ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ ‘ಸ್ವರಶ್ರೀ 2022’ ಭಾನುವಾರ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ವಾನ್ ಕಾಂಚನ ಎ. ಈಶ್ವರ ಭಟ್ ಮಾತನಾಡಿ ‘ಸಂಗೀತ ಶಾಸ್ತ್ರವನ್ನು ಕಲಿತರೆ ಸಾಲದು ಪ್ರಯೋಗಾನುಭವ ಬಹಳ ಮುಖ್ಯ. ಸಂಗೀತವೆಂಬುದು ದೈವೀ ವಿದ್ಯೆ. ಗುರುವಿನ ಮೂಲಕ ಮಾತ್ರ ಕಲಿಯಬಹುದಾದ ವಿದ್ಯೆ. ಶಿಷ್ಯನಿಗೆ ಈ ವಿದ್ಯೆ ಎಷ್ಟರ ಮಟ್ಟಿಗೆ ಸಿದ್ಧಿಸಬಹುದೆಂಬುದು ಗುರು-ಶಿಷ್ಯರಿಬ್ಬರಿಗೂ ತಿಳಿದಿರುವುದಿಲ್ಲ. ಶಿಷ್ಯನಿಗೆ ಎಷ್ಟು ಪ್ರಾಪ್ತಿಯಾಗುವುದೋ ಅದು ಭಗವಂತನಿಗೆ ಮಾತ್ರ ತಿಳಿದಿರುತ್ತದೆ. ಸಂಗೀತ ಬರುವುದಲ್ಲ; ಅದು ಒಲಿಯುವುದು. ಸಂಗೀತವೆಂಬುದು ಕೇವಲ ಕಲಿಯುವ ವಿದ್ಯೆಯಲ್ಲ ಬದಲಿಗೆ ಅದು ಒಲಿಯುವ ವಿದ್ಯೆ. ಭಕ್ತಿ, ಶ್ರದ್ಧೆ, ಸಾಧನೆಗಳಿಂದ ಸಂಗೀತ ಸಿದ್ಧಿಸುತ್ತದೆ ಎಂದರು.
ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಸತ್ಯನಾರಾಯಣ ಭಟ್ರಕೋಡಿ ಮತ್ತು ವಿಜಯಶ್ರೀ ಈಶ್ವರ ಭಟ್ ಉಪಸ್ಥಿತರಿದ್ದರು. ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್ನಲ್ಲಿ ಧನ್ಯಶ್ರೀ ಮತ್ತು ಕು. ಆತ್ಮಶ್ರೀ ಹಾಗೂ ಮೃದಂಗದಲ್ಲಿ ವಿದ್ವಾನ್ ಶ್ಯಾಮ ಭಟ್ ಅರಂಬೂರು ಮತ್ತು ಮಾಸ್ಟರ್ ವೆಂಕಟ ಯಶಸ್ವಿ ಸಹಕರಿಸಿದರು.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…