Advertisement
Categories: Uncategorized

ಸ್ವರಶ್ರೀ 2022 | ಸಂಗೀತವೆಂಬುದು ಒಲಿಯುವ ವಿದ್ಯೆ – ವಿದ್ವಾನ್ ಕಾಂಚನ ಎ. ಈಶ್ವರ ಭಟ್

Share

ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ ‘ಸ್ವರಶ್ರೀ 2022’ ಭಾನುವಾರ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ವಾನ್ ಕಾಂಚನ ಎ. ಈಶ್ವರ ಭಟ್ ಮಾತನಾಡಿ ‘ಸಂಗೀತ ಶಾಸ್ತ್ರವನ್ನು ಕಲಿತರೆ ಸಾಲದು ಪ್ರಯೋಗಾನುಭವ ಬಹಳ ಮುಖ್ಯ. ಸಂಗೀತವೆಂಬುದು ದೈವೀ ವಿದ್ಯೆ. ಗುರುವಿನ ಮೂಲಕ ಮಾತ್ರ ಕಲಿಯಬಹುದಾದ ವಿದ್ಯೆ. ಶಿಷ್ಯನಿಗೆ ಈ ವಿದ್ಯೆ ಎಷ್ಟರ ಮಟ್ಟಿಗೆ ಸಿದ್ಧಿಸಬಹುದೆಂಬುದು ಗುರು-ಶಿಷ್ಯರಿಬ್ಬರಿಗೂ ತಿಳಿದಿರುವುದಿಲ್ಲ. ಶಿಷ್ಯನಿಗೆ ಎಷ್ಟು ಪ್ರಾಪ್ತಿಯಾಗುವುದೋ ಅದು ಭಗವಂತನಿಗೆ ಮಾತ್ರ ತಿಳಿದಿರುತ್ತದೆ. ಸಂಗೀತ ಬರುವುದಲ್ಲ; ಅದು ಒಲಿಯುವುದು. ಸಂಗೀತವೆಂಬುದು ಕೇವಲ ಕಲಿಯುವ ವಿದ್ಯೆಯಲ್ಲ ಬದಲಿಗೆ ಅದು ಒಲಿಯುವ ವಿದ್ಯೆ. ಭಕ್ತಿ, ಶ್ರದ್ಧೆ, ಸಾಧನೆಗಳಿಂದ ಸಂಗೀತ ಸಿದ್ಧಿಸುತ್ತದೆ ಎಂದರು.

ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಸತ್ಯನಾರಾಯಣ ಭಟ್ರಕೋಡಿ ಮತ್ತು  ವಿಜಯಶ್ರೀ ಈಶ್ವರ ಭಟ್ ಉಪಸ್ಥಿತರಿದ್ದರು. ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ  ಧನ್ಯಶ್ರೀ ಮತ್ತು ಕು. ಆತ್ಮಶ್ರೀ ಹಾಗೂ ಮೃದಂಗದಲ್ಲಿ ವಿದ್ವಾನ್ ಶ್ಯಾಮ ಭಟ್ ಅರಂಬೂರು ಮತ್ತು ಮಾಸ್ಟರ್ ವೆಂಕಟ ಯಶಸ್ವಿ ಸಹಕರಿಸಿದರು.

ವಾರ್ಷಿಕೋತ್ಸವದ ಪ್ರಧಾನ ಸಂಗೀತ ಕಛೇರಿಯನ್ನು ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದರಾದ ವಿದ್ವಾನ್ ಮೈಸೂರು ಎನ್ ಶ್ರೀನಾಥ್ ಅವರು ನಡೆಸಿಕೊಟ್ಟರು. ಅವರಿಗೆ ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿದ್ವಾನ್ ವೇಣುಗೋಪಾಲ ಶ್ಯಾನುಭೋಗ್, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ. ಈಶ್ವರ ಭಟ್ ಮತ್ತು ಡಾ. ಅಕ್ಷಯನಾರಾಯಣ ಕಾಂಚನ ಅವರು ಸಹಕರಿಸಿದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago