Advertisement
MIRROR FOCUS

ದ ಕ ಜಿಲ್ಲೆಯಲ್ಲಿ ಯಶಸ್ವಿಯಾದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ | 15 ದಿನ, 56 ಲಕ್ಷ ಜನ ಅಭಿಯಾನ |

Share

ದ ಕ ಜಿಲ್ಲೆಯ 352 ಗ್ರಾಮ, 1779 ಪ್ರೌಢ, ಪ್ರಾಥಮಿಕ, 102 ಪಿ.ಯು ಕಾಲೇಜು, 73 ಪದವಿ ಕಾಲೇಜುಗಳಲ್ಲಿ ಸ್ವಚ್ಛತೆಯೆ ಸೇವೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

Advertisement
Advertisement

ದಕ ಜಿಲ್ಲೆಯಾದ್ಯಂತ ನಡೆದ ‘ಸ್ವಚ್ಛತಾ ಹಿ ಸೇವಾ ಅಭಿಯಾನ’ ಸ್ವಚ್ಛತೆಯೇ ಸೇವೆ ಅಭಿಯಾನ ಸೆಪ್ಟಂಬರ್ 15 ರಿಂದ ಅಕ್ಟೋಬರ್ 2 ರವರೆಗೆ ನಡೆದಿದ್ದು ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 43 ಲಕ್ಷ ವ್ಯಕ್ತಿಗಳು ಕೈ ಜೋಡಿಸಿದ್ದಾರೆ. 9 ತಾಲೂಕಿನ ಒಂದು ಕೇಂದ್ರ ಗ್ರಾಮ ಪಂಚಾಯತ್ ಆಯ್ದುಕೊಂಡು ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಈ ಅವಧಿಯಲ್ಲಿ ರೈಲ್ವೆ ನಿಲ್ದಾಣ, ರಸ್ತೆಯ ಇಕ್ಕೆಲಗಳು, ಶಾಲಾ ಸುತ್ತ –ಮುತ್ತ, ಇತಿಹಾಸಿಕ ದೇವಾಲಯ, ಪ್ರವಾಸೋದ್ಯಮ ತಾಣ, ಬೀಚ್ ಸ್ವಚ್ಛತೆ, ಪ್ರತಿಜ್ಞಾ ವಿಧಿ ಬೋಧನೆ ನಡೆದವು.

Advertisement

ಬದಲಾವಣೆಗಾಗಿ ಅಭಿಯಾನ : ಜನರ ಮನೋಭಾವ ಬದಲಾವಣೆ ಮಾಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವು ಯಶಸ್ವಿಯಾಗಿದ್ದು, ರೈಲು ಹಳಿಗಳ ಸ್ವಚ್ಛತೆ, ಪ್ರಮುಖ ನಿಲ್ದಾಣಗಳಿಗೆ ತೆರಳುವ ಮಾರ್ಗಗಳು, ಮನೆ ಮನೆಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ಮೂಲನೆಗೆ ವಿಶೇಷ ಒತ್ತು ನೀಡಲಾಗಿದೆ. ಈ ಅಭಿಯಾನವು ಸ್ವಚ್ಛ ಸಂವಾದ, ಸ್ವಚ್ಛ ಪರಿಸರ, ಸ್ವಚ್ಛ ಗ್ರಾಮ, ಸ್ವಚ್ಛ ಪರಿಸರ, ಸ್ವಚ್ಛ ಆಹಾರ್ ಮತ್ತು ಸ್ವಚ್ಛ ಪ್ರವಾಸಿ ತಾಣ ಈ ರೀತಿಯಾಗಿ ನಡೆದಿದೆ.

15 ದಿನ, 56 ಲಕ್ಷ ಜನ ಅಭಿಯಾನ: ಸ್ವಚ್ಛತಾ ಹಿ ಸೇವಾ ಅಭಿಯಾನದ ಮೊದಲ ದಿನಗಳಲ್ಲಿ ಸಾರ್ವಜನಿಕ ಭಾಗೀಧಾರಿಕೆ ಕಡಿಮೆ ಇತ್ತು. ಕ್ರಮೇಣ ಜನರ ಪಾಲ್ಗೊಳ್ಳುವಿಕೆ ಜಾಸ್ತಿಯಾಯಿತು. ಬರೋಬ್ಬರಿ 53 ಲಕ್ಷಕ್ಕೂ ಹೆಚ್ಚು ಜನರು/ವ್ಯಕ್ತಿಗಳು ಉತ್ಸಾಹದಿಂದ ಭಾಗವಹಿಸಿದರು. ಸಾಮೂಹಿಕ 1,11,55,879 ಮಾನವ-ಗಂಟೆಗಳನ್ನು ಅಭಿಯಾನಕ್ಕೆ ಮೀಸಲಿಟ್ಟರು.

