The Rural Mirror ಕಾಳಜಿ

#ಸ್ವಚ್ಛಸುಳ್ಯ | ಕ್ಯಾಮರಾ ಕಣ್ಣು ಮಾತ್ರವಲ್ಲ ಎಲ್ಲರ ಕಣ್ಣು ಎಚ್ಚರ ಇರಲಿ | ನಮ್ಮೆಲ್ಲರ ಸ್ವಚ್ಛ ಸುಳ್ಯಕ್ಕಾಗಿ ಒಂದು ಹೆಜ್ಜೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸ್ವಚ್ಛ ಊರು, ಸ್ವಚ್ಛ ಗ್ರಾಮ ನಮ್ಮೆಲ್ಲರಿಗೂ ಹೆಮ್ಮೆ. ಆಡಳಿತವು ಸದಾ ಸ್ವಚ್ಛತೆಯ ಕಡೆಗೆ ಗಮನ ಹರಿಸುತ್ತದೆ. ಆದರೆ ವಿದ್ಯಾವಂತ ಜನರೇ ಎಲ್ಲೆಂದರಲ್ಲಿ ಕಸ , ತ್ಯಾಜ್ಯ ಎಸೆಯುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದೀಗ ಕ್ಯಾಮಾರ ಕಣ್ಣಿನ ಜೊತೆಗೆ ಸ್ವಚ್ಛ ನಗರ ಬಯಸುವ ಪ್ರತೀ ವ್ಯಕ್ತಿಯ ಕಣ್ಣು ಎಚ್ಚರವಾಗಿರಲಿ. ಕಸ ಎಸೆಯುವವರನ್ನು ಜಾಗೃತಗೊಳಿಸೋಣ. ಆಡಳಿತದ ಜೊತೆಗೆ ಕೈಜೋಡಿಸುತ್ತಾ ಸ್ವಚ್ಛತೆಯ ಕಡೆಗೆ ಒಂದು ಹೆಜ್ಜೆ ಇಡೋಣ.

Advertisement
Advertisement

ಸುಳ್ಯ ನಗರ ಸ್ವಚ್ಛವಾಗಬೇಕು ಎಂದು ಜನರು ಒತ್ತಾಯ ಮಾಡುತ್ತಾರೆ. ಆಗಾಗ ಸಾಮಾಜಿಕ ಜಾಲತಾಣಗಳಲ್ಲೂ ಕಸದ ರಾಶಿ ಕಾಣುತ್ತದೆ. ಕಸ ಎಸೆಯುವವರ ವಿರುದ್ಧ ದಂಡ ವಿಧಿಸುವ ಪ್ರಯೋಗವೂ ಅಲ್ಲಲ್ಲಿ ನಡೆಯಿತು. ಆದರೂ ಕಸ ಎಸೆಯುವ ಮಂದಿಗೆ ಕಡಿಮೆ ಇಲ್ಲ. ನಗರದ ಮಧ್ಯದಲ್ಲಿಯೇ ಕಸದ ತೊಟ್ಟಿ ಇದ್ದರೂ ಎಲ್ಲೆಂದರಲ್ಲಿ ಕಸ ಎಸೆಯುವುದು  ಕಾಣುತ್ತದೆ. ಹೀಗಾಗಿ ಸ್ವಚ್ಛ ಸುಳ್ಯದ , ಸ್ವಚ್ಛ ನಗರದ ಕನಸು ನನಸಾಗಲೇ ಇಲ್ಲ. ಇದೀಗ ಸುಳ್ಯ ನಗರ ಪಂಚಾಯತ್‌ ಜಾಗೃತವಾಗಿದೆ. ಕ್ಯಾಮಾರಾ ಅಲ್ಲಲ್ಲಿ ಇರಿಸಿದೆ ಜೊತೆಗೆ ಕಸ ಎಸೆಯುವವರ ಫೋಟೊ ತೆಗೆಯುತ್ತಿದೆ.

ಸುಳ್ಯ ನಗರದಿಂದ ತೊಡಗಿ ಜಾಲ್ಸೂರುವರೆಗೂ ಹಾಗೂ ಸುಳ್ಯ ನಗರದಿಂದ  ಅರಂಬೂರ್ ನ ವರೆಗೆ ರಾಜ್ಯ ಹೆದ್ದಾರಿ ಎರಡು ಬದಿಯಲ್ಲಿ ಕಸ ಎಸೆಯಲಾಗಿದೆ. ಹೀಗೆ ಕಸ ಎಸೆಯುವವರ ಫೋಟೊ ಸಹಿತ ಆಡಳಿತಕ್ಕೆ ನೀಡಲಾಗಿದೆ. ಆಡಳಿತವು ಕೆಲವು ಕಡೆ ಅಂತಹವರಿಗೆ ದಂಡವೂ ವಿಧಿಸಿದೆ. ಹಾಗಿದ್ದರೂ ಯಾವುದೇ ಪ್ರಯೋಜನ ಕಾಣಲಿಲ್ಲ. ಈಗ ಕಸ ಎಸೆಯುವ ವೇಳೆಯೇ ಫೋಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆಯನ್ನು ತಿಳಿಸಲಾಗುತ್ತಿದೆ. ಆದರೂ ವಿದ್ಯಾವಂತ ಜನರಿಗೇ ಅರ್ಥವಾಗುತ್ತಿಲ್ಲ ಎನ್ನುವುದು  ವಿಷಾದ.

Advertisement

ನಾವೆಲ್ಲರೂ ಆಡಳಿತ ಜೊತೆ ನಮಗಾಗಿಯೇ, ಸ್ವಚ್ಛ ಗ್ರಾಮಕ್ಕಾಗಿ ಕಸ, ತ್ಯಾಜ್ಯ ಎಲ್ಲೆಂದರಲ್ಲಿ ಎಸೆಯದೇ ಇರೋಣ. ಗ್ರಾಮೀಣ ಭಾರತವೂ ಸ್ವಚ್ಛತೆಯಿಂದ ಕೂಡಿರಲಿ ಇದಕ್ಕಾಗಿ ಪ್ರಯತ್ನಿಸೋಣ. ಇನ್ನೂ ಎಲ್ಲೆಂದರಲ್ಲಿ ತ್ಯಾಜ್ಯ ಎಸೆದರೆ, ಎಸೆಯುವವರ ಫೋಟೊ ಹಾಗೂ ವಿಡಿಯೋ ನಮಗೂ ವ್ಯಾಟ್ಸಪ್‌ ಮೂಲಕ ಕಳುಹಿಸಿ, ನಾವೂ  ಸುಳ್ಯದ ಯಾವ ಸ್ಥಳದಲ್ಲಿ ತ್ಯಾಜ್ಯ ಎಸೆಯಬಾರದು ತಿಳಿಸುತ್ತೇವೆ. ಆಡಳಿತದ ಜೊತೆ ನಾವೂ ಇದ್ದೇವೆ. ನಮ್ಮ ವ್ಯಾಟ್ಸಪ್‌ ಸಂಖ್ಯೆ 9449125447 .

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

6 minutes ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?

ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…

2 hours ago

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

10 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

12 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

17 hours ago