ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ ‘ಸ್ವರಶ್ರೀ 2022’ ಭಾನುವಾರ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ವಾನ್ ಕಾಂಚನ ಎ. ಈಶ್ವರ ಭಟ್ ಮಾತನಾಡಿ ‘ಸಂಗೀತ ಶಾಸ್ತ್ರವನ್ನು ಕಲಿತರೆ ಸಾಲದು ಪ್ರಯೋಗಾನುಭವ ಬಹಳ ಮುಖ್ಯ. ಸಂಗೀತವೆಂಬುದು ದೈವೀ ವಿದ್ಯೆ. ಗುರುವಿನ ಮೂಲಕ ಮಾತ್ರ ಕಲಿಯಬಹುದಾದ ವಿದ್ಯೆ. ಶಿಷ್ಯನಿಗೆ ಈ ವಿದ್ಯೆ ಎಷ್ಟರ ಮಟ್ಟಿಗೆ ಸಿದ್ಧಿಸಬಹುದೆಂಬುದು ಗುರು-ಶಿಷ್ಯರಿಬ್ಬರಿಗೂ ತಿಳಿದಿರುವುದಿಲ್ಲ. ಶಿಷ್ಯನಿಗೆ ಎಷ್ಟು ಪ್ರಾಪ್ತಿಯಾಗುವುದೋ ಅದು ಭಗವಂತನಿಗೆ ಮಾತ್ರ ತಿಳಿದಿರುತ್ತದೆ. ಸಂಗೀತ ಬರುವುದಲ್ಲ; ಅದು ಒಲಿಯುವುದು. ಸಂಗೀತವೆಂಬುದು ಕೇವಲ ಕಲಿಯುವ ವಿದ್ಯೆಯಲ್ಲ ಬದಲಿಗೆ ಅದು ಒಲಿಯುವ ವಿದ್ಯೆ. ಭಕ್ತಿ, ಶ್ರದ್ಧೆ, ಸಾಧನೆಗಳಿಂದ ಸಂಗೀತ ಸಿದ್ಧಿಸುತ್ತದೆ ಎಂದರು.
ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಸತ್ಯನಾರಾಯಣ ಭಟ್ರಕೋಡಿ ಮತ್ತು ವಿಜಯಶ್ರೀ ಈಶ್ವರ ಭಟ್ ಉಪಸ್ಥಿತರಿದ್ದರು. ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್ನಲ್ಲಿ ಧನ್ಯಶ್ರೀ ಮತ್ತು ಕು. ಆತ್ಮಶ್ರೀ ಹಾಗೂ ಮೃದಂಗದಲ್ಲಿ ವಿದ್ವಾನ್ ಶ್ಯಾಮ ಭಟ್ ಅರಂಬೂರು ಮತ್ತು ಮಾಸ್ಟರ್ ವೆಂಕಟ ಯಶಸ್ವಿ ಸಹಕರಿಸಿದರು.
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…