#SwachhSurvekshan2023 | ಗ್ರಾಮೀಣ ಭಾಗದಲ್ಲಿ ಸ್ವಚ್ಛತಾ ಪೇಟೆ ಅಭಿಯಾನ | ಗುತ್ತಿಗಾರು ಪೇಟೆಯಲ್ಲಿ ಕಸ ಎಸೆಯದಂತೆ ಜಾಗೃತಿ | ಕಸ ಎಸೆದರೆ ದಂಡ ವಿಧಿಸುವ ಪ್ಲಾನ್‌ |

July 2, 2023
11:00 PM

ದೇಶದ ವಿವಿದೆಡೆ ಸ್ವಚ್ಛ ಸರ್ವೇಕ್ಷಣ್‌ ಅಭಿಯಾನ ನಡೆಯುತ್ತಿದೆ. ನಗರವನ್ನು ಸ್ವಚ್ಛಮಾಡುವುದು  ಹಾಗೂ ತ್ಯಾಜ್ಯ ವಿಲೇವಾರಿಗೆ ಆದ್ಯತೆ ನೀಡುವುದು ಸೇರಿದಂತೆ ನಗರ ನೈರ್ಮಲ್ಯವನ್ನು ಸುಧಾರಿಸುವ ಕೆಲಸ ನಡೆಸಲಾಗುತ್ತಿದೆ. ಈ ಅಭಿಯಾನದ ಮೂಲಕ ಈ  ವರ್ಷ 10 ಕೋಟಿ ಜನರನ್ನು ತಲಪುವ ನಿರೀಕ್ಷೆ ಇದೆ. ಇದು ವಿಶ್ವದ ಅತಿದೊಡ್ಡ ವಾರ್ಷಿಕ ನಗರ ಸ್ವಚ್ಛತಾ ಅಭಿಯಾನವಾಗಿದೆ.ಈ ಅಭಿಯಾನದ ಮೂಲಕ ಜನರನ್ನು ಸ್ವಚ್ಛತೆಯ ಕಡೆಗೆ ಉತ್ತೇಜಿಸುವುದು  ಮುಖ್ಯ ಉದ್ದೇಶವಾಗಿದೆ. ಅದೇ ಮಾದರಿಯಲ್ಲಿ ಗ್ರಾಮೀಣ ಭಾಗದಲ್ಲಿ ಸ್ವಚ್ಛತಾ ಅಭಿಯಾನ ಆರಂಭವಾಗುತ್ತಿದೆ. ಇದಕ್ಕಾಗಿ ಟಾಸ್ಕ್‌ ಫೋರ್ಸ್‌ ರಚನೆಯನ್ನೂ ಮಾಡಲಾಗಿದೆ. ಈ ಮಾದರಿ ಇನ್ನೊಂದು ಕಡೆಗೂ ಮಾದರಿಯಾಗಬಹುದಾಗಿದೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ “ಸ್ವಚ್ಚ ಗ್ರಾಮ ಗುತ್ತಿಗಾರು” ಪರಿಕಲ್ಪನೆಯ ಟಾಸ್ಕ್ ಫೋರ್ಸ್ ಟೀಮ್ ರಚನೆ ಮಾಡಲಾಗಿದೆ. ಈಗಾಗಲೇ ಮೊದಲ ಹಂತದಲ್ಲಿ ಗುತ್ತಿಗಾರು ನಗರ ಸ್ವಚ್ಛತಾ ಅಭಿಯಾನ ನಡೆಸಿ ಜನರಿಗೆ ಒಂದು ಹಂತದ ಜಾಗೃತಿ ಮಾಡಲಾಗಿದೆ. ಮುಂದೆ ನಿರಂತರ ಸ್ವಚ್ಛತಾ ಅಭಿಯಾನ ನಡೆಯುತ್ತದೆ. ಜೊತೆಗೆ ಕಸ ಎಸೆದವರಿಗೆ ದಂಡ ವಿಧಿಸುವ ಪ್ಲಾನ್‌ ಸಿದ್ಧವಾಗಿದೆ. ಈ ಮೂಲಕ ಗುತ್ತಿಗಾರು ನಗರವನ್ನು ಸಂಪೂರ್ಣ ಸ್ವಚ್ಛ ಪೇಟೆಯನ್ನಾಗಿಸುವ ಯೋಜನೆ ಸಿದ್ಧ ಮಾಡಲಾಗಿದೆ. ಗ್ರಾಮೀಣ ಭಾಗವೊಂದರ ಈ ಯೋಜನೆಗೆ ಜನರಿಂದಲೂ ಸಹಕಾರ ಬೇಕಿದೆ.

