Advertisement
MIRROR FOCUS

ತೈವಾನ್‌ನಲ್ಲಿ “ಸಿಹಿ ಅಡಿಕೆ” – “ಅಡಿಕೆ ಕ್ಯಾಂಡಿ” ಈಗ ಚರ್ಚೆ : ಮಕ್ಕಳಿಗೆ ನಿಷೇಧ ಬೇಡಿಕೆ ಹೆಚ್ಚಳ

Share

ತೈವಾನ್‌ನಲ್ಲಿ ಅಡಿಕೆ ಮೌಲ್ಯವರ್ಧನೆ ವಿವಿಧ ಮಾದರಿಯಲ್ಲಿ ನಡೆಯುತ್ತಿತ್ತು. ಇದೀಗ  ಸಿಹಿ ಮತ್ತು ವಿವಿಧ ಫ್ಲೇವರ್‌ಗಳಲ್ಲಿ ತಯಾರಾಗುತ್ತಿರುವ ಅಡಿಕೆ ಉತ್ಪನ್ನಗಳು  ಚರ್ಚೆಗೆ ಕಾರಣವಾಗಿದೆ. ಈ ಉತ್ಪನ್ನಗಳು ಯುವಕರನ್ನು ಆಕರ್ಷಿಸುತ್ತಿದ್ದು, ಮಕ್ಕಳಿಗೆ ಸಂಪೂರ್ಣ ನಿಷೇಧ ತರಬೇಕು ಎಂದು ಸರ್ಕಾರವನ್ನು ಕೆಲ ಸಂಘಟನೆಗಳು ಒತ್ತಾಯಿಸಿದೆ.

ಮಾರುಕಟ್ಟೆಗಳು ಮತ್ತು ಆನ್‌ಲೈನ್‌ ವೇದಿಕೆಗಳಲ್ಲಿ ಬೆರಿ, ಕಾಫಿ ಹಾಗೂ ಹಣ್ಣಿನ ರುಚಿಯ ಅಡಿಕೆ ಕ್ಯಾಂಡಿಗಳು ಹೆಚ್ಚಾಗಿ ಮಾರಾಟವಾಗುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಯುವಜನರಲ್ಲಿ ಅಡಿಕೆ ಬಳಕೆ ಹೆಚ್ಚುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

ವಿಶ್ವ ಮಟ್ಟದ ಸಂಶೋಧನೆಗಳು ಅಡಿಕೆ ಚಪ್ಪರಿಸುವುದು ಮೌಖಿಕ ಕ್ಯಾನ್ಸರ್‌, ಗಂಟಲು ಕ್ಯಾನ್ಸರ್‌ ಹಾಗೂ ಆಹಾರನಾಳದ ಕ್ಯಾನ್ಸರ್‌ಗಳಿಗೆ ಸಂಬಂಧ ಹೊಂದಿರುವುದನ್ನು ಸೂಚಿಸುತ್ತಿವೆ. ಆದ್ದರಿಂದ ಈ ರೀತಿಯ ಆಕರ್ಷಕ ಉತ್ಪನ್ನಗಳ ಮೇಲೆ ನಿಯಂತ್ರಣ ಅಗತ್ಯ ಎಂದು ಅಭಿಪ್ರಾಯ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಅಡಿಕೆ ಹಾನಿಕಾರಕ ಎಂಬ ಕಾನೂನು ಮಸೂದೆ ಇನ್ನೂ ಜಾರಿಗೆ ಬರದಿರುವುದರಿಂದ ಹೊಸ ಉತ್ಪನ್ನಗಳ ಮಾರಾಟಕ್ಕೆ ಸಂಪೂರ್ಣ ನಿಯಂತ್ರಣ ಇಲ್ಲ. ವಿಶೇಷವಾಗಿ ಮಕ್ಕಳು ಮತ್ತು ಗರ್ಭಿಣಿಯರನ್ನು ರಕ್ಷಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಹೆಚ್ಚಾಗಿದೆ.

ಜಾಗತಿಕ ಮಟ್ಟದಲ್ಲಿ ಅಡಿಕೆ ಬಳಕೆಯ ಕುರಿತು ಆರೋಗ್ಯ ಚರ್ಚೆಗಳು ಹೆಚ್ಚುತ್ತಿರುವುದು ಭಾರತ ಸೇರಿದಂತೆ ಅಡಿಕೆ ಉತ್ಪಾದಕ ಪ್ರದೇಶಗಳಿಗೆ ದೀರ್ಘಕಾಲಿಕವಾಗಿ ಮಾರುಕಟ್ಟೆ ಹಾಗೂ ಬ್ರ್ಯಾಂಡ್‌ ಇಮೇಜ್‌ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಅಡಿಕೆಯ ಮೌಲ್ಯವರ್ಧನೆ ಉತ್ಪನ್ನಗಳ ಅಭಿವೃದ್ಧಿಯ ಜೊತೆಗೆ ಆರೋಗ್ಯ ಜಾಗೃತಿ ಮತ್ತು ನಿಯಂತ್ರಣ ಕ್ರಮಗಳ ಕಡೆಗೂ ಗಮನ ಬೇಕಿದೆ. ಹೀಗಾಗಿ ಅಡಿಕೆ ಮೌಲ್ಯವರ್ಧನೆಯೂ ಈಗ ವೇಗ ಪಡೆಯುತ್ತಿಲ್ಲ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Flavoured and sweetened betel nut products in Taiwan have sparked a health debate, with anti-cancer groups demanding a ban for minors. The issue highlights growing global concerns over betel nut consumption and possible long-term impacts on markets and regulations in producing regions.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

4 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

11 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago