ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಅನೇಕ ಆಹಾರ ಪದಾರ್ಥಗಳನ್ನು ಬೆಳೆಯಲಾಗುತ್ತದೆ. ಹಣ್ಣು, ಸೊಪ್ಪು- ತರಕಾರಿ, ದವಸ, ಧಾನ್ಯ, ಬೇಳೆ ಕಾಳು ಮುಂತಾದ ಹೆಚ್ಚಿನ ಬೆಳೆಗಳು ಇಲ್ಲಿ ಆದಾಯ. ರಾಜ್ಯದ ಅಲ್ಲದೆ ದೇಶದ ಇತರ ಭಾಗಗಳಿಗೂ ಇವುಗಳ ರಫ್ತು ನಡೆಯುತ್ತದೆ. ಅದಕ್ಕೆ ತಕ್ಕ ಮಾರುಕಟ್ಟೆ ವ್ಯವಸ್ಥೆಇದ್ದರೆ ರೈತರಿಗೆ ಇನ್ನು ಅನುಕೂಲ. ಅದರಲ್ಲೂ ಉತ್ತರ ಕರ್ನಾಟಕದ ಬಹುಭಾಗದಲ್ಲಿ ಮಾವು ಬೆಳೆ ಬೆಳೆಯಲಾಗುತ್ತದೆ. ಇದೀಗ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಸಂತಸ ಸುದ್ದಿ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಅನುಮತಿ ನೀಡಿ ಅನುದಾನ ಮಂಜೂರು ಮಾಡಿದೆ. ಇದು ಈ ಭಾಗದಲ್ಲಿ ಮಾವು ಕೃಷಿ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
ಇತ್ತೀಚೆಗೆ ಹವಾಮಾನ ಬದಲಾವಣೆಯಿಂದಾಗಿ ಸುಸ್ಥಿರ ಮಾರುಕಟ್ಟೆ ಇಲ್ಲದೇ ಮಾವು ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಎಷ್ಟೋ ರೈತರು ಇರುವ ತೋಟಗಳನ್ನೇ ತೆರವುಗೊಳಿಸುವ ನಿರ್ಧಾರಕ್ಕೂ ಬಂದಿದ್ದರು. ಆದರೆ ಧಾರವಾಡ ಆಫೂಸ್ ಮಾವಿಗೆ ವಿದೇಶಗಳಲ್ಲಿಯೂ ಬೇಡಿಕೆ ಇದೆ. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸಲು ಕೇಂದ್ರದ ನಿರ್ಧಾರ ಪೂರಕವಾಗಲಿದೆ. ಉತ್ತರ ಕರ್ನಾಟಕದಲ್ಲಿ ವಿವಿಧ ಮಾವಿನ ತಳಿಗಳ ಬೆಳೆಯುವ ಅಗತ್ಯತೆ ಇದ್ದು, ಮಾವು ತಳಿಗಳ ಅಭಿವೃದ್ಧಿ, ಸಂಶೋಧನೆ, ಪ್ರಾತ್ಯಕ್ಷಿಕೆ, ರೈತರಿಗೆ ತರಬೇತಿ, ಮಾವಿನ ಹಣ್ಣು ಮತ್ತು ಮಾವಿನ ಕಾಯಿ ರಫ್ತು ವ್ಯವಸ್ಥೆ ಒದಗಿಸುವ ಕೆಲಸಗಳನ್ನು ಈ ಕೇಂದ್ರ ಮಾಡಲಿದೆ.
ಧಾರವಾಡ ಪಕ್ಕದ ಜಿಲ್ಲೆಗಳಿಗೂ ಅನುಕೂಲ: ಧಾರವಾಡ ಜಿಲ್ಲೆಯಲ್ಲಿ 8,400 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆ ಇದೆ. ಅಕ್ಕಪಕ್ಕದ ಜಿಲ್ಲೆಗಳಾಗಿರುವ ಕೊಪ್ಪಳ, ಉತ್ತರ ಕನ್ನಡ, ಬೆಳಗಾವಿ, ಹಾವೇರಿ ಮತ್ತು ಗದಗ ಭಾಗದಲ್ಲಿ ಮಾವಿನ ತೋಟಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಅಂದಾಜು 30 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವಿನ ತೋಟಗಳಿವೆ. ಹೀಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕರ್ನಾಟಕಕ್ಕೆ ಮಾವು ಅಭಿವೃದ್ಧಿ ಕೇಂದ್ರ ಮಂಜೂರು ಮಾಡಿದೆ. ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಧಾರವಾಡ ಜಿಲ್ಲೆಯಲ್ಲಿರುವ ಕುಂಭಾಪುರ ಫಾರ್ಮ್ನಲ್ಲಿ ಈಗಾಗಲೇ ಒಂದು ಎಕರೆ ಜಾಗ ಗುರುತಿಸಲಾಗಿದೆ. ಒಟ್ಟು 7.5 ಕೋಟಿ ರೂಪಾಯಿ ಅನುದಾನ ಕೇಂದ್ರದಿಂದ ಮಂಜೂರಾಗಿದ್ದು, ಇನ್ನೆರಡು ತಿಂಗಳಿನಲ್ಲಿ ಕೇಂದ್ರ ಸ್ಥಾಪನೆಯ ಕಾರ್ಯಗಳು ಆರಂಭವಾಗಲಿವೆ.
“ಈ ಭಾಗದ ಮಾವು ರೈತರಿಗೆ ಅನುಕೂಲವಾಗಲಿ ಎಂದು ನಮ್ಮ ಇಲಾಖೆಯಿಂದ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೆವು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿತ್ತು. ಇದಕ್ಕೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಮಾವು ಅಭಿವೃದ್ಧಿ ಕೇಂದ್ರಕ್ಕೆ ಕೇಂದ್ರ ಅನುಮತಿ ನೀಡಿ, ಅನುದಾನ ಮಂಜೂರು ಮಾಡಿದೆ. ಮಾವು ಇಳುವರಿ ಹೆಚ್ಚಿಸಲು, ಸಂಶೋಧನೆ, ಕೋಲ್ಡ್ ಸ್ಟೋರೇಜ್, ಮಾರುಕಟ್ಟೆ ಸೌಲಭ್ಯ ಸೇರಿದಂತೆ ಇನ್ನಿತರೆ ಅನುಕೂಲಗಳನ್ನು ಬೆಳೆಗಾರರಿಗೆ ಈ ಕೇಂದ್ರದ ಮೂಲಕ ಒದಗಿಸಲಾಗುವುದು” ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕಾಶಿನಾಥ ಭದ್ರಣ್ಣವರ ಮಾಹಿತಿ ನೀಡಿದರು.
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…