ದಾವಣಗೆರೆಯಲ್ಲಿ ಅಯೋಜಿಸಲಾಗಿರುವ ಸ್ವದೇಶಿ ಮೇಳಕ್ಕೆ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಚಾಲನೆ ನೀಡಿದರು. ದೇಶಿ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಹಾಗೂ ಜನರಿಗೆ ನೂತನ ಉತ್ಪನ್ನಗಳ ಕುರಿತು ಪರಿಚಯ ಮಾಡುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ.
ಮೇಳದಲ್ಲಿ ವಿವಿಧ ಮಳಿಗೆಗಳನ್ನು ಸ್ಥಾಪಿಸಿದ್ದು, ಜನರಿಗೆ ಹೊಸ ಉತ್ಪನ್ನಗಳ ಕುರಿತು ಮಾಹಿತಿ ನೀಡಲಾಯಿತು. ಕಾರ್ಯಕ್ರಮ ಆಯೋಜಕ ವೀರೇಶ್ ಮಾತನಾಡಿ, ಸ್ವದೇಶಿ ವಸ್ತುಗಳ ಮಾರಾಟ ಮಾಡಲು ಮತ್ತು ವಿವಿಧ ಪ್ರದೇಶಗಳ ಆಹಾರ ಪದ್ಧತಿಯನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಮೇಳ ಅಯೋಜಿಸಲಾಗಿದ್ದು, 200ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ ಎಂದರು. ಮಳಿಗೆ ಮಾಲೀಕ ಮಹೇಶ್ ಶೆಟ್ಟಿ, ಕರಾವಳಿ ಭಾಗದ ಆಹಾರ ಶೈಲಿಯನ್ನು ಜನರಿಗೆ ಪರಿಚಯಿಸುತ್ತಿದ್ದು, ಉತ್ತಮ ಸ್ಪಂದನೆ ನೀಡುತ್ತಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎ ರವೀಂದ್ರನಾಥ್, ಶ್ರೀಕುಮಾರ್ ಸ್ವಾಮಿ ಉಪಸ್ಥಿತರಿದ್ದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…