ಸ್ವರಶ್ರೀ 2022 | ಸಂಗೀತವೆಂಬುದು ಒಲಿಯುವ ವಿದ್ಯೆ – ವಿದ್ವಾನ್ ಕಾಂಚನ ಎ. ಈಶ್ವರ ಭಟ್

April 27, 2022
9:20 AM

ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ ‘ಸ್ವರಶ್ರೀ 2022’ ಭಾನುವಾರ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು.

Advertisement

ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ವಾನ್ ಕಾಂಚನ ಎ. ಈಶ್ವರ ಭಟ್ ಮಾತನಾಡಿ ‘ಸಂಗೀತ ಶಾಸ್ತ್ರವನ್ನು ಕಲಿತರೆ ಸಾಲದು ಪ್ರಯೋಗಾನುಭವ ಬಹಳ ಮುಖ್ಯ. ಸಂಗೀತವೆಂಬುದು ದೈವೀ ವಿದ್ಯೆ. ಗುರುವಿನ ಮೂಲಕ ಮಾತ್ರ ಕಲಿಯಬಹುದಾದ ವಿದ್ಯೆ. ಶಿಷ್ಯನಿಗೆ ಈ ವಿದ್ಯೆ ಎಷ್ಟರ ಮಟ್ಟಿಗೆ ಸಿದ್ಧಿಸಬಹುದೆಂಬುದು ಗುರು-ಶಿಷ್ಯರಿಬ್ಬರಿಗೂ ತಿಳಿದಿರುವುದಿಲ್ಲ. ಶಿಷ್ಯನಿಗೆ ಎಷ್ಟು ಪ್ರಾಪ್ತಿಯಾಗುವುದೋ ಅದು ಭಗವಂತನಿಗೆ ಮಾತ್ರ ತಿಳಿದಿರುತ್ತದೆ. ಸಂಗೀತ ಬರುವುದಲ್ಲ; ಅದು ಒಲಿಯುವುದು. ಸಂಗೀತವೆಂಬುದು ಕೇವಲ ಕಲಿಯುವ ವಿದ್ಯೆಯಲ್ಲ ಬದಲಿಗೆ ಅದು ಒಲಿಯುವ ವಿದ್ಯೆ. ಭಕ್ತಿ, ಶ್ರದ್ಧೆ, ಸಾಧನೆಗಳಿಂದ ಸಂಗೀತ ಸಿದ್ಧಿಸುತ್ತದೆ ಎಂದರು.

ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಸತ್ಯನಾರಾಯಣ ಭಟ್ರಕೋಡಿ ಮತ್ತು  ವಿಜಯಶ್ರೀ ಈಶ್ವರ ಭಟ್ ಉಪಸ್ಥಿತರಿದ್ದರು. ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ  ಧನ್ಯಶ್ರೀ ಮತ್ತು ಕು. ಆತ್ಮಶ್ರೀ ಹಾಗೂ ಮೃದಂಗದಲ್ಲಿ ವಿದ್ವಾನ್ ಶ್ಯಾಮ ಭಟ್ ಅರಂಬೂರು ಮತ್ತು ಮಾಸ್ಟರ್ ವೆಂಕಟ ಯಶಸ್ವಿ ಸಹಕರಿಸಿದರು.

ವಾರ್ಷಿಕೋತ್ಸವದ ಪ್ರಧಾನ ಸಂಗೀತ ಕಛೇರಿಯನ್ನು ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದರಾದ ವಿದ್ವಾನ್ ಮೈಸೂರು ಎನ್ ಶ್ರೀನಾಥ್ ಅವರು ನಡೆಸಿಕೊಟ್ಟರು. ಅವರಿಗೆ ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿದ್ವಾನ್ ವೇಣುಗೋಪಾಲ ಶ್ಯಾನುಭೋಗ್, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ. ಈಶ್ವರ ಭಟ್ ಮತ್ತು ಡಾ. ಅಕ್ಷಯನಾರಾಯಣ ಕಾಂಚನ ಅವರು ಸಹಕರಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

6,100 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಚಾಲನೆ | ದೇಶದಲ್ಲಿ ಅಭಿವೃದ್ಧಿ ಪರಿಕಲ್ಪನೆಗೆ ಹೊಸ ವೇಗ
October 21, 2024
7:26 PM
by: ದ ರೂರಲ್ ಮಿರರ್.ಕಾಂ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ
ಕೊಟ್ಟಿಗೆಯಲಿ ತುಂಬಿ ತುಳುಕುವ ಹಸು ಕರುಗಳು : ವೃದ್ಧಾಪ್ಯದಲ್ಲೂ ಮಲೆನಾಡು ಗಿಡ್ಡ ತಳಿ ಹಸು ಸಾಕುತ್ತಿರುವ ಅಜ್ಜಿ : ಬತ್ತದ ಜೀವನ ಉತ್ಸಾಹ
May 5, 2024
8:45 PM
by: The Rural Mirror ಸುದ್ದಿಜಾಲ
ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group