ದಾವಣಗೆರೆಯಲ್ಲಿ ಅಯೋಜಿಸಲಾಗಿರುವ ಸ್ವದೇಶಿ ಮೇಳಕ್ಕೆ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಚಾಲನೆ ನೀಡಿದರು. ದೇಶಿ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಹಾಗೂ ಜನರಿಗೆ ನೂತನ ಉತ್ಪನ್ನಗಳ ಕುರಿತು ಪರಿಚಯ ಮಾಡುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ.
ಮೇಳದಲ್ಲಿ ವಿವಿಧ ಮಳಿಗೆಗಳನ್ನು ಸ್ಥಾಪಿಸಿದ್ದು, ಜನರಿಗೆ ಹೊಸ ಉತ್ಪನ್ನಗಳ ಕುರಿತು ಮಾಹಿತಿ ನೀಡಲಾಯಿತು. ಕಾರ್ಯಕ್ರಮ ಆಯೋಜಕ ವೀರೇಶ್ ಮಾತನಾಡಿ, ಸ್ವದೇಶಿ ವಸ್ತುಗಳ ಮಾರಾಟ ಮಾಡಲು ಮತ್ತು ವಿವಿಧ ಪ್ರದೇಶಗಳ ಆಹಾರ ಪದ್ಧತಿಯನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಮೇಳ ಅಯೋಜಿಸಲಾಗಿದ್ದು, 200ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ ಎಂದರು. ಮಳಿಗೆ ಮಾಲೀಕ ಮಹೇಶ್ ಶೆಟ್ಟಿ, ಕರಾವಳಿ ಭಾಗದ ಆಹಾರ ಶೈಲಿಯನ್ನು ಜನರಿಗೆ ಪರಿಚಯಿಸುತ್ತಿದ್ದು, ಉತ್ತಮ ಸ್ಪಂದನೆ ನೀಡುತ್ತಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎ ರವೀಂದ್ರನಾಥ್, ಶ್ರೀಕುಮಾರ್ ಸ್ವಾಮಿ ಉಪಸ್ಥಿತರಿದ್ದರು.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…