ಗುತ್ತಿಗಾರಿನ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು, ಗ್ರಾ. ಪಂ. ಗುತ್ತಿಗಾರು, ಗುತ್ತಿಗಾರು ಗ್ರಂಥಾಲಯ, ವರ್ತಕ ಸಂಘ ಇವುಗಳ ನೇತೃತ್ವ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ತಂಡ ರಚನೆ ಆಗಿದೆ. ಈಗಾಗಲೇ ಮೊದಲ ಹಂತದ ಜಾಗೃತಿಯ ಅಂಗವಾಗಿ  ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಗುತ್ತಿಗಾರು ಪೇಟೆ ಸ್ವಚ್ಛತಾ ಕಾರ್ಯ ಮಾಡಲಾಯಿತು.

ಈ ಸಂದರ್ಭ ಪ್ರತೀ ಅಂಗಡಿಗಳಿಗೆ ತೆರಳಿ ಜಾಗೃತಿ ಮೂಡಿಸಲಾಯಿತು. ಅಂಗಡಿಗಳ ಮುಂದೆ ಗ್ರಾಹಕರು ಕಸ ಎಸೆಯದಂತೆ ವರ್ತಕರೂ ಎಚ್ಚರಿಕೆ ನೀಡಬೇಕು. ಸಾರ್ವಜನಿಕರೂ ಎಲ್ಲೆಂದರಲ್ಲಿ ಕಸ ಎಸೆಯದಂತೆ ಮನವಿ ಮಾಡಿದರು. ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡುವಂತೆ ಹಾಗೂ ಒಕ್ಕೂಟದ ದೀಪ ಸಂಜೀವಿನಿ ಸಂಘದ ಸದಸ್ಯರು ಹೊಲಿದ ಬಟ್ಟೆ ಚೀಲಗಳನ್ನು ಬಳಕೆ ಮಾಡುವಂತೆ ಮನವಿ ಮಾಡಿ, ಕೆಲವು ಅಂಗಡಿಗಳಿಗೆ ಬಟ್ಟೆ ಚೀಲ ವಿತರಣೆ ಮಾಡಲಾಯಿತು.

Advertisement

ಮುಂದೆ ವಾರದಲ್ಲಿ ಒಂದು ದಿನ ಟಾಸ್ಕ್‌ ಫೋರ್ಸ್‌ ತಂಡವು ಗುತ್ತಿಗಾರು ಪೇಟೆಯಲ್ಲಿ ತೆರಳಿ ಜಾಗೃತಿ ಮೂಡಿಸುತ್ತದೆ. ಅದರ ಜೊತೆಗೆ ಗ್ರಾಪಂ ನೇತೃತ್ವದಲ್ಲಿ ಕಸ ಎಸೆಯುವ ಮಂದಿಗೆ ದಂಡ ವಿಧಿಸುವ ಬಗ್ಗೆಯೂ ಯೋಜನೆ ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಅರಿವನ್ನೂ ಜನರಿಗೆ ಮೂಡಿಸುವ ಯೋಜನೆ ಸಿದ್ಧವಾಗಿದೆ. ವರ್ಷ ಪೂರ್ತಿ ಗುತ್ತಿಗಾರು ಪೇಟೆ ಸ್ವಚ್ಚವಾಗಿಡುವುದು ಇದೆಲ್ಲದರ ಉದ್ದೇಶವಾಗಿದೆ.

ಗುತ್ತಿಗಾರು ವರ್ತಕರ ಸಂಘದ ಅಧ್ಯಕ್ಷ ಶಿವರಾಮ ಕರುವಜೆ ನೇತೃತ್ವದಲ್ಲಿ “ಸ್ವಚ್ಚ ಗ್ರಾಮ ಗುತ್ತಿಗಾರು” ಪರಿಕಲ್ಪನೆಯ ಟಾಸ್ಕ್ ಫೋರ್ಸ್ ಟೀಮ್ ರಚಿಸಲಾಗಿದೆ.

 

Advertisement

ಒಂದು ಗ್ರಾಮೀಣ ಭಾಗದಲ್ಲಿ ಸ್ವಚ್ಛ ಪೇಟೆಯ ಅಭಿಯಾನವು ಯಶಸ್ವಿಯಾಗಲು ಆಯಾ ಪಂಚಾಯತ್‌ ಆಡಳಿತದ ಉತ್ಸಾಹದ ಜೊತೆಗೆ ನಾಗರಿಕರ ಸಹಕಾರವೂ ಅಗತ್ಯ ಇದೆ. ಸ್ವಚ್ಛ ಪೇಟೆ, ಸ್ವಚ್ಛ ಭಾರತವು ಪ್ರತೀ ನಾಗರಿಕನ ಜವಾಬ್ದಾರಿಯಾಗಿದೆ.

