Advertisement
MIRROR FOCUS

ಕೇಂದ್ರ ಸರ್ಕಾರದಿಂದ ತೆಂಗು ಬೆಳೆಗಾರರಿಗೆ ಸಿಹಿಸುದ್ದಿ | ​ಕೊಬ್ಬರಿ ಬೆಲೆ ಹೆಚ್ಚಳ | ಜೆಡಿಎಸ್ ನಿಯೋಗ ಮನವಿಗೆ ಅಸ್ತು ಎಂದ ಮೋದಿ |

Share

ತೆಂಗುಬೆಳೆಗಾರರು(coconut farmer) ಕೊಬ್ಬರಿಗೆ ಬೆಳೆ ಕುಸಿತದಿಂದ ಹೈರಾಣಾಗಿದ್ದರು. ಇತ್ತೀಚೆಗೆ ತೆಂಗು ಬೆಳೆಗಾರರ ಸಂಕಷ್ಟದ ಬಗ್ಗೆ ಗಮನಸೆಳೆಯಲು  ಪ್ರಧಾನಿ ನರೇಂದ್ರ ಮೋದಿಯವರನ್ನ(PM Modi) ಭೇಟಿಯಾಗಿ ಜೆಡಿಎಸ್(JDS) ನಿಯೋಗ ಮನವಿ ಮಾಡಿತ್ತು. ಈ ಮನವಿಗೆ ಸ್ಪಂದಿಸಿದ ಮೋದಿ ಸರ್ಕಾರ ಕೊಬ್ಬರಿ ಬೆಲೆ(Copra Rate) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟದಲ್ಲಿ(Central Cabinet) ತೀರ್ಮಾನ ಮಾಡಲಾಗಿದ್ದು, ಕ್ವಿಂಟಾಲ್‌ ಕೊಬ್ಬರಿಗೆ 300 ರೂಪಾಯಿ, ಉಂಡೆ ಕೊಬ್ಬರಿಗೆ ಎಂಎಸ್‌ಪಿ ದರ 250 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಏರಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈ ಕುರಿತಂತೆ ವಿಧಾನಸಭೆಯಲ್ಲೂ ಸಾಕಷ್ಟು ಬಾರಿ ಚರ್ಚೆ ನಡೆದಿತ್ತು.ಅದರಂತೆ ಕೇಂದ್ರ ಸರ್ಕಾರ, ಪ್ರತಿ ಕ್ವಿಂಟಾಲ್‌ ಕೊಬ್ಬರಿಗೆ 300 ರೂಪಾಯಿ ಏರಿಕೆ ಮಾಡಿದೆ. ಕೇಂದ್ರ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಸ್ವಾಗತಿಸಿದ್ದು, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ. ಕೊಬ್ಬರಿ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ತೀರ್ಮಾನ ಮಾಡಿದ್ದು, ಕ್ವಿಂಟಾಲ್‌ ಕೊಬ್ಬರಿಗೆ 300 ರೂಪಾಯಿ, ಉಂಡೆ ಕೊಬ್ಬರಿಗೆ ಎಂಎಸ್‌ಪಿ ದರ 250 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಎಂಎಸ್​​ಪಿ ಹೆಚ್ಚಳದಿಂದ ತೆಂಗು ಬೆಳೆಗಾರರಿಗೆ ಉತ್ತಮ ಆದಾಯವನ್ನು ಲಭಿಸುತ್ತದೆ. ಅಲ್ಲದೇ ದೇಶೀಯವಾಗಿ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಉತ್ತೇಜಿಸುತ್ತದೆ ಎಂದು ಕೇಂದ್ರ ತಿಳಿಸಿದೆ.

ಕೇಂದ್ರ ಸಚಿವ ಸಂಪುಟದಲ್ಲಿ 2024ರಲ್ಲಿ ಪ್ರತಿ ಕ್ವಿಂಟಲ್‌ಗೆ ₹11,160 ಮತ್ತು ಚೆಂಡು ಕೊಬ್ಬರಿಗೆ ₹12,000 ಕ್ಕೆ ಎಮ್‌ಎಸ್‌ಪಿ (ಕನಿಷ್ಠ ಬೆಂಬಲ ಬೆಲೆ)ಯನ್ನು ನಿಗದಿಪಡಿಸಿದೆ. ಹೊಸ MSP ದರ ಹಿಂದಿನ ವರ್ಷಕ್ಕಿಂತ ಮಿಲ್ಲಿಂಗ್ ಕೊಬ್ಬರಿಗೆ ಪ್ರತಿ ಕ್ವಿಂಟಲ್‌ಗೆ ₹300 ಮತ್ತು ಚೆಂಡು ಕೊಬ್ಬರಿಗೆ ₹250 ಹೆಚ್ಚಳ ಆಗಿದೆ.

ಪ್ರಸಕ್ತ ಹಂಗಾಮಿನಲ್ಲಿ ಸುಮಾರು 90,000 ರೈತರಿಂದ ಸರ್ಕಾರ ₹1,493 ಕೋಟಿ ವೆಚ್ಚದಲ್ಲಿ ದಾಖಲೆ ಪ್ರಮಾಣದ ಕೊಬ್ಬರಿಯನ್ನು (1.33 ಲಕ್ಷ ಮೆಟ್ರಿಕ್ ಟನ್‌ಗಳಿಗಿಂತ ಹೆಚ್ಚು ಅಥವಾ ಹಿಂದಿನ ಹಂಗಾಮಿಗಿಂತ 227% ಹೆಚ್ಚು) ಸಂಗ್ರಹಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಿಲ್ಲಿಂಗ್ ಕೊಬ್ಬರಿನಿಂದ ಎಣ್ಣೆ ತೆಗೆಯಲು ಬಳಸಲಾಗುತ್ತದೆ. ಆದರೆ ಚೆಂಡು/ಖಾದ್ಯ ಕೊಬ್ಬರಿಯನ್ನು ಆಹಾರ ಮತ್ತು ಧಾರ್ಮಿಕ ಉದ್ದೇಶಗಳಿಗಾಗಿ ಬಳಸಲಾಗುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago