Advertisement
MIRROR FOCUS

ಉತ್ತರ ಕರ್ನಾಟಕದ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ | ಧಾರವಾಡಕ್ಕೆ ಮಾವು ಅಭಿವೃದ್ಧಿ ಕೇಂದ್ರ ಮಂಜೂರು

Share

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅನೇಕ ಆಹಾರ ಪದಾರ್ಥಗಳನ್ನು ಬೆಳೆಯಲಾಗುತ್ತದೆ. ಹಣ್ಣು, ಸೊಪ್ಪು- ತರಕಾರಿ, ದವಸ, ಧಾನ್ಯ, ಬೇಳೆ ಕಾಳು ಮುಂತಾದ ಹೆಚ್ಚಿನ ಬೆಳೆಗಳು ಇಲ್ಲಿ ಆದಾಯ. ರಾಜ್ಯದ ಅಲ್ಲದೆ ದೇಶದ ಇತರ ಭಾಗಗಳಿಗೂ ಇವುಗಳ ರಫ್ತು ನಡೆಯುತ್ತದೆ. ಅದಕ್ಕೆ ತಕ್ಕ ಮಾರುಕಟ್ಟೆ ವ್ಯವಸ್ಥೆಇದ್ದರೆ ರೈತರಿಗೆ ಇನ್ನು ಅನುಕೂಲ. ಅದರಲ್ಲೂ ಉತ್ತರ ಕರ್ನಾಟಕದ ಬಹುಭಾಗದಲ್ಲಿ ಮಾವು ಬೆಳೆ ಬೆಳೆಯಲಾಗುತ್ತದೆ. ಇದೀಗ  ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಸಂತಸ ಸುದ್ದಿ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಅನುಮತಿ ನೀಡಿ ಅನುದಾನ ಮಂಜೂರು ಮಾಡಿದೆ. ಇದು ಈ ಭಾಗದಲ್ಲಿ ಮಾವು ಕೃಷಿ ಅಭಿವೃದ್ಧಿಗೆ ಸಹಕಾರಿಯಾಗಲಿದೆ.

ಇತ್ತೀಚೆಗೆ ಹವಾಮಾನ ಬದಲಾವಣೆಯಿಂದಾಗಿ ಸುಸ್ಥಿರ ಮಾರುಕಟ್ಟೆ ಇಲ್ಲದೇ ಮಾವು ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಎಷ್ಟೋ ರೈತರು ಇರುವ ತೋಟಗಳನ್ನೇ ತೆರವುಗೊಳಿಸುವ ನಿರ್ಧಾರಕ್ಕೂ ಬಂದಿದ್ದರು. ಆದರೆ ಧಾರವಾಡ ಆಫೂಸ್ ಮಾವಿಗೆ ವಿದೇಶಗಳಲ್ಲಿಯೂ ಬೇಡಿಕೆ ಇದೆ. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸಲು ಕೇಂದ್ರದ ನಿರ್ಧಾರ ಪೂರಕವಾಗಲಿದೆ. ಉತ್ತರ ಕರ್ನಾಟಕದಲ್ಲಿ ವಿವಿಧ ಮಾವಿನ ತಳಿಗಳ ಬೆಳೆಯುವ ಅಗತ್ಯತೆ ಇದ್ದು, ಮಾವು ತಳಿಗಳ ಅಭಿವೃದ್ಧಿ, ಸಂಶೋಧನೆ, ಪ್ರಾತ್ಯಕ್ಷಿಕೆ, ರೈತರಿಗೆ ತರಬೇತಿ, ಮಾವಿನ ಹಣ್ಣು ಮತ್ತು ಮಾವಿನ ಕಾಯಿ ರಫ್ತು ವ್ಯವಸ್ಥೆ ಒದಗಿಸುವ ಕೆಲಸಗಳನ್ನು ಈ ಕೇಂದ್ರ ಮಾಡಲಿದೆ.

ಧಾರವಾಡ ಪಕ್ಕದ ಜಿಲ್ಲೆಗಳಿಗೂ ಅನುಕೂಲ: ಧಾರವಾಡ ಜಿಲ್ಲೆಯಲ್ಲಿ 8,400 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆ ಇದೆ. ಅಕ್ಕಪಕ್ಕದ ಜಿಲ್ಲೆಗಳಾಗಿರುವ ಕೊಪ್ಪಳ, ಉತ್ತರ ಕನ್ನಡ, ಬೆಳಗಾವಿ, ಹಾವೇರಿ ಮತ್ತು ಗದಗ ಭಾಗದಲ್ಲಿ ಮಾವಿನ ತೋಟಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಅಂದಾಜು 30 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವಿನ ತೋಟಗಳಿವೆ. ಹೀಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕರ್ನಾಟಕಕ್ಕೆ ಮಾವು ಅಭಿವೃದ್ಧಿ ಕೇಂದ್ರ ಮಂಜೂರು ಮಾಡಿದೆ.  ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಧಾರವಾಡ ಜಿಲ್ಲೆಯಲ್ಲಿರುವ ಕುಂಭಾಪುರ ಫಾರ್ಮ್​ನಲ್ಲಿ ಈಗಾಗಲೇ ಒಂದು ಎಕರೆ ಜಾಗ ಗುರುತಿಸಲಾಗಿದೆ. ಒಟ್ಟು 7.5 ಕೋಟಿ ರೂಪಾಯಿ ಅನುದಾನ ಕೇಂದ್ರದಿಂದ ಮಂಜೂರಾಗಿದ್ದು, ಇನ್ನೆರಡು ತಿಂಗಳಿನಲ್ಲಿ ಕೇಂದ್ರ ಸ್ಥಾಪನೆಯ ಕಾರ್ಯಗಳು ಆರಂಭವಾಗಲಿವೆ.

“ಈ ಭಾಗದ ಮಾವು ರೈತರಿಗೆ ಅನುಕೂಲವಾಗಲಿ ಎಂದು ನಮ್ಮ ಇಲಾಖೆಯಿಂದ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೆವು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿತ್ತು. ಇದಕ್ಕೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಮಾವು ಅಭಿವೃದ್ಧಿ ಕೇಂದ್ರಕ್ಕೆ ಕೇಂದ್ರ ಅನುಮತಿ ನೀಡಿ, ಅನುದಾನ ಮಂಜೂರು ಮಾಡಿದೆ. ಮಾವು ಇಳುವರಿ ಹೆಚ್ಚಿಸಲು, ಸಂಶೋಧನೆ, ಕೋಲ್ಡ್ ಸ್ಟೋರೇಜ್, ಮಾರುಕಟ್ಟೆ ಸೌಲಭ್ಯ ಸೇರಿದಂತೆ ಇನ್ನಿತರೆ ಅನುಕೂಲಗಳನ್ನು ಬೆಳೆಗಾರರಿಗೆ ಈ ಕೇಂದ್ರದ ಮೂಲಕ ಒದಗಿಸಲಾಗುವುದು” ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕಾಶಿನಾಥ ಭದ್ರಣ್ಣವರ ಮಾಹಿತಿ ನೀಡಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

5 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

6 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

10 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

19 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

19 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

20 hours ago