ದಾವಣಗೆರೆಯಲ್ಲಿ ಅಯೋಜಿಸಲಾಗಿರುವ ಸ್ವದೇಶಿ ಮೇಳಕ್ಕೆ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಚಾಲನೆ ನೀಡಿದರು. ದೇಶಿ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಹಾಗೂ ಜನರಿಗೆ ನೂತನ ಉತ್ಪನ್ನಗಳ ಕುರಿತು ಪರಿಚಯ ಮಾಡುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ.
ಮೇಳದಲ್ಲಿ ವಿವಿಧ ಮಳಿಗೆಗಳನ್ನು ಸ್ಥಾಪಿಸಿದ್ದು, ಜನರಿಗೆ ಹೊಸ ಉತ್ಪನ್ನಗಳ ಕುರಿತು ಮಾಹಿತಿ ನೀಡಲಾಯಿತು. ಕಾರ್ಯಕ್ರಮ ಆಯೋಜಕ ವೀರೇಶ್ ಮಾತನಾಡಿ, ಸ್ವದೇಶಿ ವಸ್ತುಗಳ ಮಾರಾಟ ಮಾಡಲು ಮತ್ತು ವಿವಿಧ ಪ್ರದೇಶಗಳ ಆಹಾರ ಪದ್ಧತಿಯನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಮೇಳ ಅಯೋಜಿಸಲಾಗಿದ್ದು, 200ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ ಎಂದರು. ಮಳಿಗೆ ಮಾಲೀಕ ಮಹೇಶ್ ಶೆಟ್ಟಿ, ಕರಾವಳಿ ಭಾಗದ ಆಹಾರ ಶೈಲಿಯನ್ನು ಜನರಿಗೆ ಪರಿಚಯಿಸುತ್ತಿದ್ದು, ಉತ್ತಮ ಸ್ಪಂದನೆ ನೀಡುತ್ತಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎ ರವೀಂದ್ರನಾಥ್, ಶ್ರೀಕುಮಾರ್ ಸ್ವಾಮಿ ಉಪಸ್ಥಿತರಿದ್ದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…