Advertisement

ಗ್ರಾಮ ಪಂಚಾಯತ್ ನ ಒಟ್ಟು 352 ಗ್ರಾಮಗಳು ಸೇರಿದಂತೆ ವೈಯುಕ್ತಿಕ ಮನೆಗಳು, ಬಸ್ಸು, ರೈಲು ನಿಲ್ದಾಣಗಳಲ್ಲಿ ತ್ಯಾಜ್ಯ ವಿಲೇವಾರಿ ಕುರಿತು ಮಾಹಿತಿ ನೀಡಲಾಯಿತು. ಪಂಚಾಯತ್ ವ್ಯಾಪ್ತಿ, ಶಾಲೆ , ಕಾಲೇಜು ಹಾಗೂ ವಿವಿಧ ಸಂಘಟನೆಗಳು ಸೇರಿ ಪ್ರತಿಜ್ಞಾ ವಿಧಿ ಸ್ವೀಕಾರ, ಜಾಥಗಳನ್ನು ಕೈಗೊಂಡವು.

ಬಯಲು ಮುಕ್ತ ಶೌಚಾಲಯ : ಗ್ರಾಮಾಂತರ ಪ್ರದೇಶಗಳಲ್ಲಿ ನಿರ್ಮಾಣ ಆಗಿರುವ ಸಾರ್ವಜನಿಕ ಶೌಚಾಲಯ, ಶಾಲಾ ಕಾಲೇಜುಗಳಲ್ಲಿ ಮತ್ತು ವೈಯುಕ್ತಿಕ ಶೌಚಾಲಯ ಬಳಸುವಿಕೆ ಅಭಿಯಾನದ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿತ್ತು. ಮಾಹಿತಿ, ಶಿಕ್ಷಣ ಮತ್ತು ಸಂವಹನ ಅಭಿಯಾನಗಳು ಮತ್ತು ಸಂದೇಶವನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಹರಡುವ ಮೂಲಕ ಜನರಿಕೆ ಮಹತ್ವವನ್ನು ಮನವರಿಕೆ ಮಾಡಲಾಯಿತು.

Advertisement

ಗ್ರಾಮಗಳ ಸ್ವಚ್ಛತೆಗೆ ಆದ್ಯತೆ  : ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ವಚ್ಛ ಸಂಕೀರ್ಣಗಳ ಕುರಿತಾಗಿ ಜನರಿಗೆ ಮನವರಿಕೆ ಮಾಡುವ ಕಾರ್ಯಕ್ರಮ ಈ ಅವಧಿಯಲ್ಲಿ ಮಾಡಲಾಯಿತು. ಪಂಚಾಯತ್ ನ ಸ್ವಚ್ಛ ವಾಹಿನಿಗಳ ಮೂಲಕ ಮನೆ ಮನೆಗಳಿಂದ ತ್ಯಾಜ್ಯ ಸಂಗ್ರಹಣೆ – ವಿಂಗಡಣೆ ಕುರಿತಾಗಿ ಜಾಗೃತಿ ಮೂಡಿಸಲಾಯಿತು.

ಸಮಗ್ರ ಘನತ್ಯಾಜ್ಯ ನಿರ್ವಹಣೆ – ಜಾಗೃತಿ :ಈ ಅವಧಿಯಲ್ಲಿ ಸುಳ್ಯ, ಬಂಟ್ವಾಳ, ಕಡಬ, ಪುತ್ತೂರು ಮತ್ತು ಉಳ್ಳಾಲ ತಾಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಅಧ್ಯಯನ ಪ್ರವಾಸವನ್ನು ಮಂಗಳೂರು ತಾಲೂಕು ತೆಂಕ ಎಡಪದವು ಗ್ರಾಮ ಪಂಚಾಯತ್ ನಲ್ಲಿ ಕಾರ್ಯಾಚರಣೆಯಲ್ಲಿರುವ ಎಂ.ಆರ್.ಎಫ್ ಘಟಕ (ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕ) ಕ್ಕೆ ಏರ್ಪಡಿಸಲಾಯಿತು. ಈ ಮೂಲಕ ಗ್ರಾಮ ಪಂಚಾಯತ್ನಲ್ಲಿ ಸುಸ್ಥಿರ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಲಾಗಿದೆ.

Advertisement

ಏಕ ಬಳಕೆ ಪ್ಲಾಸ್ಟಿಕ್ ನಿಷೇಧ – ಜಾಗೃತಿ : ಈ ಅವಧಿಯಲ್ಲಿ ತಾಲೂಕು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ಜಾಗೃತಿ ಮೂಡಿಸಲಾಯಿತು. ವಿವಿಧ ಗ್ರಾಮ ಪಂಚಾಯತ್ ಗಳು ಕರಪತ್ರ ಸೇರಿದಂತೆ ಮಾಹಿತಿ ಫಲಕಗಳನ್ನು ಅಳವಡಿಸಿದವು. ಸ್ವಚ್ಛ ವಾಹಿನಿಯಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಅಡಿಯೋಗಳನ್ನು ಪ್ರಚಾರ ಮಾಡಲಾಯಿತು.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಮೇಳದತ್ತೊಂದು ಪಯಣ ಮಾಡೋಣವೇ? : ಪುತ್ತೂರಿನಲ್ಲಿ ಹಲಸು ಮೇಳ

ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…

26 mins ago

ಸಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು : ನೈಸರ್ಗಿಕ ಕೃಷಿಯಲ್ಲಿ ದೇಶಿ ಗೋವಿನ ಮಹತ್ವ ಬಹಳ ಮುಖ್ಯ

ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…

47 mins ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

1 hour ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

2 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

3 hours ago