Advertisement
The Rural Mirror ಕಾಳಜಿ

#ಸ್ವಚ್ಛಸುಳ್ಯ | ಕ್ಯಾಮರಾ ಕಣ್ಣು ಮಾತ್ರವಲ್ಲ ಎಲ್ಲರ ಕಣ್ಣು ಎಚ್ಚರ ಇರಲಿ | ನಮ್ಮೆಲ್ಲರ ಸ್ವಚ್ಛ ಸುಳ್ಯಕ್ಕಾಗಿ ಒಂದು ಹೆಜ್ಜೆ |

Share

ಸ್ವಚ್ಛ ಊರು, ಸ್ವಚ್ಛ ಗ್ರಾಮ ನಮ್ಮೆಲ್ಲರಿಗೂ ಹೆಮ್ಮೆ. ಆಡಳಿತವು ಸದಾ ಸ್ವಚ್ಛತೆಯ ಕಡೆಗೆ ಗಮನ ಹರಿಸುತ್ತದೆ. ಆದರೆ ವಿದ್ಯಾವಂತ ಜನರೇ ಎಲ್ಲೆಂದರಲ್ಲಿ ಕಸ , ತ್ಯಾಜ್ಯ ಎಸೆಯುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದೀಗ ಕ್ಯಾಮಾರ ಕಣ್ಣಿನ ಜೊತೆಗೆ ಸ್ವಚ್ಛ ನಗರ ಬಯಸುವ ಪ್ರತೀ ವ್ಯಕ್ತಿಯ ಕಣ್ಣು ಎಚ್ಚರವಾಗಿರಲಿ. ಕಸ ಎಸೆಯುವವರನ್ನು ಜಾಗೃತಗೊಳಿಸೋಣ. ಆಡಳಿತದ ಜೊತೆಗೆ ಕೈಜೋಡಿಸುತ್ತಾ ಸ್ವಚ್ಛತೆಯ ಕಡೆಗೆ ಒಂದು ಹೆಜ್ಜೆ ಇಡೋಣ.

ಸುಳ್ಯ ನಗರ ಸ್ವಚ್ಛವಾಗಬೇಕು ಎಂದು ಜನರು ಒತ್ತಾಯ ಮಾಡುತ್ತಾರೆ. ಆಗಾಗ ಸಾಮಾಜಿಕ ಜಾಲತಾಣಗಳಲ್ಲೂ ಕಸದ ರಾಶಿ ಕಾಣುತ್ತದೆ. ಕಸ ಎಸೆಯುವವರ ವಿರುದ್ಧ ದಂಡ ವಿಧಿಸುವ ಪ್ರಯೋಗವೂ ಅಲ್ಲಲ್ಲಿ ನಡೆಯಿತು. ಆದರೂ ಕಸ ಎಸೆಯುವ ಮಂದಿಗೆ ಕಡಿಮೆ ಇಲ್ಲ. ನಗರದ ಮಧ್ಯದಲ್ಲಿಯೇ ಕಸದ ತೊಟ್ಟಿ ಇದ್ದರೂ ಎಲ್ಲೆಂದರಲ್ಲಿ ಕಸ ಎಸೆಯುವುದು  ಕಾಣುತ್ತದೆ. ಹೀಗಾಗಿ ಸ್ವಚ್ಛ ಸುಳ್ಯದ , ಸ್ವಚ್ಛ ನಗರದ ಕನಸು ನನಸಾಗಲೇ ಇಲ್ಲ. ಇದೀಗ ಸುಳ್ಯ ನಗರ ಪಂಚಾಯತ್‌ ಜಾಗೃತವಾಗಿದೆ. ಕ್ಯಾಮಾರಾ ಅಲ್ಲಲ್ಲಿ ಇರಿಸಿದೆ ಜೊತೆಗೆ ಕಸ ಎಸೆಯುವವರ ಫೋಟೊ ತೆಗೆಯುತ್ತಿದೆ.

ಸುಳ್ಯ ನಗರದಿಂದ ತೊಡಗಿ ಜಾಲ್ಸೂರುವರೆಗೂ ಹಾಗೂ ಸುಳ್ಯ ನಗರದಿಂದ  ಅರಂಬೂರ್ ನ ವರೆಗೆ ರಾಜ್ಯ ಹೆದ್ದಾರಿ ಎರಡು ಬದಿಯಲ್ಲಿ ಕಸ ಎಸೆಯಲಾಗಿದೆ. ಹೀಗೆ ಕಸ ಎಸೆಯುವವರ ಫೋಟೊ ಸಹಿತ ಆಡಳಿತಕ್ಕೆ ನೀಡಲಾಗಿದೆ. ಆಡಳಿತವು ಕೆಲವು ಕಡೆ ಅಂತಹವರಿಗೆ ದಂಡವೂ ವಿಧಿಸಿದೆ. ಹಾಗಿದ್ದರೂ ಯಾವುದೇ ಪ್ರಯೋಜನ ಕಾಣಲಿಲ್ಲ. ಈಗ ಕಸ ಎಸೆಯುವ ವೇಳೆಯೇ ಫೋಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆಯನ್ನು ತಿಳಿಸಲಾಗುತ್ತಿದೆ. ಆದರೂ ವಿದ್ಯಾವಂತ ಜನರಿಗೇ ಅರ್ಥವಾಗುತ್ತಿಲ್ಲ ಎನ್ನುವುದು  ವಿಷಾದ.

ನಾವೆಲ್ಲರೂ ಆಡಳಿತ ಜೊತೆ ನಮಗಾಗಿಯೇ, ಸ್ವಚ್ಛ ಗ್ರಾಮಕ್ಕಾಗಿ ಕಸ, ತ್ಯಾಜ್ಯ ಎಲ್ಲೆಂದರಲ್ಲಿ ಎಸೆಯದೇ ಇರೋಣ. ಗ್ರಾಮೀಣ ಭಾರತವೂ ಸ್ವಚ್ಛತೆಯಿಂದ ಕೂಡಿರಲಿ ಇದಕ್ಕಾಗಿ ಪ್ರಯತ್ನಿಸೋಣ. ಇನ್ನೂ ಎಲ್ಲೆಂದರಲ್ಲಿ ತ್ಯಾಜ್ಯ ಎಸೆದರೆ, ಎಸೆಯುವವರ ಫೋಟೊ ಹಾಗೂ ವಿಡಿಯೋ ನಮಗೂ ವ್ಯಾಟ್ಸಪ್‌ ಮೂಲಕ ಕಳುಹಿಸಿ, ನಾವೂ  ಸುಳ್ಯದ ಯಾವ ಸ್ಥಳದಲ್ಲಿ ತ್ಯಾಜ್ಯ ಎಸೆಯಬಾರದು ತಿಳಿಸುತ್ತೇವೆ. ಆಡಳಿತದ ಜೊತೆ ನಾವೂ ಇದ್ದೇವೆ. ನಮ್ಮ ವ್ಯಾಟ್ಸಪ್‌ ಸಂಖ್ಯೆ 9449125447 .

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

5 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

7 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

14 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

20 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago