ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ ‘ಸ್ವರಶ್ರೀ 2022’ ಭಾನುವಾರ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ವಾನ್ ಕಾಂಚನ ಎ. ಈಶ್ವರ ಭಟ್ ಮಾತನಾಡಿ ‘ಸಂಗೀತ ಶಾಸ್ತ್ರವನ್ನು ಕಲಿತರೆ ಸಾಲದು ಪ್ರಯೋಗಾನುಭವ ಬಹಳ ಮುಖ್ಯ. ಸಂಗೀತವೆಂಬುದು ದೈವೀ ವಿದ್ಯೆ. ಗುರುವಿನ ಮೂಲಕ ಮಾತ್ರ ಕಲಿಯಬಹುದಾದ ವಿದ್ಯೆ. ಶಿಷ್ಯನಿಗೆ ಈ ವಿದ್ಯೆ ಎಷ್ಟರ ಮಟ್ಟಿಗೆ ಸಿದ್ಧಿಸಬಹುದೆಂಬುದು ಗುರು-ಶಿಷ್ಯರಿಬ್ಬರಿಗೂ ತಿಳಿದಿರುವುದಿಲ್ಲ. ಶಿಷ್ಯನಿಗೆ ಎಷ್ಟು ಪ್ರಾಪ್ತಿಯಾಗುವುದೋ ಅದು ಭಗವಂತನಿಗೆ ಮಾತ್ರ ತಿಳಿದಿರುತ್ತದೆ. ಸಂಗೀತ ಬರುವುದಲ್ಲ; ಅದು ಒಲಿಯುವುದು. ಸಂಗೀತವೆಂಬುದು ಕೇವಲ ಕಲಿಯುವ ವಿದ್ಯೆಯಲ್ಲ ಬದಲಿಗೆ ಅದು ಒಲಿಯುವ ವಿದ್ಯೆ. ಭಕ್ತಿ, ಶ್ರದ್ಧೆ, ಸಾಧನೆಗಳಿಂದ ಸಂಗೀತ ಸಿದ್ಧಿಸುತ್ತದೆ ಎಂದರು.
ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಸತ್ಯನಾರಾಯಣ ಭಟ್ರಕೋಡಿ ಮತ್ತು ವಿಜಯಶ್ರೀ ಈಶ್ವರ ಭಟ್ ಉಪಸ್ಥಿತರಿದ್ದರು. ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್ನಲ್ಲಿ ಧನ್ಯಶ್ರೀ ಮತ್ತು ಕು. ಆತ್ಮಶ್ರೀ ಹಾಗೂ ಮೃದಂಗದಲ್ಲಿ ವಿದ್ವಾನ್ ಶ್ಯಾಮ ಭಟ್ ಅರಂಬೂರು ಮತ್ತು ಮಾಸ್ಟರ್ ವೆಂಕಟ ಯಶಸ್ವಿ ಸಹಕರಿಸಿದರು.
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…