ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ ‘ಸ್ವರಶ್ರೀ 2023’ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು.
ವೈದ್ಯರಾದ ಡಾ. ಕೆ. ಪಿ. ಜಯಪ್ರಕಾಶ್ ಕೊಂಕೋಡಿ ಮತ್ತು ಡಾ. ಮಹೇಶ್ ಭಟ್ ಕಿಳಿಂಗಾರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಕಾರ್ಯದರ್ಶಿ ಸತ್ಯನಾರಾಯಣ ಭಟ್ರಕೋಡಿ, ವಿದ್ಯಾರ್ಥಿಗಳಾದ ಚಿರಾಗ್, ಶ್ರೀಗೌರಿ ಮತ್ತು ಸ್ಮೃತಿ ಉಪಸ್ಥಿತರಿದ್ದರು. ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್ನಲ್ಲಿ ವಿಜೇತ ಸುಬ್ರಹ್ಮಣ್ಯ ಹಾಗೂ ಆತ್ಮಶ್ರೀ ಮತ್ತು ಮೃದಂಗದಲ್ಲಿ ವೆಂಕಟ ಯಶಸ್ವಿ ಸಹಕರಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel