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

1954 ರಿಂದ 2025 | ಅಡಿಕೆ ಮೇಲೆ ಆಪಾದನೆಗಳು ಬಂದ ದಾರಿ ಯಾವುದೆಲ್ಲಾ…?
May 20, 2025
7:32 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ
May 19, 2025
9:05 PM
by: The Rural Mirror ಸುದ್ದಿಜಾಲ
ಅತೀ ಹೆಚ್ಚು ಪ್ರಮಾಣದ ತೊಗರಿ ಖರೀದಿಸಿದ ವಿಜಯಪುರ ಜಿಲ್ಲೆ
May 19, 2025
8:59 PM
by: The Rural Mirror ಸುದ್ದಿಜಾಲ
ಮಳೆಗೆ ರಾಜಧಾನಿ ಬೆಂಗಳೂರು ಅಸ್ತವ್ಯಸ್ತ | ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ | ಕೋಲಾರದಲ್ಲಿ ಬೆಳೆ ನಷ್ಟ | ಚಿಕ್ಕಮಗಳೂರಿನಲ್ಲಿ ನಿರಂತರ ಮಳೆ
May 19, 2025
8:46 PM
by: The Rural Mirror ಸುದ್ದಿಜಾಲ
1954 ರಿಂದ 2025 | ಅಡಿಕೆ ಮೇಲೆ ಆಪಾದನೆಗಳು ಬಂದ ದಾರಿ ಯಾವುದೆಲ್ಲಾ…?

ಪ್ರಮುಖ ಸುದ್ದಿ

MIRROR FOCUS

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ
May 19, 2025
9:05 PM
by: The Rural Mirror ಸುದ್ದಿಜಾಲ
ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ
May 19, 2025
9:05 PM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |
May 19, 2025
10:15 AM
by: The Rural Mirror ಸುದ್ದಿಜಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ

Editorial pick

ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ
ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ
ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

1954 ರಿಂದ 2025 | ಅಡಿಕೆ ಮೇಲೆ ಆಪಾದನೆಗಳು ಬಂದ ದಾರಿ ಯಾವುದೆಲ್ಲಾ…?
May 20, 2025
7:32 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ
May 19, 2025
9:05 PM
by: The Rural Mirror ಸುದ್ದಿಜಾಲ
ಅತೀ ಹೆಚ್ಚು ಪ್ರಮಾಣದ ತೊಗರಿ ಖರೀದಿಸಿದ ವಿಜಯಪುರ ಜಿಲ್ಲೆ
May 19, 2025
8:59 PM
by: The Rural Mirror ಸುದ್ದಿಜಾಲ
ಮಳೆಗೆ ರಾಜಧಾನಿ ಬೆಂಗಳೂರು ಅಸ್ತವ್ಯಸ್ತ | ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ | ಕೋಲಾರದಲ್ಲಿ ಬೆಳೆ ನಷ್ಟ | ಚಿಕ್ಕಮಗಳೂರಿನಲ್ಲಿ ನಿರಂತರ ಮಳೆ
May 19, 2025
8:46 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19-05-2025 | ಮೇ 24 ರಿಂದ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗುವ ಲಕ್ಷಣ
May 19, 2025
11:35 AM
by: ಸಾಯಿಶೇಖರ್ ಕರಿಕಳ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |
May 19, 2025
10:15 AM
by: The Rural Mirror ಸುದ್ದಿಜಾಲ
ಈ ರಾಶಿಯವರಿಗೆ ಬುಧ ಮತ್ತು ಸೂರ್ಯನಿಂದ ರಾಜಯೋಗ ಪ್ರಾರಂಭವಾಗುತ್ತದೆ
May 19, 2025
7:07 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |
May 18, 2025
2:42 PM
by: ಸಾಯಿಶೇಖರ್ ಕರಿಕಳ
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!
May 18, 2025
10:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

ವಿಶೇಷ ವರದಿ

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ

OPINION

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ವಾರಣಾಸಿ ಎಂಬ ದ್ವಂದ್ವಗಳ ನಗರ
May 16, 2025
1:02 PM
by: ರಮೇಶ್‌ ದೇಲಂಪಾಡಿ
ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ
May 16, 2025
12:40 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?
May 15, 2025
10:06 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group