Advertisement
The Rural Mirror ಕಾಳಜಿ

#ಸ್ವಚ್ಛಸುಳ್ಯ | ಕ್ಯಾಮರಾ ಕಣ್ಣು ಮಾತ್ರವಲ್ಲ ಎಲ್ಲರ ಕಣ್ಣು ಎಚ್ಚರ ಇರಲಿ | ನಮ್ಮೆಲ್ಲರ ಸ್ವಚ್ಛ ಸುಳ್ಯಕ್ಕಾಗಿ ಒಂದು ಹೆಜ್ಜೆ |

Share

ಸ್ವಚ್ಛ ಊರು, ಸ್ವಚ್ಛ ಗ್ರಾಮ ನಮ್ಮೆಲ್ಲರಿಗೂ ಹೆಮ್ಮೆ. ಆಡಳಿತವು ಸದಾ ಸ್ವಚ್ಛತೆಯ ಕಡೆಗೆ ಗಮನ ಹರಿಸುತ್ತದೆ. ಆದರೆ ವಿದ್ಯಾವಂತ ಜನರೇ ಎಲ್ಲೆಂದರಲ್ಲಿ ಕಸ , ತ್ಯಾಜ್ಯ ಎಸೆಯುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದೀಗ ಕ್ಯಾಮಾರ ಕಣ್ಣಿನ ಜೊತೆಗೆ ಸ್ವಚ್ಛ ನಗರ ಬಯಸುವ ಪ್ರತೀ ವ್ಯಕ್ತಿಯ ಕಣ್ಣು ಎಚ್ಚರವಾಗಿರಲಿ. ಕಸ ಎಸೆಯುವವರನ್ನು ಜಾಗೃತಗೊಳಿಸೋಣ. ಆಡಳಿತದ ಜೊತೆಗೆ ಕೈಜೋಡಿಸುತ್ತಾ ಸ್ವಚ್ಛತೆಯ ಕಡೆಗೆ ಒಂದು ಹೆಜ್ಜೆ ಇಡೋಣ.

ಸುಳ್ಯ ನಗರ ಸ್ವಚ್ಛವಾಗಬೇಕು ಎಂದು ಜನರು ಒತ್ತಾಯ ಮಾಡುತ್ತಾರೆ. ಆಗಾಗ ಸಾಮಾಜಿಕ ಜಾಲತಾಣಗಳಲ್ಲೂ ಕಸದ ರಾಶಿ ಕಾಣುತ್ತದೆ. ಕಸ ಎಸೆಯುವವರ ವಿರುದ್ಧ ದಂಡ ವಿಧಿಸುವ ಪ್ರಯೋಗವೂ ಅಲ್ಲಲ್ಲಿ ನಡೆಯಿತು. ಆದರೂ ಕಸ ಎಸೆಯುವ ಮಂದಿಗೆ ಕಡಿಮೆ ಇಲ್ಲ. ನಗರದ ಮಧ್ಯದಲ್ಲಿಯೇ ಕಸದ ತೊಟ್ಟಿ ಇದ್ದರೂ ಎಲ್ಲೆಂದರಲ್ಲಿ ಕಸ ಎಸೆಯುವುದು  ಕಾಣುತ್ತದೆ. ಹೀಗಾಗಿ ಸ್ವಚ್ಛ ಸುಳ್ಯದ , ಸ್ವಚ್ಛ ನಗರದ ಕನಸು ನನಸಾಗಲೇ ಇಲ್ಲ. ಇದೀಗ ಸುಳ್ಯ ನಗರ ಪಂಚಾಯತ್‌ ಜಾಗೃತವಾಗಿದೆ. ಕ್ಯಾಮಾರಾ ಅಲ್ಲಲ್ಲಿ ಇರಿಸಿದೆ ಜೊತೆಗೆ ಕಸ ಎಸೆಯುವವರ ಫೋಟೊ ತೆಗೆಯುತ್ತಿದೆ.

ಸುಳ್ಯ ನಗರದಿಂದ ತೊಡಗಿ ಜಾಲ್ಸೂರುವರೆಗೂ ಹಾಗೂ ಸುಳ್ಯ ನಗರದಿಂದ  ಅರಂಬೂರ್ ನ ವರೆಗೆ ರಾಜ್ಯ ಹೆದ್ದಾರಿ ಎರಡು ಬದಿಯಲ್ಲಿ ಕಸ ಎಸೆಯಲಾಗಿದೆ. ಹೀಗೆ ಕಸ ಎಸೆಯುವವರ ಫೋಟೊ ಸಹಿತ ಆಡಳಿತಕ್ಕೆ ನೀಡಲಾಗಿದೆ. ಆಡಳಿತವು ಕೆಲವು ಕಡೆ ಅಂತಹವರಿಗೆ ದಂಡವೂ ವಿಧಿಸಿದೆ. ಹಾಗಿದ್ದರೂ ಯಾವುದೇ ಪ್ರಯೋಜನ ಕಾಣಲಿಲ್ಲ. ಈಗ ಕಸ ಎಸೆಯುವ ವೇಳೆಯೇ ಫೋಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆಯನ್ನು ತಿಳಿಸಲಾಗುತ್ತಿದೆ. ಆದರೂ ವಿದ್ಯಾವಂತ ಜನರಿಗೇ ಅರ್ಥವಾಗುತ್ತಿಲ್ಲ ಎನ್ನುವುದು  ವಿಷಾದ.

ನಾವೆಲ್ಲರೂ ಆಡಳಿತ ಜೊತೆ ನಮಗಾಗಿಯೇ, ಸ್ವಚ್ಛ ಗ್ರಾಮಕ್ಕಾಗಿ ಕಸ, ತ್ಯಾಜ್ಯ ಎಲ್ಲೆಂದರಲ್ಲಿ ಎಸೆಯದೇ ಇರೋಣ. ಗ್ರಾಮೀಣ ಭಾರತವೂ ಸ್ವಚ್ಛತೆಯಿಂದ ಕೂಡಿರಲಿ ಇದಕ್ಕಾಗಿ ಪ್ರಯತ್ನಿಸೋಣ. ಇನ್ನೂ ಎಲ್ಲೆಂದರಲ್ಲಿ ತ್ಯಾಜ್ಯ ಎಸೆದರೆ, ಎಸೆಯುವವರ ಫೋಟೊ ಹಾಗೂ ವಿಡಿಯೋ ನಮಗೂ ವ್ಯಾಟ್ಸಪ್‌ ಮೂಲಕ ಕಳುಹಿಸಿ, ನಾವೂ  ಸುಳ್ಯದ ಯಾವ ಸ್ಥಳದಲ್ಲಿ ತ್ಯಾಜ್ಯ ಎಸೆಯಬಾರದು ತಿಳಿಸುತ್ತೇವೆ. ಆಡಳಿತದ ಜೊತೆ ನಾವೂ ಇದ್ದೇವೆ. ನಮ್ಮ ವ್ಯಾಟ್ಸಪ್‌ ಸಂಖ್ಯೆ 9449125447 .

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

16 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

17 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago