Advertisement
The Rural Mirror ಕಾಳಜಿ

#ಸ್ವಚ್ಛಸುಳ್ಯ | ಕ್ಯಾಮರಾ ಕಣ್ಣು ಮಾತ್ರವಲ್ಲ ಎಲ್ಲರ ಕಣ್ಣು ಎಚ್ಚರ ಇರಲಿ | ನಮ್ಮೆಲ್ಲರ ಸ್ವಚ್ಛ ಸುಳ್ಯಕ್ಕಾಗಿ ಒಂದು ಹೆಜ್ಜೆ |

Share

ಸ್ವಚ್ಛ ಊರು, ಸ್ವಚ್ಛ ಗ್ರಾಮ ನಮ್ಮೆಲ್ಲರಿಗೂ ಹೆಮ್ಮೆ. ಆಡಳಿತವು ಸದಾ ಸ್ವಚ್ಛತೆಯ ಕಡೆಗೆ ಗಮನ ಹರಿಸುತ್ತದೆ. ಆದರೆ ವಿದ್ಯಾವಂತ ಜನರೇ ಎಲ್ಲೆಂದರಲ್ಲಿ ಕಸ , ತ್ಯಾಜ್ಯ ಎಸೆಯುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದೀಗ ಕ್ಯಾಮಾರ ಕಣ್ಣಿನ ಜೊತೆಗೆ ಸ್ವಚ್ಛ ನಗರ ಬಯಸುವ ಪ್ರತೀ ವ್ಯಕ್ತಿಯ ಕಣ್ಣು ಎಚ್ಚರವಾಗಿರಲಿ. ಕಸ ಎಸೆಯುವವರನ್ನು ಜಾಗೃತಗೊಳಿಸೋಣ. ಆಡಳಿತದ ಜೊತೆಗೆ ಕೈಜೋಡಿಸುತ್ತಾ ಸ್ವಚ್ಛತೆಯ ಕಡೆಗೆ ಒಂದು ಹೆಜ್ಜೆ ಇಡೋಣ.

ಸುಳ್ಯ ನಗರ ಸ್ವಚ್ಛವಾಗಬೇಕು ಎಂದು ಜನರು ಒತ್ತಾಯ ಮಾಡುತ್ತಾರೆ. ಆಗಾಗ ಸಾಮಾಜಿಕ ಜಾಲತಾಣಗಳಲ್ಲೂ ಕಸದ ರಾಶಿ ಕಾಣುತ್ತದೆ. ಕಸ ಎಸೆಯುವವರ ವಿರುದ್ಧ ದಂಡ ವಿಧಿಸುವ ಪ್ರಯೋಗವೂ ಅಲ್ಲಲ್ಲಿ ನಡೆಯಿತು. ಆದರೂ ಕಸ ಎಸೆಯುವ ಮಂದಿಗೆ ಕಡಿಮೆ ಇಲ್ಲ. ನಗರದ ಮಧ್ಯದಲ್ಲಿಯೇ ಕಸದ ತೊಟ್ಟಿ ಇದ್ದರೂ ಎಲ್ಲೆಂದರಲ್ಲಿ ಕಸ ಎಸೆಯುವುದು  ಕಾಣುತ್ತದೆ. ಹೀಗಾಗಿ ಸ್ವಚ್ಛ ಸುಳ್ಯದ , ಸ್ವಚ್ಛ ನಗರದ ಕನಸು ನನಸಾಗಲೇ ಇಲ್ಲ. ಇದೀಗ ಸುಳ್ಯ ನಗರ ಪಂಚಾಯತ್‌ ಜಾಗೃತವಾಗಿದೆ. ಕ್ಯಾಮಾರಾ ಅಲ್ಲಲ್ಲಿ ಇರಿಸಿದೆ ಜೊತೆಗೆ ಕಸ ಎಸೆಯುವವರ ಫೋಟೊ ತೆಗೆಯುತ್ತಿದೆ.

ಸುಳ್ಯ ನಗರದಿಂದ ತೊಡಗಿ ಜಾಲ್ಸೂರುವರೆಗೂ ಹಾಗೂ ಸುಳ್ಯ ನಗರದಿಂದ  ಅರಂಬೂರ್ ನ ವರೆಗೆ ರಾಜ್ಯ ಹೆದ್ದಾರಿ ಎರಡು ಬದಿಯಲ್ಲಿ ಕಸ ಎಸೆಯಲಾಗಿದೆ. ಹೀಗೆ ಕಸ ಎಸೆಯುವವರ ಫೋಟೊ ಸಹಿತ ಆಡಳಿತಕ್ಕೆ ನೀಡಲಾಗಿದೆ. ಆಡಳಿತವು ಕೆಲವು ಕಡೆ ಅಂತಹವರಿಗೆ ದಂಡವೂ ವಿಧಿಸಿದೆ. ಹಾಗಿದ್ದರೂ ಯಾವುದೇ ಪ್ರಯೋಜನ ಕಾಣಲಿಲ್ಲ. ಈಗ ಕಸ ಎಸೆಯುವ ವೇಳೆಯೇ ಫೋಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆಯನ್ನು ತಿಳಿಸಲಾಗುತ್ತಿದೆ. ಆದರೂ ವಿದ್ಯಾವಂತ ಜನರಿಗೇ ಅರ್ಥವಾಗುತ್ತಿಲ್ಲ ಎನ್ನುವುದು  ವಿಷಾದ.

ನಾವೆಲ್ಲರೂ ಆಡಳಿತ ಜೊತೆ ನಮಗಾಗಿಯೇ, ಸ್ವಚ್ಛ ಗ್ರಾಮಕ್ಕಾಗಿ ಕಸ, ತ್ಯಾಜ್ಯ ಎಲ್ಲೆಂದರಲ್ಲಿ ಎಸೆಯದೇ ಇರೋಣ. ಗ್ರಾಮೀಣ ಭಾರತವೂ ಸ್ವಚ್ಛತೆಯಿಂದ ಕೂಡಿರಲಿ ಇದಕ್ಕಾಗಿ ಪ್ರಯತ್ನಿಸೋಣ. ಇನ್ನೂ ಎಲ್ಲೆಂದರಲ್ಲಿ ತ್ಯಾಜ್ಯ ಎಸೆದರೆ, ಎಸೆಯುವವರ ಫೋಟೊ ಹಾಗೂ ವಿಡಿಯೋ ನಮಗೂ ವ್ಯಾಟ್ಸಪ್‌ ಮೂಲಕ ಕಳುಹಿಸಿ, ನಾವೂ  ಸುಳ್ಯದ ಯಾವ ಸ್ಥಳದಲ್ಲಿ ತ್ಯಾಜ್ಯ ಎಸೆಯಬಾರದು ತಿಳಿಸುತ್ತೇವೆ. ಆಡಳಿತದ ಜೊತೆ ನಾವೂ ಇದ್ದೇವೆ. ನಮ್ಮ ವ್ಯಾಟ್ಸಪ್‌ ಸಂಖ್ಯೆ 9449125447 .

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

9 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

11 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

23 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

24 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago