ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನದ ಕಾರ್ಯ ಮುಂದುವರಿದಿದೆ. ಆರನೇ ವಾರದ ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್ ಕೆಲಸವು ಗುರುವಾರ ನಡೆಯಿತು. ಈ ಅಭಿಯಾನಕ್ಕೆ ಹೂವಿನ ಅಂಗಡಿಯ ವಿಕಲಚೇತನ ಸಿದ್ದಣ್ಣ ಅವರು ತಮ್ಮ ಅಂಗಡಿಯ ಮುಂದೆ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಿದರು. ಇದೇ ಸಂದರ್ಭ ಜೀಪು ಚಾಲಕ ಮಾಲಕರು ಕೂಡಾ ಅಭಿಯಾನದ ಜೊತೆ ಸೇರಿಕೊಂಡರು. ಗುರುವಾರದ ಸ್ವಚ್ಚತಾ ಅಭಿಯಾನದಲ್ಲಿ ಸ್ವಚ್ಚತೆಯೊಂದಿಗೆ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಭಿಯಾನವನ್ನು ಮುಂದುವರಿಸಲಾಯಿತು.
ಸ್ವಚ್ಚ ಗ್ರಾಮ ಗುತ್ತಿಗಾರು ಟಾಸ್ಕ್ ಫೋರ್ಸ್ ಅಭಿಯಾನಕ್ಕೆ ಸ್ವಯಂಪ್ರೇರಣೆಯಿಂದ ಎಲ್ಲರೂ ಸ್ವಚ್ಚತಾ ಟಾಸ್ಕ್ ಫೋರ್ಸ್ ಕಾರ್ಯಕ್ಕೆ ಕೈಜೋಡಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಧನಪತಿ, ಪಂಚಾಯತ್ ಸದಸ್ಯರಾದ ವಿಜಯ ಚಾರ್ಮಾತ, ಲತಾ ಆಜಡ್ಕ,ಅಮರ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು,ಗ್ರಂಥಪಾಲಕರು,ವರ್ತಕರ ಸಂಘದ ಅಧ್ಯಕ್ಷ ರು, ವರ್ತಕರು, ಜೀಪು ಚಾಲಕರು, ಆಟೋಚಾಲಕರು, ಟಾಸ್ಕ್ ಫೋರ್ಸ್ ನ ಸದಸ್ಯರೆಲ್ಲರೂ ಪಾಲ್ಗೊಂಡು ಸ್ವಚ್ಚತೆ ಮಾಡುವುದರೊಂದಿಗೆ ಅರಿವು ಮೂಡಿಸಿದರು. ಇದೇ ಸಂದರ್ಭ ಎಲ್ಲೆಂದರಲ್ಲಿ ಕಸ ಎಸೆಯದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕಗಳನ್ನು ಅಂಗಡಿಗಳಲ್ಲಿ ಅಳವಡಿಸಲಾಯಿತು.
ಈ ಸಂದರ್ಭದಲ್ಲಿ ವರ್ತಕ ಕೇಶವ ಕಣ್ಕಲ್ ಇವರು ಟಾಸ್ಕ್ ಫೋರ್ಸ್ ನ ಎಲ್ಲ ಸದಸ್ಯರಿಗೆ ಪಾನೀಯದ ವ್ಯವಸ್ಥೆಯನ್ನು ಮಾಡಿದರು.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…