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಭಿಯಾನವನ್ನು ಮುಂದುವರಿಸಲಾಯಿತು.

ಸ್ವಚ್ಛತಾ ಅಭಿಯಾನಕ್ಕೆ ಸಿದ್ಧಣ್ಣ ಕೈಜೋಡಿಸಿದರು

ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್‌ ಅಭಿಯಾನಕ್ಕೆ  ಸ್ವಯಂಪ್ರೇರಣೆಯಿಂದ ಎಲ್ಲರೂ ಸ್ವಚ್ಚತಾ ಟಾಸ್ಕ್ ಫೋರ್ಸ್ ಕಾರ್ಯಕ್ಕೆ ಕೈಜೋಡಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಧನಪತಿ, ಪಂಚಾಯತ್ ಸದಸ್ಯರಾದ  ವಿಜಯ ಚಾರ್ಮಾತ, ಲತಾ ಆಜಡ್ಕ,ಅಮರ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು,ಗ್ರಂಥಪಾಲಕರು,ವರ್ತಕರ ಸಂಘದ ಅಧ್ಯಕ್ಷ ರು, ವರ್ತಕರು, ಜೀಪು ಚಾಲಕರು, ಆಟೋಚಾಲಕರು, ಟಾಸ್ಕ್ ಫೋರ್ಸ್ ನ ಸದಸ್ಯರೆಲ್ಲರೂ  ಪಾಲ್ಗೊಂಡು ಸ್ವಚ್ಚತೆ ಮಾಡುವುದರೊಂದಿಗೆ ಅರಿವು ಮೂಡಿಸಿದರು. ಇದೇ ಸಂದರ್ಭ ಎಲ್ಲೆಂದರಲ್ಲಿ ಕಸ ಎಸೆಯದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕಗಳನ್ನು ಅಂಗಡಿಗಳಲ್ಲಿ ಅಳವಡಿಸಲಾಯಿತು.

ಈ ಸಂದರ್ಭದಲ್ಲಿ ವರ್ತಕ  ಕೇಶವ ಕಣ್ಕಲ್ ಇವರು ಟಾಸ್ಕ್ ಫೋರ್ಸ್ ನ ಎಲ್ಲ ಸದಸ್ಯರಿಗೆ ಪಾನೀಯದ ವ್ಯವಸ್ಥೆಯನ್ನು ಮಾಡಿದರು.

ಸೂಚನಾ ಫಲಕ ಅಳವಡಿಕೆ
ಸೂಚನಾ ಫಲಕ ಅಳವಡಿಕೆ
ಸ್ವಚ್ಛತಾ ಅಭಿಯಾನ

ಸೂಚನಾ ಫಲಕ ಅಳವಡಿಕೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

10 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

11 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago