Advertisement
MIRROR FOCUS

ಸ್ವರಸಾಮ್ರಾಟ ಪಂಡಿತ್ ಬಸವರಾಜ ರಾಜಗುರು ಬದುಕಿನ ವೃತ್ತಾಂತ ‘ನಾ ರಾಜಗುರು’ ಸಂಗೀತ ನಾಟಕ | ಅಜ್ಜನ ಹಾದಿಯಲ್ಲಿ ಮೊಮ್ಮಗ ವಿಶ್ವರಾಜನ ನಾಟಕ ಪಯಣ‌ |

Share

ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು(Pt.Basavaraja Rajaguru) ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ವತಿಯಿಂದ ಕರ್ನಾಟಕ ಸಂಭ್ರಮ- 50 ವಿಶೇಷ ಕಾರ್ಯಕ್ರಮದ ಅಂಗವಾಗಿ ಪಂ. ಬಸವರಾಜ ರಾಜಗುರು ಬದುಕಿನ ವೃತ್ತಾಂತ ಕುರಿತ ‘ನಾ ರಾಜಗುರು’ ಸಂಗೀತ ನಾಟಕ(Musical Drama) ಮತ್ತು ತಬಲಾ ಸೋಲೋ ವಾದನ(Tabla Solo Vadana) ಕಾರ್ಯಕ್ರಮವನ್ನು ಶುಕ್ರವಾರ ಧಾರವಾಡ ನಗರದ ಡಾ. ಅಣ್ಣಾಜಿರಾವ ಶಿರೂರ ಸೃಜನಾ ರಂಗಮಂದಿರದಲ್ಲಿ ಆಯೋಜಿಸಲಾಯಿತು.

‘ನಾ ರಾಜಗುರು’ ಎಂಬ ಏಕವ್ಯಕ್ತಿ ನಾಟಕ  ಪ್ರಯೋಗಗೊಂಡಿತು. ‘ಎನ್ನ ಕಾಯವ ದಂಡಿಗೆಯ ಮಾಡಯ್ಯ’ ‘ನುಡಿದರೆ ಮುತ್ತಿನ ಹಾರದಂತಿರಬೇಕು, ‘ಎನಗಿಂತ ಕಿರಿಯರಿಲ್ಲ’ ‘ಮಡಕೆಯ ಮಾಡುವರೆ, ‘ವಚನದಲ್ಲಿ ನಾಮಾಮೃತವ ತುಂಬಿ’ ‘ನಂಬರು ನೆಚ್ಚರು’ ಮೊದಲಾದ ವಚನಗಳನ್ನು ಕರ್ಣಾನಂದಗೊಳಿಸಿದವರು ಬಸವರಾಜ ರಾಜಗುರು. ಸಹ ಕಲಾವಿದರರಾಗಿ ಜಯತೀರ್ಥ ಪಂಚಮುಖಿ ತಬಲಾ, ರಾಘವ ಕಮ್ಮಾರ ಹಾರ್ಮೋನಿಯಂ ನುಡಿಸಿದರು. ಇಂತಹ ರಾಜಗುರು ಅವರ ಸಂಗೀತ ಬದುಕನ್ನು ಹಿಡಿದಿಟ್ಟ ನಾಟಕವಿದು. ಅದರಲ್ಲೂ ರಾಜಗುರು ಅವರ ಮೊಮ್ಮಗ ವಿಶ್ವರಾಜ ಅವರೇ ಬಸವರಾಜರ ಪಾತ್ರಧಾರಿಯಾಗಿ ಬಿಚ್ಚಿಟ್ಟಿದ್ದು ಗಮನಾರ್ಹ. ಹಾಡುತ್ತ, ಅಭಿನಯಿಸುತ್ತ ಪ್ರೇಕ್ಷಕರಿಗೆ ಬೋರಾಗದ ಹಾಗೆ ನೋಡಿಕೊಂಡರು. ನಾಟಕ ಶುರುವಾಗುವುದು ರಾಜಗುರು ಅವರ ಹುಟ್ಟಿನ ವಿವರಗಳಿಂದ. ಅವರು ಹುಟ್ಟಿದ್ದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯಲಿವಾಳದಲ್ಲಿ.

ಬಸವರಾಜರ ತಂದೆ ಮಹಾಂತಸ್ವಾಮಿ. ಕರ್ನಾಟಕ ಸಂಗೀತ ಕಲಿತಿದ್ದ ಪಿಟೀಲು ನುಡಿಸುತ್ತಿದ್ದ ಮಹಾಂತಸ್ವಾಮಿಗಳು ತಮ್ಮ ಮಗನಿಗೆ ಮೊದಲ ಗುರುವಾದರು. ನಂತರ ವಾಮನರಾವ್ ಮಾಸ್ತರ ನಾಟಕ ಕಂಪೆನಿ, ಶಿವಯೋಗ ಮಂದಿರ, ಪಂಚಾಕ್ಷರಿ ಗವಾಯಿಗಳು, ಸವಾಯಿ ಗಂಧರ್ವರು, ಪಂ.ನೀಲಕಂಠ ಮಿರಜಕರ ಬುವಾ, ಉಸ್ತಾದ್ ವಹೀದಾಖಾನ್. ಗದುಗಿನ ಪಂಚಾಕ್ಷರಿ ಗವಾಯಿಗಳ ಸಂಚಾರಿ ಸಂಗೀತ ಪಾಠಶಾಲೆಯೊಳಗೆ ಕಲಿತ ಅವರು ನಂತರ ಮುಂಬೈಗೆ ತೆರಳುತ್ತಾರೆ. ಅಲ್ಲಿಂದ ಅವರ ಸಂಗೀತ ಪಯಣ ಮುಂದುವರಿಯುತ್ತದೆ. ಇದರೊಂದಿಗೆ ರಾಜಗುರು ಅವರು ಹಾಡುತ್ತಿದ್ದ ಚೀಜ್, ವಚನಗಳನ್ನು ವಿಶ್ವರಾಜ ಹಾಡುತ್ತ ರಂಗದ ಮೇಲೆ ಮಿಂಚುತ್ತಾರೆ. ವಿಶ್ವರಾಜ ಅವರು ಬಸವರಾಜ ರಾಜಗುರು ಅವರ ಮೊಮ್ಮಗ ಎನ್ನುವುದು ಗೊತ್ತಾಗುತ್ತದೆ. ಸರಳ ರಂಗಸಜ್ಜಿಕೆಯಲ್ಲಿ ತಂಬೂರಕ್ಕೆ ತೂಗು ಹಾಕಿದ ಟೋಪಿ, ಕೋಟು, ಸ್ಕಾರ್ಫ್ ಅನ್ನು ತಮ್ಮ ಅಜ್ಜನ ಹಾಗೆ ಹಾಕಿಕೊಂಡು ವಿಶ್ವರಾಜ ಮಾತನಾಡುತ್ತಾರೆ.

ವಿಶ್ವರಾಜ ಅವರು ಹಿಂದೂಸ್ತಾನಿ ಸಂಗೀತ ಕಲಿಯುತ್ತಿದ್ದಾರೆ ಜೊತೆಗೆ, ಹೆಗ್ಗೋಡಿನ ನೀನಾಸಂ ರಂಗಶಿಕ್ಷಣ ಕೇಂದ್ರದಲ್ಲಿ ಪದವಿ ಪಡೆದಿದ್ದಾರೆ. ಹೀಗಾಗಿ ರಾಜಗುರು ಅವರ ಸಂಗೀತ ಬದುಕಿನ ಕುರಿತು ನಾಟಕವಾಗಿಸುವ ಪ್ರಯತ್ನ ಚೆನ್ನಾಗಿದೆ. ಇನ್ನು ಆಟಮಾಟ ತಂಡದ ಮೂಲಕ ಗಮನಾರ್ಹ ನಾಟಕಗಳನ್ನು ಕೊಟ್ಟವರು ಮಹಾದೇವ ಹಜೆಪದ, ಈ ನಾಟಕವೂ ಪ್ರಮುಖವಾದುದು. ಸಂಗೀತ ಮತ್ತು ನಟನೆಯನ್ನು ಒಟ್ಟಿಗೇ ಕೊಟ್ಟ ನಾಟಕವಿದು. ತಮ್ಮ ಅಜ್ಜವರ ಬದುಕಿನ ವೃತ್ತಾಂತವನ್ನು ಇನ್ನಷ್ಟು ಅಂದಗೊಳಿಸಿ ಸಾರ್ಥಕಗೊಳಿಸಬೇಕಾದುದು ವಿಶ್ವರಾಜರ ಹೆಗಲ ಮೇಲಿದೆ. ಇದರೊಂದಿಗೆ ಪುಣೆಯ ಸುಪ್ರಸಿದ್ಧ ತಬಲಾ ಕಲಾವಿದ ಪಂ. ರಾಮದಾಸ್ ಪಳಸುಲೆ ಅವರಿಂದ ತಬಲಾ ಸೋಲೋ ವಾದನ ಕಾರ್ಯಕ್ರಮ ನಡೆಯಿತು. ಸಹ ಕಲಾವಿದರರಾಗಿ ಪುಣೆಯ ಅಭಿಷೇಕ ಸೀನಕರ ಹಾರ್ಮೋನಿಯಂ ಸಾಥ್ ನೀಡಿದರು.

Advertisement
Swarasamrata Pt. Basavaraja Rajaguru (Pt.Basavaraja Rajaguru) National Memorial Trustee as part of Karnataka Celebration-50 Special Program Pt. 'Na Rajaguru' Musical Drama and Tabla Solo Vadana program on the life story of Basavaraja Rajaguru.It was organized at Annajirava Shirura Creative Theatre.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!

ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…

7 hours ago

ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…

8 hours ago

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

16 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

17 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

17 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

17 hours ago