Advertisement
Categories: Uncategorized

ಸ್ವರಶ್ರೀ 2022 | ಸಂಗೀತವೆಂಬುದು ಒಲಿಯುವ ವಿದ್ಯೆ – ವಿದ್ವಾನ್ ಕಾಂಚನ ಎ. ಈಶ್ವರ ಭಟ್

Share

ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ ‘ಸ್ವರಶ್ರೀ 2022’ ಭಾನುವಾರ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ವಾನ್ ಕಾಂಚನ ಎ. ಈಶ್ವರ ಭಟ್ ಮಾತನಾಡಿ ‘ಸಂಗೀತ ಶಾಸ್ತ್ರವನ್ನು ಕಲಿತರೆ ಸಾಲದು ಪ್ರಯೋಗಾನುಭವ ಬಹಳ ಮುಖ್ಯ. ಸಂಗೀತವೆಂಬುದು ದೈವೀ ವಿದ್ಯೆ. ಗುರುವಿನ ಮೂಲಕ ಮಾತ್ರ ಕಲಿಯಬಹುದಾದ ವಿದ್ಯೆ. ಶಿಷ್ಯನಿಗೆ ಈ ವಿದ್ಯೆ ಎಷ್ಟರ ಮಟ್ಟಿಗೆ ಸಿದ್ಧಿಸಬಹುದೆಂಬುದು ಗುರು-ಶಿಷ್ಯರಿಬ್ಬರಿಗೂ ತಿಳಿದಿರುವುದಿಲ್ಲ. ಶಿಷ್ಯನಿಗೆ ಎಷ್ಟು ಪ್ರಾಪ್ತಿಯಾಗುವುದೋ ಅದು ಭಗವಂತನಿಗೆ ಮಾತ್ರ ತಿಳಿದಿರುತ್ತದೆ. ಸಂಗೀತ ಬರುವುದಲ್ಲ; ಅದು ಒಲಿಯುವುದು. ಸಂಗೀತವೆಂಬುದು ಕೇವಲ ಕಲಿಯುವ ವಿದ್ಯೆಯಲ್ಲ ಬದಲಿಗೆ ಅದು ಒಲಿಯುವ ವಿದ್ಯೆ. ಭಕ್ತಿ, ಶ್ರದ್ಧೆ, ಸಾಧನೆಗಳಿಂದ ಸಂಗೀತ ಸಿದ್ಧಿಸುತ್ತದೆ ಎಂದರು.

ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಸತ್ಯನಾರಾಯಣ ಭಟ್ರಕೋಡಿ ಮತ್ತು  ವಿಜಯಶ್ರೀ ಈಶ್ವರ ಭಟ್ ಉಪಸ್ಥಿತರಿದ್ದರು. ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ  ಧನ್ಯಶ್ರೀ ಮತ್ತು ಕು. ಆತ್ಮಶ್ರೀ ಹಾಗೂ ಮೃದಂಗದಲ್ಲಿ ವಿದ್ವಾನ್ ಶ್ಯಾಮ ಭಟ್ ಅರಂಬೂರು ಮತ್ತು ಮಾಸ್ಟರ್ ವೆಂಕಟ ಯಶಸ್ವಿ ಸಹಕರಿಸಿದರು.

ವಾರ್ಷಿಕೋತ್ಸವದ ಪ್ರಧಾನ ಸಂಗೀತ ಕಛೇರಿಯನ್ನು ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದರಾದ ವಿದ್ವಾನ್ ಮೈಸೂರು ಎನ್ ಶ್ರೀನಾಥ್ ಅವರು ನಡೆಸಿಕೊಟ್ಟರು. ಅವರಿಗೆ ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿದ್ವಾನ್ ವೇಣುಗೋಪಾಲ ಶ್ಯಾನುಭೋಗ್, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ. ಈಶ್ವರ ಭಟ್ ಮತ್ತು ಡಾ. ಅಕ್ಷಯನಾರಾಯಣ ಕಾಂಚನ ಅವರು ಸಹಕರಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

4 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

7 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

16 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

18 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

19 hours ago